ಅಪಘಾತದ ಗಾಯಾಳುಗಳ ಚಿನ್ನ ದೋಚಿದವನ ಸೆರೆ
Team Udayavani, Nov 29, 2017, 11:35 AM IST
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸಹಾಯ ಮಾಡುವ ನೆಪದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರ ನಿವಾಸಿ ಕಾರು ಚಾಲಕ ಸೋಮಶೇಖರ್ ಬಂಧಿತ. ಈತನಿಂದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಆರೋಪಿ ನ.3ರಂದು ಕುಣಿಗಲ್ ರಸ್ತೆಯ ಅಮೃತ್ತೂರು ಠಾಣೆ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದ ಬಳಿ ವೇಣುಗೋಪಾಲ ಎಂಬುವರ ಇನೋವಾ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಈ ವೇಳೆ ತನ್ನ ಸ್ನೇಹಿತರ ಜತೆ ಗಾಯಾಳುಗಳ ನೆರವಿಗೆ ಬಂದಿದ್ದ ಆರೋಪಿ, ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯರ ಸರ ಹಾಗೂ ಪುರುಷರ ಬ್ರಾಸ್ಲೆಟ್, ಉಂಗುರ ಸೇರಿದಂತೆ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನ.3ರಂದು ಚನ್ನರಾಯಪಟ್ಟಣದಿಂದ ನಗರಕ್ಕೆ ವೇಣುಗೋಪಾಲ್ ಕುಟುಂಬ ಕಾರಿನಲ್ಲಿ ಬರುತ್ತಿದ್ದಾಗ ಕುಣಿಗಲ್ ರಸ್ತೆ ಬಳಿ ನಡೆದ ಲಾರಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಸ್ನೇಹಿತರೊಂದಿಗೆ ಪ್ರವಾಸ ಮುಗಿಸಿ ಟೆಂಪೊ ಟ್ರಾವೆಲರ್ನಲ್ಲಿ ಬರುತ್ತಿದ್ದ ಸೋಮಶೇಖರ್ ಗಾಯಾಳುಗಳಿಗೆ ನೆರವಾಗುವ ನೆಪದಲ್ಲಿ 288.03 ಗ್ರಾಂ. ಚಿನ್ನಾಭರಣ ದೋಚಿ, ಕೆಲ ದಿನಗಳ ಕಾಲ ಆಭರಣಗಳನ್ನು ಮನೆಯಲ್ಲಿ ಇರಿಸಿಕೊಂಡಿಸಿದ್ದ. ಈ ವಿಷಯ ಆತನ ಜೊತೆಗಿದ್ದ ಸ್ನೇಹಿತರಿಗೂ ತಿಳಿದಿರಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಗಿರಿವಿ ಇಡುವಾಗ ಸಿಕ್ಕಿಬಿದ್ದ: ಸುಮಾರು 23 ದಿನಗಳ ಕಾಲ ಆಭರಣಗಳನ್ನು ಮನೆಯಲ್ಲೇ ಇರಿಸಿಕೊಂಡಿದ್ದ ಆರೋಪಿ, ನ.26ರಂದು ಹುಣಸೆಮಾರನಹಳ್ಳಿಯಲ್ಲಿರುವ ಗಿರವಿ ಅಂಗಡಿಯಲ್ಲಿ ಚಿನ್ನಾಭರಣಗಳನ್ನು ಗಿರವಿ ಇಡಲು ಮುಂದಾಗಿದ್ದ. ಈ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಆರೋಪಿ ಸಿಕ್ಕಿ ಬಿದಿದ್ದಾನೆ. ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ
Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!
Crime: ಬುಲೆಟ್ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್ಗಳಿಗೆ ಬೆಂಕಿ ಹಚ್ಚಿದವ ಸೆರೆ
Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.