ಪ್ರಕ್ಷುಬ್ಧ: ಈದ್‌, ಹನುಮ ಜಯಂತಿಗೆ ಕಟ್ಟೆಚ್ಚರ


Team Udayavani, Dec 1, 2017, 2:34 PM IST

m4-randeep.jpg

ಹುಣಸೂರು: ನಗರದಲ್ಲಿ ಈದ್‌ ಮಿಲಾದ್‌ ಹಾಗೂ ಹನುಮ ಜಯಂತಿ ಪ್ರಯುಕ್ತ  ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ತೆರಳುವ ರಸ್ತೆಗಳನ್ನು ಜಿಲ್ಲಾಡಳಿತ ನಿಗದಿಪಡಿಸಿದ್ದು,  ಎರಡೂ ಕೋಮಿನ ಮುಖಂಡರು ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ಕೋರಿದರು.

ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಡಿ.2 ರಂದು ನಡೆಯಲಿರುವ ಈದ್‌ ಮಿಲಾದ್‌ ಹಾಗೂ ಡಿ.3ರ  ಹನುಮ ಜಯಂತಿ ಹಿನ್ನೆಲೆಯಲ್ಲಿ ಎರಡೂ ಕೋಮುಗಳ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿ ಅವರು ಮಾತನಾಡಿದರು.

ಕಳೆದ ಎರಡು ವರ್ಷದಿಂದ ಹುಣಸೂರು ನಗರ ಪ್ರಕ್ಷುಬ್ಧ ಸ್ಥಿತಿ ಇರುವ ಬಗ್ಗೆ ಪೊಲೀಸ್‌, ಗುಪ್ತಚರ ವರದಿ ಹಾಗೂ ಇಲ್ಲಿನ ಕಂದಾಯಾಧಿಕಾರಿಗಳ ಮಾಹಿತಿಯನ್ನಾಧರಿಸಿ ಎರಡೂ ಕೋಮುಗಳ ಹಬ್ಬಕ್ಕೆ ಪ್ರತ್ಯೇಕ ಮಾರ್ಗ ನಕ್ಷೆ (ರೂಟ್‌ ಮ್ಯಾಪ್‌) ನಿಗದಿಪಡಿಸಲಾಗಿದೆ. ಕಾರ್ಖಾನೆ ರಸ್ತೆ, ಜೆಎಲ್‌ಬಿ ಹಾಗೂ ಟಿಎಪಿಸಿಎಂಎಸ್‌ ರಸ್ತೆಯಲ್ಲಿ ಮೆರವಣಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ ಎಂದರು.

ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಮೆರವಣಿಗೆ ನಡೆಸಲು ಹಿಂದೂಪರ ಸಂಘಟನೆಗಳು ಕೋರಿದ್ದ ಮನವಯನ್ನು ತಿರಸ್ಕರಿಸಿದ ಎಸ್ಪಿ ರವಿ.ಡಿ.ಚನ್ನಣ್ಣನವರ್‌, ನಿಗದಿತ ಸ್ಥಳದಲ್ಲೇ ಮೆರವಣಿಗೆ ನಡೆಯಬೇಕೆಂದು ಸೂಚಿಸಿದರು. ಬ್ಯಾನರ್, ಬಂಟಿಂಗ್ಸ್‌ಗಳ ಅಳವಡಿಕೆಗೆ ಏಕಗವಾಕ್ಷಿ ಪದ್ಧತಿ ಜಾರಿಗೊಳಿಸಿದ್ದು, ನಗರಸಭೆಗೆ ಅರ್ಜಿ ಸಲ್ಲಿಸಿದ 3 ಗಂಟೆಯೊಳಗೆ ಸಂಬಂಧಿಸಿದವರಿಗೆ ಅನುಮತಿ ನೀಡಲಾಗುವುದೆಂದರು.

