ಕ್ಯಾನ್ಸರ್‌ಗೆ ಕಲಬುರಗಿಯಲ್ಲೇ ಉತ್ತಮ ಚಿಕಿತ್ಸೆ: ನಿಗ್ಗುಡಗಿ


Team Udayavani, Nov 27, 2017, 10:29 AM IST

gul-2.jpg

ಕಲಬುರಗಿ: ಜೀವಮಾರಕ ಕ್ಯಾನ್ಸರ್‌ ರೋಗದ ಚಿಕಿತ್ಸೆಗೆ ಇನ್ನು ಬೆಂಗಳೂರು, ಹೈದ್ರಾಬಾದ ಸೇರಿದಂತೆ ದೂರದ ಊರುಗಳಿಗೆ ಕಲಬುರಗಿ ಜನತೆ ಹೋಗುವ ಅಗತ್ಯವಿಲ್ಲ. ಎಚ್‌ಸಿಜಿ (ಹೆಲ್ತ್‌ ಕೇರ್‌ ಗ್ಲೋಬಲ್‌)ಆಸ್ಪತ್ರೆಯಲ್ಲೇ ಬ್ರಾಕಿ ಥೆರಪಿ ಯಂತ್ರ ಸ್ಥಾಪಿಸಲಾಗಿದೆ ಎಂದು ರೆಡಿಯೇಷನ್‌ ಆಂಕೊಲಾಜಿ ತಜ್ಞ ಡಾ| ಶಾಂತಲಿಂಗ ನಿಗ್ಗುಡಗಿ ಹೇಳಿದರು.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಖೂಬಾಪ್ಲಾಟ್‌ನಲ್ಲಿರುವ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಬ್ರಾಕಿಥೆರಪಿ ಯಂತ್ರ ಅಳವಡಿಸಲಾಗಿದೆ. ಈ ಯಂತ್ರದಿಂದ ಕ್ಯಾನ್ಸರ್‌ ಯಾವ ಹಂತದಲ್ಲಿದೆ. ದೇಹದ ಯಾವ ಜಾಗೆಯಲ್ಲಿದೆ. ಅದಕ್ಕೆ ನಿಖರವಾಗಿ ವಿಕೀರಣ (ರೇಡಿಯೇಷನ್‌) ಚಿಕಿತ್ಸೆ ನೀಡುವ ಯಂತ್ರ ಇದಾಗಿದೆ. ಇದರಿಂದ ಇನ್ನು ಮುಂದೆ ಅತ್ಯುತ್ತಮ ಚಿಕಿತ್ಸೆ ನೀಡಬಹುದು ಎಂದರು.

ಇಂತಹ ಯಂತ್ರ ಸುತ್ತಲಿನ ಯಾವುದೇ ಜಿಲ್ಲೆಯಲ್ಲಿ ಇಲ್ಲ. ಸೊಲ್ಲಾಪುರದಲ್ಲೂ ಇಲ್ಲ. ಹುಬ್ಬಳ್ಳಿಯಲ್ಲಿ ಇದ್ದರೂ ನಮ್ಮ ಆಸ್ಪತ್ರೆಯಲ್ಲಿಲ್ಲ. ಬ್ರಾಕಿಥೆರಪಿಯನ್ನು ವಿಶೇಷವಾಗಿ ಪ್ರೊಸ್ಟೇಟ್‌, ತಲೆ ಕುತ್ತಿಗೆ, ನಾಲಿಗೆ, ಪಿತ್ತಕೋಶ, ಗರ್ಭಕೋಶ
ಮತ್ತು ಸ್ತನ ಕ್ಯಾನ್ಸರ್‌ಗೆ ಪರಿಣಾಮಕಾರಿ ಚಿಕಿತ್ಸೆ ನೀಡಬಹುದಾಗಿದೆ. ಕ್ಯಾನ್ಸರ್‌ ಪೀಡಿತ ಭಾಗದ ಮೇಲೆ ನಿಖರವಾಗಿ ಮತ್ತು ಹೆಚ್ಚಿನ ಪರಿಣಾಮ ಬೀರುವುದಿಲ್ಲ. ವಿಕಿರಣಗಳನ್ನು ಹಾಯಿಸಿ ಬ್ರಾಕಿ ಥೆರಪಿ ಚಿಕಿತ್ಸೆ ನೀಡಲಾಗುತ್ತದೆ. ಇದರಿಂದ ಯಾವುದೇ ಅಡ್ಡ ಪರಿಣಾಮಗಳು ಸಂಭವಿಸುವುದಿಲ್ಲ ಎಂದರು.

