ಎಸ್‌ಟಿಪಿ ಅಳವಡಿಕೆಗೆ ಮುಂದಾದ ಜಲ ಮಂಡಳಿ


Team Udayavani, Dec 8, 2017, 5:13 PM IST

hotels-and-resorts-sewage-treatment-plant-250×250.jpg

ಬೆಂಗಳೂರು: ತ್ಯಾಜ್ಯನೀರು ಸಂಸ್ಕರಣಾ ಘಟಕ (ಎಸ್‌ ಟಿಪಿ) ಅಳವಡಿಕೆಗೆ ಕೆಲ ಅಪಾರ್ಟ್‌ಮೆಂಟ್‌ಗಳ ಅಪಸ್ವರದ ಹಿನ್ನೆಲೆ ಕೇಂದ್ರ ಕಚೇರಿ ಕಾವೇರಿ ಭವನ ಕಟ್ಟಡದಲ್ಲಿ ಎಸ್‌ಟಿಪಿ ಅಳವಡಿಸಿಕೊಳ್ಳುವ ಮೂಲಕ ಮಾದರಿಯಾಗಲು ಜಲಮಂಡಳಿ ಸಜ್ಜಾಗಿದೆ. ಐವತ್ತಕ್ಕಿಂತ ಹೆಚ್ಚು ಫ್ಲ್ಯಾಟ್‌ಗಳಿರುವ ವಸತಿ ಸಂಕೀರ್ಣ ಗಳು (ಅಪಾರ್ಟ್‌ಮೆಂಟ್‌) ಡಿ. 31ರೊಳಗೆ ಎಸ್‌ಟಿಪಿಯನ್ನು ಕಡ್ಡಾಯವಾಗಿ ಅಳವಡಿಸಿ ಕೊಳ್ಳಬೇಕು ಎಂದು ಜಲಮಂಡಳಿ ಆದೇಶ ಹೊರಡಿಸಿತ್ತು. ಅದಕ್ಕೆ ವಿರೋಧಿಸಿ ಹಲವು ಅಪಾರ್ಟ್‌ಮೆಂಟ್‌ಗಳು ಪ್ರತಿಭಟನೆ ನಡೆಸಿದ್ದವು. ಆ ಹಿನ್ನೆಲೆ ನಿಯಮಾನುಸಾರ ನಿರ್ಮಾಣವಾಗಿರುವ ಹಾಲಿ ಕಟ್ಟಡಗಳಲ್ಲಿ ಎಸ್‌ಟಿಪಿ ಅಳವಡಿಕೆ ಸಾಧ್ಯವೆಂಬುದನ್ನು ಸಾಬೀತುಪಡಿಸಲು ಜಲಮಂಡಳಿ ಮುಂದಾಗಿದೆ.

ಈ ಹಿಂದೆ 20 ಮನೆಗಳಿರುವ ಹಳೆಯ ಅಪಾರ್ಟ್‌ಮೆಂಟ್‌ಗೆ ಎಸ್‌ಟಿಪಿ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆ ವೇಳೆ ಅಪಾರ್ಟ್‌ಮೆಂಟ್‌ಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮೂರು ಬಾರಿ ಸಭೆ ನಡೆಸಿದ ಜಲಮಂಡಳಿ ಹಳೆಯ 20 ಮತ್ತು 50 ಮನೆಗಳಿರುವ ಅಪಾರ್ಟ್‌ಮೆಂಟ್‌ಗಳಿಗೆ ನಿಯಮದಿಂದ ವಿನಾಯ್ತಿ ನೀಡುವಂತೆ ಮನವಿ ಸಲ್ಲಿಸಿತ್ತು. ಆದರೆ, ಸರ್ಕಾರ 20 ಮನೆಗಳಿರುವ ಹಳೆಯ ವಸತಿ ಸಂರ್ಕಿಣಗಳಿಗೆ ವಿನಾಯ್ತಿ
ನೀಡಿ, 50 ಮನೆಗಳಿರುವ ಅಪಾರ್ಟ್‌ ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಆ ಹಿನ್ನೆಲೆ ನಗರದ ಹಲವು ಕಡೆಗಳಲ್ಲಿ ಅಪಾರ್ಟ್‌ಮೆಂಟ್‌ ನಿವಾಸಿಗಳು ಪ್ರತಿಭಟನೆ ನಡೆಸಿ, 2016ರ ಹಿಂದೆ ನಿರ್ಮಿಸಿದ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಅಳವಡಿಕೆ ಕಡ್ಡಾಯ ಗೊಳಿಸಿ ರುವುದು ಸರಿಯಲ್ಲಮರು ಪರಿಶೀಲಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಹಾಲಿ ಕಟ್ಟಡಗಳಲ್ಲಿಯೂ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಎಸ್‌ಟಿಪಿ ಅಳವಡಿಸಿ ಕೊಳ್ಳುವುದು ಸಾಧ್ಯ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಲು ಮುಂದಾಗಿರುವ ಜಲಮಂಡಳಿ, ಕಾವೇರಿ ಭವನ ಕಟ್ಟಡದಲ್ಲಿ ಎಸ್‌ಟಿಪಿ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಿದೆ. ಹೀಗಾಗಿ ಅರ್ಧದಷ್ಟು ಕಾಮಗಾರಿ ಪೂರ್ಣಗೊಂಡಿದ್ದು, 15 ದಿನಗಳಲ್ಲಿ ಎಸ್‌ ಟಿಪಿ ಪ್ರಾಯೋಗಿಕವಾಗಿ ಕಾರ್ಯ ನಿರ್ವಹಿಸಲಿದೆ.