ಏಕಾಏಕಿ ನಿರ್ಬಂಧ ಸರಿಯಲ್ಲ: ತಾಲೂಕು ಬಿಜೆಪಿ ಅಧ್ಯಕ್ಷ, ವಕೀಲ ಬಿ.ಎಸ್‌.ಯೋಗಾನಂದಕುಮಾರ್‌ ಮಾತನಾಡಿ, ಯಾವ ಸಭೆಯಲ್ಲೂ ರೂಟ್‌ ಮ್ಯಾಪ್‌ ಬಗ್ಗೆ ಚರ್ಚೆಯಾಗಿಲ್ಲ, ಏಕಾಏಕಿ ನಿರ್ಬಂಧ ವಿಧಿಸಲಾಗಿದೆ. ನಾವೇನೂ ಕಾನೂನು ಉಲ್ಲಂ ಸುವವರಲ್ಲ, ಕಳೆದ ಬಾರಿ ಜಿಲ್ಲಾಡಳಿತ  ಹೇಳಿದಂತೆಯೇ ಕೇಳಿದ್ದೇವೆ. ರಂಗನಾಥ ಬಡಾವಣೆಯಿಂದ ಮೆರವಣಿಗೆ ನಡೆಸಲು ತಿರಸ್ಕರಿಸಿರುವುದು ಸರಿಯಲ್ಲ. ಸಂಸದ ಪ್ರತಾಪಸಿಂಹ ವಿರುದ್ಧª  ನಗರ ಠಾಣೆ ಪಿಎಸ್‌ಐ ಏಕವಚನದಲ್ಲಿ ಮಾತನಾಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಭಟ್ಕಳ ಹೇಳಿಕೆ: ಮುಸ್ಲಿಂ ಸಮಿತಿ ಕಾರ್ಯದರ್ಶಿ ಮುಷಾಹಿದ್‌ ಮಾತನಾಡಿ, ಹುಣಸೂರು ಇನ್ನೊಂದು ಭಟ್ಕಳ ಆಗುತ್ತಿದೆ ಎಂಬ ಹೇಳಿಕೆ ಬೇಸರ ತರಿಸಿದೆ. ಇಲ್ಲಿ ಎರಡೂ ಕಡೆಯವರು ಚೆನ್ನಾಗಿದ್ದೇವೆ. ಕೆಲವರಿಂದ ಮಾತ್ರ ಸಮಸ್ಯೆ ಇದೆ. ಜಿಲ್ಲಾಡಳಿತದ ಸೂಚನೆಯಂತೆ ನಡೆದುಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಎರಡೂ ಸಂಘಟನೆಗಳ ಮುಖಂಡರಾದ ವಿ.ಎನ್‌.ದಾಸ್‌, ವರದರಾಜು ಪಿಳ್ಳೆ, ಎನ್‌.ರಾಜೇಂದ್ರ, ಕಿರಣ್‌ ಕುಮಾರ್‌, ಚಂದ್ರಶೇಖರ್‌, ಗಿರೀಶ್‌, ಅನಿಲ್‌, ಸರದಾರ್‌, ಮೊಹಿದುಲ್ಲಾ, ಷಫೀ, ಸಯೀದ ಅಹಮದ್‌ಷಾ ಉಪವಿಭಾಗಾಧಿಕಾರಿ ಕೆ.ನಿತೀಶ್‌, ಎಎಸ್‌ಪಿ ಮಹಮದ್‌ ಸುಜೀತಾ, ಡಿವೈಎಸ್‌ಪಿ ಭಾಸ್ಕರ್‌, ಇಒಸಿ ಆರ್‌.ಕಷ್ಣಕುಮಾರ್‌, ತಹಶೀಲ್ದಾರ್‌ ಮೋಹನ್‌, ಪೌರಾಯುಕ್ತ ಶಿವಪ್ಪನಾಯ್ಕ, ವತ್ತ ನಿರೀಕ್ಷಕ ಪೂವಯ್ಯ ಇತರರಿದ್ದರು.