ಈ ಚಿಕಿತ್ಸೆಯನ್ನು ಮೊದಲು ಬೆಂಗಳೂರಿನಂತಹ ಮಹಾನಗರದಲ್ಲಿ ಮಾತ್ರ ನೀಡಲಾಗುತ್ತಿತ್ತು. ಆದರೆ ಈಗ ಕಲಬುರಗಿ ನಗರದಲ್ಲಿ ಮೊದಲ ಬಾರಿಗೆ ಈ ಯಂತ್ರ ಅಳವಡಿಸಲಾಗಿದೆ. ಇದರಿಂದ ಕಲಬುರಗಿ ಸುತ್ತಲಿನ ಜಿಲ್ಲೆಗಳಲ್ಲಿನ ರೋಗಿಗಳು ಬೆಂಗಳೂರಿಗೆ ಹೋಗುವ ಅಗತ್ಯವಿಲ್ಲ. ಅತಿ ಕಡಿಮೆ ಹಣದಲ್ಲಿ ಚಿಕಿತ್ಸೆ ದೊರೆಯಲಿದೆ. ಆರೇಳು ಸಾವಿರದಲ್ಲಿ ಒಂದು ಸಿಟಿಂಗ್‌ ಮಾಡಬಹುದು. ಇಂತಹ ಮೂರ್‍ನಾಲ್ಕು ಸಿಟಿಂಗ್‌ಗಳಿಂದ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದರು.

ಇದರಿಂದ ಬಡ ರೋಗಿಗಳ ಹಣ ಮತ್ತು ಸಮಯ ಉಳಿತಾಯವಾಗಲಿದೆ. ಎಚ್‌ಸಿಜಿ ಆಸ್ಪತ್ರೆಯಲ್ಲಿ ಸರಕಾರದ ಯಶಸ್ವಿನಿ, ವಾಜಪೇಯಿ ಆರೋಗ್ಯಶ್ರೀ ಯೋಜನೆಗಳ ಲಾಭವನ್ನು ಫಲಾನುಭವಿಗಳು ಪಡೆಯಬಹುದಾಗಿದೆ
ಎಂದರು. 

ಇದಕ್ಕೂ ಮುನ್ನ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಬ್ರಾಕಿ ಥೆರಪಿ ಯಂತ್ರ ಉದ್ಘಾಟಿಸಲಾಯಿತು. ಡಾ| ನಂದೀಶಕುಮಾರ ಜೀವಣಗಿ, ಡಾ| ಶರಣ ಹಟ್ಟಿ, ಡಾ| ಸುದರ್ಶನ ಲಾಖೆ, ಎಚ್‌ಸಿಜಿ ಸೆಂಟರ್‌ ಮುಖ್ಯಸ್ಥ ಡಾ| ಅಬ್ದುಲ್‌ ರಹೀಮ್‌ ಸೆಲ್ಸ್‌ ಮತ್ತು ಮಾರ್ಕೆಟಿಂಗ್‌ ಮುಖ್ಯಸ್ಥ ಮಹೇಶ ಎಸ್‌., ಮಾರ್ಕೆಟಿಂಗ್‌ ಮುಕೇಶ ಇದ್ದರು.

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.