ಮತ್ತೊಂದು ಭಾಗದಲ್ಲಿ ಮಂತ್ರಂ!


Team Udayavani, Dec 5, 2017, 11:35 AM IST

Mantram1.jpg

ಕನ್ನಡದಲ್ಲಿ ಹಾರರ್‌ ಚಿತ್ರಗಳ ಮುಂದುವರೆದ ಭಾಗ ಮೂಡುವುದು ತೀರಾ ವಿರಳ. ಹಾಗೆ ನೋಡಿದರೆ, ಕೆಲವು ಹಾರರ್‌ ಚಿತ್ರಗಳು ಭಾಗ 2ರಲ್ಲಿ ಕಾಣಿಸಿಕೊಳ್ಳುವ ಕುರಿತು ಈಗಾಗಲೇ ಸುದ್ದಿಯಾಗಿವೆ. ಈಗ ಆ ಸಾಲಿಗೆ “ಮಂತ್ರಂ’ ಚಿತ್ರವೂ ಸೇರಿದೆ. ಕಳೆದ ವಾರವಷ್ಟೇ “ಮಂತ್ರಂ’ ಬಿಡುಗಡೆಯಾಗಿದೆ. ಇದು ಪಕ್ಕಾ ಹಾರರ್‌ ಚಿತ್ರ. ಒಂದು ಸಿನಿಮಾದ ಮುಂದುವರೆದ ಭಾಗ ಬರುತ್ತೆ ಅಂದರೆ, ಮೊದಲ ಚಿತ್ರ ಯಶಸ್ಸು ಆಗಿರಲೇಬೇಕು.

ಇಲ್ಲವೇ, ಒಂದಷ್ಟು ಪ್ರಶ್ನೆಗಳನ್ನು ಉಳಿಸಿಕೊಂಡಿರಬೇಕು, ಆ ಪ್ರಶ್ನೆಗಳಿಗೆ ಮುಂದುವರೆದ ಭಾಗದಲ್ಲಿ ಉತ್ತರ ಕೊಡುವ ಕೆಲಸ ಚಿತ್ರತಂಡದಲ್ಲಾಗುತ್ತದೆ. ಇಲ್ಲೀಗ “ಮಂತ್ರಂ’ ಚಿತ್ರತಂಡ ಅಂತಹ ಹಲವು ಪ್ರಶ್ನೆಗಳಿಗೆ “ಮಂತ್ರಂ 2′ ನಲ್ಲಿ ಉತ್ತರ ಕೊಡಲು ಹೊರಟಿದೆ. “ಮಂತ್ರಂ’ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಒಂದಷ್ಟು ಪ್ರಶ್ನೆಗಳನ್ನು ಬಿಡಲಾಗಿದೆ. ಸಮಾಜದ ವ್ಯವಸ್ಥೆ ಬದಲಾಗುವುದೇ ಇಲ್ಲವೇ ಎಂಬ ಪ್ರಶ್ನೆಯೂ ಇದೆ.

ಅದಷ್ಟೇ ಅಲ್ಲ, ಇನ್ನೂ ಅನೇಕ ವಿಷಯಗಳನ್ನು ಗೊಂದಲದಲ್ಲಿರಿಸಲಾಗಿದೆ. ಅವೆಲ್ಲದ್ದಕ್ಕೂ “ಮಂತ್ರಂ 2’ನಲ್ಲಿ ಉತ್ತರ ನೀಡಲು ಸಜ್ಜಾಗಿದ್ದಾರೆ ನಿರ್ದೇಶಕ ಸಜ್ಜನ್‌ ಮತ್ತು ನಿರ್ಮಾಪಕ ಅಮರ್‌ ಚೌದರಿ. ಅಂದಹಾಗೆ, ಇವರಿಬ್ಬರಿಗೂ “ಮಂತ್ರಂ’ ಮೊದಲ ಪ್ರಯತ್ನ. ಸಿನಿಮಾ ಬಿಡುಗಡೆ ಕಂಡಿದ್ದು ಕಡಿಮೆ ಚಿತ್ರಮಂದಿರಗಳಲ್ಲಾದರೂ, ಎಲ್ಲೆಡೆಯಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವ ಖುಷಿ ಅವರದು.

