ಕಾನೂನು ಹೋರಾಟಕ್ಕೆ ಸಿದ್ಧ
Team Udayavani, Nov 29, 2017, 11:35 AM IST
ಬೆಂಗಳೂರು: ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ನಟರಾಜನ್ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಐಷಾರಾಮಿ ಜೀವನ ಕಲ್ಪಿಸಲು ಲಂಚದ ಬೇಡಿಕೆ ಆರೋಪ ಸಂಬಂಧ ಮಾನನಷ್ಠ ಮೊಕದ್ದಮೆ ದಾಖಲಿಸಿರುವ ಮಾಜಿ ಡಿಜಿ ಸತ್ಯನಾರಾಯಣರಾವ್ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದು ಡಿಐಜಿ ರೂಪಾ ತಿಳಿಸಿದ್ದಾರೆ.
ಜೈಲಿನಲ್ಲಿ ನಡೆಯುತ್ತಿರುವ ಅವ್ಯಹಾರ ಹಾಗೂ ಶಶಿಕಲಾ ನಟರಾಜನ್ಗೆ ವಿಶೇಷ ಸೌಲಭ್ಯಕ್ಕಾಗಿ 2 ಕೋಟಿ ರೂಗಳನ್ನು ಸತ್ಯನಾರಾಯಣರಾವ್ ಪಡೆದಿರುವ ಆರೋಪ ಸಂಬಂಧ ಅವರಿಗೇ ರೂಪಾ ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ 20 ಕೋಟಿ ರೂಪಾಯಿ ಪರಿಹಾರ ಕೋರಿ ಸಿಟಿ ಸಿವಿಲ್ ಕೋರ್ಟ್ನಲ್ಲಿ ಸತ್ಯನಾರಾಯಣರಾವ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಇದಕ್ಕೆ ಪ್ರತಿಯಿಸಿರುವ ರೂಪಾ, ಮಾನನಷ್ಟ ಪ್ರಕರಣ ಸಂಬಂಧ ನ್ಯಾಯಾಲಯದಿಂದ ಯಾವುದೇ ನೋಟಿಸ್ ಬಂದಿಲ್ಲ. ಮಾಧ್ಯಮಗಳ ಮೂಲಕ ವಿಚಾರ ತಿಳಿದು ಕೊಂಡಿದ್ದೇನೆ. ಒಂದು ವೇಳೆ ನೋಟಿಸ್ ಬಂದರೆ ಕೋರ್ಟ್ನಲ್ಲೇ ಸೂಕ್ತ ಉತ್ತರ ನೀಡುತ್ತೇನೆ ಎಂದರು. ಸರ್ಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಆ ಇಲಾಖೆಯ ಅಧಿಕಾರಿಯಾಗಿ ನಾನು ತನಿಖೆ ನಡೆಸಿ ವರದಿ ನೀಡಿದ್ದೇನೆ.
ಹೀಗಾಗಿ ಇದು ಮಾನನಷ್ಠ ಮೊಕದ್ದಮೆ ವ್ಯಾಪ್ತಿಗೆ ಬರುವುದಿಲ್ಲ. ಜತೆಗೆ ಜೈಲು ಅಕ್ರಮಗಳ ಬಗ್ಗೆ ಸರ್ಕಾರ ರಚಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ತಂಡ , ನೀಡಿದ ವರದಿ ಕೂಡ ನಾನು ಕೊಟ್ಟ ವರದಿಗೆ ಪೂರಕವಾಗಿದೆ ಎಂದು ತಿಳಿದು ಬಂದಿದೆ. ವಿನಯ್ ಕುಮಾರ್ ಅವರು ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿಲ್ಲ. ಹೀಗಾಗಿ ಇದನ್ನು ಎಸಿಬಿ ತನಿಖೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Power Generation: ರಾಜ್ಯದ ಮೊದಲ ನೈಸರ್ಗಿಕ ಅನಿಲ ವಿದ್ಯುತ್ ಸ್ಥಾವರ ಲೋಕಾರ್ಪಣೆ
3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ
Arrested: ವಿಲ್ಲಾಗಳಿಗೆ ರಾತ್ರಿ ಕನ್ನ ಹಾಕುತ್ತಿದ್ದ ತ್ರಿಪುರ ಯುವಕ
House arrest: 10 ದಿನ ಹೌಸ್ ಅರೆಸ್ಟ್ ಮಾಡಿ 30 ಲಕ್ಷ ರೂ. ಸುಲಿಗೆ!
Female Staff: ಇನ್ನು ರಾತ್ರಿ ಪಾಳಿ ವೈದ್ಯೆ ಜತೆ ಮಹಿಳಾ ಸಿಬಂದಿ ಕಡ್ಡಾಯಕ್ಕೆ ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್
Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ
SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!
MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್
Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.