ಕ್ರೀಡಾ ನೀತಿ ಶೀಘ್ರ ಅನುಷ್ಠಾನ: ವಂ| ಗೋಮ್
Team Udayavani, Dec 3, 2017, 2:37 PM IST
ಪುತ್ತೂರು: ಕ್ರೀಡಾ ನೀತಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ಕರಡು ಸಲ್ಲಿಸಲಾಗಿದೆ. ಇದು ಶೀಘ್ರ ಅನುಷ್ಠಾನಗೊಳ್ಳಲಿದ್ದು, ಮುಂದಿನ ಮಾರ್ಚ್ ಬಜೆಟ್ನಲ್ಲಿ ಕ್ರೀಡೆಗಾಗಿ ಹಣ ಬಿಡುಗಡೆ ಯಾಗುವ ಭರವಸೆ ಇದೆ ಎಂದು ಮೂಲ್ಕಿ ಇಮ್ಯಾ ಕ್ಯುಲೇಟ ಕನ್ಸೆಪ್ಷನ್ ಚರ್ಚ್ನ ಧರ್ಮ ಗುರು, ಸಂತ ಫಿಲೋಮಿನಾ ಕಾಲೇಜಿನ ವಿಶ್ರಾಂತಿ ಪ್ರಾಂಶುಪಾಲ ವಂ| ಫ್ರಾನ್ಸಿಸ್ ಕ್ಸೇವಿಯರ್ ಗೋಮ್ಸ್ ಹೇಳಿದರು. ಪುತ್ತೂರಿನ ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಮೈದಾನದಲ್ಲಿ ಶನಿವಾರ ಆರಂಭವಾದ ಪದವಿಪೂರ್ವ ಕಾಲೇಜಿನ ರಾಜ್ಯಮಟ್ಟದ ಹಾಕಿ ಟೂರ್ನಮೆಂಟ್ ಉದ್ಘಾಟಿಸಿ ಮಾತನಾಡಿದರು.
ಶಾಸಕಿ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಆರ್.
ತಿಮ್ಮಯ್ಯ ಅವರು ಫಿಲೋಮಿನಾ ಪ.ಪೂ. ಕಾಲೇಜಿನ ಕ್ರೀಡಾ ಧ್ವಜಾರೋಹಣಗೈದರು. ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಚೇಯರ್ಮ್ಯಾನ್ ಡಾ| ಜೆರಾಲ್ಡ್ ಸಂತೋಷ್ ಡಿ’ಸೋಜಾ ಅವರು ರಾಜ್ಯ ಪ.ಪೂ. ಶಿಕ್ಷಣ ಇಲಾಖೆಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ವಂ| ಫ್ರಾನ್ಸಿಸ್ ಕ್ಸೇವಿಯರ್ ಗೋಮ್ಸ್ ಅವರನ್ನು ಸಮ್ಮಾನಿಸಲಾಯಿತು.
ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಆಲ್ಫ್ರೆಡ್ ಜಾನ್ ಪಿಂಟೋ, ಫಿಲೋಮಿನಾ ಪದವಿ
ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೋ ನೊರೋನ್ಹಾ ಶುಭ ಹಾರೈಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಜಗಜೀವನ್ ದಾಸ್ ಭಂಡಾರಿ, ಫಿಲೋಮಿನಾ ಕಾಲೇಜ್ನ ಕ್ಯಾಂಪಸ್ ನಿರ್ದೇಶಕ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೋ, ಪದವಿಪೂರ್ವ ಶಿಕ್ಷಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ಪ್ರೇಮನಾಥ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಮ್ಯಲತಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ನಾಡ ಗೀತೆ ಹಾಡಿದರು. ಕಾಲೇಜ್ ಪ್ರಾಂಶುಪಾಲ ವಂ| ವಿಜಯ್ ಲೋಬೋ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿ’ಸೋಜಾ ವಂದಿಸಿದರು. ಉಪನ್ಯಾಸಕಿ ಉಷಾ ಯಶ್ವಂತ್ ಕಾರ್ಯಕ್ರಮ ನಿರೂಪಿಸಿದರು.
ಪರೋಕ್ಷವಾಗಿ ಪ್ರಚಾರ
ಅಧ್ಯಕ್ಷತೆ ವಹಿಸಿದ್ದ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಈಗಾಗಲೇ ಎರಡು ಬಾರಿ ಗೋಲು ಹೊಡೆದಿದ್ದೇನೆ.
ಮೂರನೇ ಗೋಲು ಹೊಡೆಯಲು ಸಿದ್ಧಳಾಗಿದ್ದೇನೆ. ಈ ಬಗ್ಗೆ ಫಾದರ್ ಈಗಾಗಲೇ ಮಾತನಾಡಿದ್ದು, ಇನ್ನೊಂದು ಗೋಲು ಈಡೇರಿಸಲು ಸಹಕಾರ ಕೇಳಿಕೊಂಡಿದ್ದಾರೆ ಎಂದು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಮತ ಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್ ಚೌಟ
Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.