ಅನುಮತಿಯಿಲ್ಲದೆ ಯಾವುದೇ ಚಟುವಟಿಕೆ ನಡೆಸಬಾರದು: ಹೈಕೋರ್ಟ್
Team Udayavani, Dec 12, 2017, 12:22 PM IST
ಬೆಂಗಳೂರು: ಜಕ್ಕೂರು ವಾಯುನೆಲೆಯಲ್ಲಿ ನ್ಯಾಯಪೀಠದ ಅನುಮತಿ ಪಡೆದುಕೊಳ್ಳದೇ ವೈಮಾನಿಕ ಹಾರಾಟ ಹೊರತುಪಡಿಸಿ, ಬೇರೆ ಯಾವುದೇ ಚಟುವಟಿಕೆ ನಡೆಸುವಂತಿಲ್ಲ ಎಂದು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.
ವಾಯುನೆಲೆಯ ರನ್ವೇಯಲ್ಲಿ ಖಾಸಗಿ ಕಂಪೆನಿಯೊಂದು ಡ್ರ್ಯಾಗ್ರೇಸ್ ಆಯೋಜಿಸಲು ನಡೆಸಲು ಕ್ರೀಡಾ ಇಲಾಖೆ ಅನುಮತಿ ನೀಡಿದ ಕ್ರಮ ಪ್ರಶ್ನಿಸಿ ಅಗ್ನಿ ಏರೋ ನ್ಪೋರ್ಟ್ಸ್ ಅವೆಂಚರ್ ಅಕಾಡೆಮಿ ಹಾಗೂ ವಕೀಲ ಕ್ಯಾಪ್ಟನ್ ಅರವಿಂದ ಶರ್ಮಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರಿದ್ದ ಏಕಸದಸ್ಯ ಸೋಮವಾರ ವಿಚಾರಣೆ ನಡೆಸಿತು.
ಸರ್ಕಾರ ಹಾಗೂ ಅರ್ಜಿದಾರರ ಪರ ವಕೀಲ ಕ್ಯಾ.ಅರವಿಂದ ಶರ್ಮಾ ವಾದಿಸಿ, ವಾಯುನೆಲೆಯ ರನ್ವೇಯಲ್ಲಿ ನಡೆದರೇ ರನ್ವೇ ಹಾಳಾಗಲಿದ್ದು ವಿಮಾನಯಾನಕ್ಕೆ ತೊಂದರೆಯಾಗಲಿದೆ. ವಿಮಾನ ಹಾರಾಟಕ್ಕೂ ಕಷ್ಟವಾಗಲಿದೆ. ಹೀಗಾಗಿ ಯಾವುದೇ ಸ್ಪರ್ಧೆ ನಡೆಸಲು ಅನುಮತಿ ನೀಡದಂತೆ ನ್ಯಾಯಪೀಠಕ್ಕೆ ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರು ವಾಯುನೆಲೆಯಲ್ಲಿ ಡ್ಯಾ†ಗ್ ರೇಸ್ ನಡೆಸಲು ಅನುಮತಿ ನೀಡಿರುವ ಬಗ್ಗೆ ಹಲವು ಆಕ್ಷೇಪಣೆಗಳನ್ನು ಎತ್ತಿದೆ. ಹೀಗಾಗಿ ನ್ಯಾಯಪೀಠದ ಅನುಮತಿ ಇಲ್ಲದೇ ರನ್ವೇಯಲ್ಲಿ ವೈಮಾನಿಕ ಚಟುವಟಿಕೆಗಳನ್ನು ಹೊರತುಪಡಿಸಿ, ಬೇರೆ ಯಾವುದೇ ರೀತಿಯ ರೇಸ್, ಅಥವಾ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಪ್ರತಿವಾದಿಗಳಾದ ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆ ಕಾರ್ಯದರ್ಶಿ, ಜಕ್ಕೂರು ವಾಯುನೆಲೆ ನಿರ್ದೇಶಕರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ನ್ಯಾಯಪೀಠದ ಅನುಮತಿಯಿಲ್ಲದೆ ವೈಮಾನಿಕ ಹಾರಾಟ ಹೊರತುಪಡಿಸಿ ಉಳಿದ ಚಟುವಟಿಕೆಗಳನ್ನು ನಡೆಸಬಾರದು ಎಂದು ನ್ಯಾಯಪೀಠ ತಿಳಿಸಿದೆ. ಜೊತೆಗೆ ಅರ್ಜಿದಾರರ ಅಕಾಡೆಮಿ ಪ್ರತಿ ಸೋಮವಾರ ಹಾಗೂ ಮಂಗಳವಾರ ವೈಮಾನಿಕ ಚಟುವಟಿಕೆಗಳನ್ನು ನಡೆಸಲು ನಿಬಂìಧವನ್ನು ರದ್ದುಪಡಿಸಿ, ಅನುಮತಿ ನೀಡಿದೆ ಎಂದು ವಕೀಲ ಕ್ಯಾ.ಅರವಿಂದ ಶರ್ಮಾ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.