ಮೆರವಣಿಗೆಗೆ ರೂಟ್‌ ಮ್ಯಾಪ್‌: ಹನುಮ ಜಯಂತಿಗೆ ಹುಣಸೂರು ನಗರದ ಮಂಜುನಾಥ ಬಡಾವಣೆಯ ಮಂಜುನಾಥಸ್ವಾಮಿ ದೇವಾಲಯದಿಂದ ಆರಂಭಿಸಿ ಮಾರುತಿ ಪೆಟ್ರೋಲ್‌ ಬಂಕ್‌, ಕಲ್ಪತರು ವೃತ್ತ, ಹೊಸ ಹಾಗೂ ಹಳೇ ಬಸ್‌ನಿಲ್ದಾಣ, ರೋಟರಿ ವೃತ್ತದ ಮೂಲಕ ನಗರಸಭೆ ಮೈದಾನ‌ವನ್ನು ಸೇರಲಿದೆ. ಈದ್‌ಮಿಲಾದ್‌ ಮೆರವಣಿಗೆಗೆ ಶಬ್ಬೀರ್‌ನಗರದ ಶಾಹಿ ಮಸೀದಿಯಿಂದ ಆರಂಭಿಸಿ ಕಲ್ಪತರು ವೃತ್ತ, ಹೊಸ-ಹಳೆ ಬಸ್‌ನಿಲ್ದಾಣ, ರೋಟರಿ ವೃ‌ತ್ತದ ಮೂಲಕ ಈದ್ಗಾ ಮೈದಾನವನ್ನು ಸೇರಲಿದೆ.

ನಿಗದಿಗೊಳಿಸಿರುವ ರಸ್ತೆಯನ್ನು ಹೊರತುಪಡಿಸಿ ಬೇರೆಲ್ಲೂ ಹೋಗುವಂತಿಲ್ಲ. ಈ ರಸ್ತೆಗಳಲ್ಲಿ ನಿಷೇಧ ಆದೇಶದ ನಾಮಫ‌ಲಕ ಅಳವಡಿಸಲಾಗುವುದು. ಯಾವುದೇ ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದು ನಮ್ಮ ಉದ್ದೇಶವಲ್ಲ.ನಗರದಲ್ಲಿನ ಪರಿಸ್ಥಿತಿಯನ್ನು ಎಲ್ಲರೂ ಅರ್ಥಮಾಡಿಕೊಂಡು ಜಿಲ್ಲಾ, ತಾಲೂಕು ಆಡಳಿತ ಹಾಗೂ ಪೊಲೀಸ್‌ ಇಲಾಖೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಂದೀಪ್‌ ಮನವಿ ಮಾಡಿದರು.

ಹೊರಗಿನ ವ್ಯಕ್ತಿಗಳಿಗೆ ನಿರ್ಬಂಧ: ಎಸ್ಪಿ
ತಾಲೂಕಿನಲ್ಲಿ ಗಾಳಿ ಮಾತು, ವದಂತಿ ಹೆಚ್ಚಿದ್ದು,  ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ್ದನ್ನು ಫೋಸ್ಟ್‌ ಮಾಡಿ ಜನರ ನೆಮ್ಮದಿ ಕೆಡಿಸುವುದು ಕೂಡ ಅಪರಾಧವಾಗಿದೆ. ಹೊರಗಿನ ವ್ಯಕ್ತಿಗಳು ಬರುವವಂತಿಲ್ಲ. ಜನಸಾಮಾನ್ಯರ ಸುರಕ್ಷತೆಗಾಗಿ ಈ ಕ್ರಮ ಕೈಗೊಂಡಿದ್ದೇವೆ. ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕಾನೂನು ಉಲ್ಲಂ ಸುವವರಿಗೆ ಕಠಿಣ ಕ್ರಮ ಕಾದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್‌ ಎಚ್ಚರಿಕೆ ನೀಡಿದರು.

ಪೂರ್ವಗ್ರಹ ಪೀಡಿತರಾಗಿ ಮೆರವಣಿಗೆಗೆ ರಸ್ತೆಗಳಿಗೆ ನಿರ್ಬಂಧ ವಿಧಿಸಿಲ್ಲ. ಇಲ್ಲಿನ ಪರಿಸ್ಥಿತಿ ಎಲ್ಲರೂ ಅಂದುಕೊಂಡಷ್ಟು ಸುಲಭವಾಗಿಲ್ಲ. ಇಲ್ಲಿ ಎರಡೂ ಕಡೆಯಲ್ಲಿ ಕೆಲ ಕಿಡಿಗೇಡಿಗಳಿಂದ ಅಶಾಂತಿ ಉಂಟಾಗುತ್ತಿದೆ. ಇದನ್ನು ಆಧರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.