ಕೊಕ್ಕಡ ಎಂಡೋಪಾಲನ ಕೇಂದ್ರಕ್ಕೆ ಶಾಸಕ ವಸಂತ ಬಂಗೇರ ಭೇಟಿ
Team Udayavani, Nov 30, 2017, 5:01 PM IST
ಕೊಕ್ಕಡ : ಕರ್ನಾಟಕ ಸರಕಾರದ ಅನುದಾನದಲ್ಲಿ ಮಂಗಳೂರಿನ ಸೇವಾ ಭಾರತಿ ಸಂಸ್ಥೆಯಿಂದ ನಿರ್ವಹಣೆಗೊಳಪಡುತ್ತಿರುವ ಕೊಕ್ಕಡದ ಎಂಡೋ ಪಾಲನ ಕೇಂದ್ರಕ್ಕೆ ಬೆಳ್ತಂಗಡಿ ಶಾಸಕ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ವಸಂತ ಬಂಗೇರ ಇವರು ಮಂಗಳವಾರದಂದು ಭೇಟಿ ನೀಡಿದರು.
ಎಂಡೋ ಪಾಲನಾ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಮಾತನಾಡಿಸಿದ ಅವರು ಸಂಸ್ಥೆಯನ್ನು ನಿರ್ವಹಿಸುತ್ತಿರುವ ಬಗ್ಗೆ ವಿವರಗಳನ್ನು ಕೇಳಿ ಪಡೆದುಕೊಂಡರು. ಈ ಸಂದರ್ಭ ಸೇವಾ ಭಾರತಿಯ ಸಿಬಂದಿಗಳು ಶಾಸಕರಿಗೆ ಮಾಹಿತಿ ನೀಡಿ ಸರಕಾರದಿಂದ ಇಲ್ಲಿನ ಸಂತ್ರಸ್ತರಿಗೆ ತಲಾ ಒಬ್ಬರಿಗೆ ಇಂತಿಷ್ಟು ಎಂದು ನೀಡುವ ಮೊತ್ತದಿಂದಲೂ ಸ್ವಲ್ಪ ಅಧಿಕ ವೆಚ್ಚಬೇಕಾಗುತ್ತಿದ್ದು ಇದನ್ನು ಸದ್ಯದ ಮಟ್ಟಿಗೆ ಸೇವಾಭಾರತಿಯೇ ಭರಿಸಿಕೊಳ್ಳುತ್ತಿದೆ. ಇಲ್ಲಿನ ಪಾಲನ ಕೇಂದ್ರದಲ್ಲಿ ದಿನವಹಿ ಸಂತ್ರಸ್ತರಿಗೆ ನೀಡಲಾಗುತ್ತಿರುವ ಆಹಾರ ಮತ್ತಿತರ ಕೌಶಲಾಭಿವೃದ್ದಿಯ ಬಗ್ಗೆ ಶಾಸಕರಿಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕರು ನಿರ್ವಹಣೆಯಲ್ಲಿ ಅಧಿಕ ವೆಚ್ಚವಾಗುತ್ತಿದ್ದಲ್ಲಿ ಅದನ್ನುಸೇವಾಭಾರತಿ ಸಂಸ್ಥೆಯಿಂದ ಪತ್ರ ಮೂಲಕ ತನಗೆ ಮನವಿ ನೀಡಿದಲ್ಲಿ ಸರಕಾರದ ಗಮನ ಸೆಳೆಯುವ ಭರವಸೆ ನೀಡಿದರು. ಈ ಸಂದರ್ಭ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ವಿ.ಜೆ. ಸೆಬಾಸ್ಟಿಯನ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮಕರಣಿಕ ರೂಪೇಶ್, ಸದಸ್ಯರಾದ ಇಬ್ರಾಹಿಂ ಸೌತಡ್ಕ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla ಸಂಪರ್ಕದ ರಾಜ್ಯ, ಅಂತಾರಾಜ್ಯ ರಸ್ತೆಗಳಲ್ಲೆಲ್ಲ ಹೊಂಡ
Bantwala: ಹೆದ್ದಾರಿಯಂಚಿನ ನಿವಾಸಿಗಳ ನರಕ ಯಾತನೆ
Vitla: ದಾಖಲೆಯಿಲ್ಲದೆ ಗೋ ಸಾಗಾಟ; ಮಾರಾಟ ಮಾಡಿದ ವ್ಯಕ್ತಿಯ ಮನೆಗೆ ಜಾನುವಾರು ವಾಪಸ್
Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ
Puttur: ಐನ್ನೂರು ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲೀಗ ನಲ್ವತ್ತೇ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Belagavi: ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್ ಜಾರಕಿಹೊಳಿ
Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ
Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ
Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!
Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.