ಹಾಗಾಗಿ, ಅದೇ ಖುಷಿಯಲ್ಲಿ ಮುಂದುವರೆದ ಭಾಗ ಮಾಡಲು ಸಜ್ಜಾಗಿರುವುದಾಗಿ ಹೇಳುತ್ತಾರೆ ಅಮರ್‌. “ಮಂತ್ರಂ’ ನಲ್ಲಿ ಆತ್ಮಕ್ಕೆ ನ್ಯಾಯ ಸಿಕ್ಕಿಲ್ಲ. ಹಾಗಾದರೆ, ವ್ಯವಸ್ಥೆ ಸರಿಯಿಲ್ಲವೇ? ಆ ವ್ಯವಸ್ಥೆಯನ್ನು ಸರಿಪಡಿಸಲು ಯಾರು ಬರುತ್ತಾರೆ. ಮುಂದುವರೆದ ಭಾಗದಲ್ಲೇನಾದರೂ ಆತ್ಮ ಪುನಃ ಎಂಟ್ರಿಕೊಡುತ್ತಾ? ಇಂತಹ ಹತ್ತಾರು ಪ್ರಶ್ನೆಗಳು ಬರುವುದು ಸಹಜ. ಇಲ್ಲಿ ಎಲ್ಲವೂ ಹೌದು.

ಆದರೆ, “ಮಂತ್ರಂ 2′ ಮಾತ್ರ ಹಾರರ್‌ಗೆ ಅಂಟಿಕೊಂಡಿಲ್ಲ ಎಂಬ ಉತ್ತರ ಅವರಿಂದ ಬರುತ್ತೆ. ಅಲ್ಲಿ ಪುಟ್ಟ ಜೀವವನ್ನು ಕಳೆದುಕೊಂಡ ಅಪ್ಪ ಏನು ಮಾಡುತ್ತಾನೆ. ಬರೀ ನಾಲ್ಕು ದಿನಗಳ ಹೋರಾಟಗಳಿಂದ ನ್ಯಾಯ ಪಡೆಯಲು ಸಾಧ್ಯವೇ? ಹಾಗಾದರೆ, ನ್ಯಾಯಕ್ಕಾಗಿ ಏನೆಲ್ಲಾ ನಡೆಯುತ್ತೆ ಎಂಬ ಅಪರೂಪದ ಅಂಶಗಳು “ಮಂತ್ರಂ 2’ನಲ್ಲಿರಲಿವೆಯಂತೆ. ಎಲ್ಲರೂ ಅಂದುಕೊಂಡಂತೆ “ಮಂತ್ರಂ 2′ ಹಾರರ್‌ ಚಿತ್ರವಲ್ಲ.

ಅದೊಂದು ಕ್ಲಾಸ್‌ ಸಿನಿಮಾ ಆಗಲಿದೆ. ಸಮಾಜದಲ್ಲಿರುವ ಕೆಟ್ಟ ವ್ಯವಸ್ಥೆಗೊಂದು ಪರಿಹಾರ ಕೊಡುವ ನಿಟ್ಟಿನಲ್ಲಿ ಚಿತ್ರ ಮೂಡಿಬರಲಿದೆ ಎನ್ನುತ್ತಾರೆ ಅಮರ್‌ ಚೌದರಿ. ಹಾಗಾದರೆ, “ಮಂತ್ರಂ 2′ ಚಿತ್ರದಲ್ಲಿ ಇದೇ ತಂಡ ಮುಂದುವರೆಲಿದೆಯಾ? ಖಂಡಿತ ಇಲ್ಲ, ಮುಂದುವರೆದ ಭಾಗದಲ್ಲಿ ನುರಿತ ಕಲಾವಿದರು ಇರಲಿದ್ದಾರೆ. ಇನ್ನೊಬ್ಬ ಹೀರೋ ಕೂಡ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಇಲ್ಲಿ ಕಮರ್ಷಿಯಲ್‌ ಅಂಶಕ್ಕಿಂತ ಸಮಾಜಕ್ಕೊಂದು ಸಂದೇಶ ಕೊಡುವ ಉದ್ದೇಶದಿಂದ ಈ ಚಿತ್ರ ಮಾಡಲಾಗುತ್ತಿದೆ. ಚಿತ್ರಕ್ಕೆ ರವಿಬಸ್ರೂರ್‌ ಸಂಗೀತದ ಜೊತೆ ಹಿನ್ನೆಲೆ ಸಂಗೀತ ಕೊಡಲಿದ್ದಾರೆ. ಈ ಬಾರಿ ಕೆ.ಎಂ.ಪ್ರಕಾಶ್‌ ಅವರು ಕತ್ತರಿ ಹಿಡಿಯಲಿದ್ದಾರೆ. ಉಳಿದಂತೆ “ಬಾಹುಬಲಿ’ ಸಿನಿಮಾದಲ್ಲಿ ಗ್ರಾಫಿಕ್ಸ್‌ ಕೆಲಸ ಮಾಡಿದ್ದ ತಂತ್ರಜ್ಞರೇ “ಮಂತ್ರಂ 2′ ಚಿತ್ರಕ್ಕೂ ಕೆಲಸ ಮಾಡಲಿದ್ದಾರೆ. ಬಿಗ್‌ಬಜೆಟ್‌ನಲ್ಲೇ ಚಿತ್ರ ತಯಾರಾಗಲಿದೆ ಎಂಬುದು ಅಮರ್‌ ಮಾತು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.