ಅಪಸ್ವರಕ್ಕೆ ಕಾರಣವೇನು?: ನಗರದ 1,146ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳು ಜಲಮಂಡಳಿ ಹೊರಡಿಸಿರುವ ಆದೇಶಕ್ಕೆ ಒಳಪಡಲಿದ್ದು, ಆ ಪೈಕಿ ಬಹುತೇಕ ಅಪಾರ್ಟ್‌ಮೆಂಟ್‌ಗಳು ನಿಯಮದಂತೆ ಸೆಟ್‌ಬ್ಯಾಕ್‌ (ನಡುಜಾಗ) ಬಿಡದೆ ನಿರ್ಮಾಣವಾಗಿವೆ ಎನ್ನಲಾಗಿದೆ. ಒಂದೊಮ್ಮೆ ನಿಯಮಾ ನುಸಾರ ಸೆಟ್‌ ಬ್ಯಾಕ್‌ ಬಿಟ್ಟು ಕಟ್ಟಡ ನಿರ್ಮಿಸಿದ್ದರೆ ಅಪಾರ್ಟ್‌ ಮೆಂಟ್‌ಗಳಲ್ಲಿ ಎಸ್‌ಟಿಪಿಗೆ ಜಾಗ ಲಭ್ಯವಿರುತ್ತಿತ್ತು ಎಂಬುದು ಹಿರಿಯ ಅಧಿಕಾರಿಯ ವಾದ.

ಮಂಡಳಿಯಿಂದ ಸಲಹೆ ಲಭ್ಯ: ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಪಿಗಳ ಅಳವಡಿಕೆಗೆ ಜಾಗ ಮತ್ತು ಇತರೆ ಯಾವುದೇ ಸಮಸ್ಯೆಗಳಿದ್ದರೂ ಅವುಗಳಿಗೆ ಪರಿಹಾರ ನೀಡುವ “ರಕ್ಷಣಾ ಸಂಶೋ ಧನೆ ಮತ್ತು ನಿರ್ವಹಣಾ ಇಲಾಖೆ (ಡಿಆರ್‌ಡಿಒ) ಯಿಂದ ಮಾನ್ಯತೆ ಪಡೆದ ಸಂಸ್ಥೆಗಳ ಮಾಹಿತಿ ಜಲಮಂಡಳಿ ಕಲೆ ಹಾಕಿದೆ. ಹೀಗಾಗಿ ಅಪಾರ್ಟ್‌ ಮೆಂಟ್‌ಗಳಲ್ಲಿ ಜಾಗವಿಲ್ಲವೆಂದು ಅಪಸ್ವರ ಎತ್ತಿರುವವರು ಮಂಡಳಿಯ ಅಧಿಕಾರಿ ಗಳನ್ನು ಸಂಪರ್ಕಿಸಿ ಎಸ್‌ಟಿಪಿ ಅಳವಡಿಕೆಗೆ ಇರುವ
ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂಬುದು ಮಂಡಳಿಯ ಹಿರಿಯ ಅಧಿಕಾರಿಯ ಸಲಹೆಯಾಗಿದೆ.

ಎಸ್‌ಟಿಪಿ ಸಾಮರ್ಥಯದ ನಿಗದಿ ಹೇಗೆ?
ಜಲಮಂಡಳಿಯಿಂದ ಹಾಗೂ ಇತರೆ ಮೂಲಗಳಿಂದ ಅಪಾರ್ಟ್‌ಮೆಂಟ್‌ಗೆ ನಿತ್ಯ ಪೂರೈಕೆಯಾಗುವ ನೀರಿನ ಪ್ರಮಾಣದ ಶೇ.80ರಷ್ಟು ಒಳಚರಂಡಿಯಾಗಿ ಪರಿವರ್ತನೆಯಾಗುತ್ತದೆ. ಹೀಗಾಗಿ ಶೇ.80ರಷ್ಟು ನೀರನ್ನು ಸಂಸ್ಕರಿಸುವಷ್ಟು ಸಾಮರ್ಥಯದ ಎಸ್‌ಟಿಪಿಯನ್ನು ಅಪಾರ್ಟ್‌ಮೆಂಟ್‌ ಅಳವಡಿಸಿಕೊಳ್ಳಬೇಕುಎಂದು ಮಂಡಳಿಯ ನಿರ್ವಹಣಾ ವಿಭಾಗದ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ. 

ಹಳೆಯ 50 ಮನೆಗಳಿರುವ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗಳು ಎಸ್‌ಟಿಪಿ ಅಳವಡಿಸಿಕೊಳ್ಳುವ ಮೂಲಕ ಮಂಡಳಿಯೊಂದಿಗೆ ಕೈಜೋಡಿಸಬೇಕು.
ಒಂದೊಮ್ಮೆ ಎಸ್‌ಟಿಪಿ ಅಳವಡಿಕೆಗೆ ಜಾಗದ ಕೊರತೆ ಸೇರಿ ಇನ್ನಿತರ ಸಮಸ್ಯೆಗಳಿದ್ದರೆ, ಅದಕ್ಕೆ ಕೈಗೊಳ್ಳಬೇಕಾದ ಪರಿಹಾರ ಸೂಚಿಸುವ ಸಂಸ್ಥೆಯ ವಿವರಗಳನ್ನು ಮಂಡಳಿ ನೀಡಲಿದೆ. 
 ●ಕೆಂಪರಾಮಯ್ಯ, ಜಲಮಂಡಳಿಯ ಪ್ರಧಾನ ಅಭಿಯಂತರ

●ವೆಂ. ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.