![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕರ ಅಮಾನತು
Team Udayavani, Dec 14, 2017, 11:35 AM IST
![alcohol-students.jpg](https://www.udayavani.com/wp-content/uploads/2017/12/14/alcohol-students.jpg)
ಕೊರಟಗೆರೆ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬದಲಾಗಿ ಮದ್ಯ ಬೆರೆಸಿದ ನೀರು ಕುಡಿಸಿದ ಮುಖ್ಯ ಶಿಕ್ಷಕ ಸೇರಿದಂತೆ ಮೂವರು ಶಿಕ್ಷಕರನ್ನು ಮಧುಗಿರಿ ಡಿಡಿಪಿಐ ಶಿವಶಂಕರರೆಡ್ಡಿ ಬುಧವಾರ ಅಮಾನತು ಮಾಡಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೋಮ್ಮಲದೇವಿಪುರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಡಿ.6ರ ಬುಧವಾರದಂದು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಪ್ರೌಢಶಾಲೆಯ 8,9 ಮತ್ತು 10ನೇ ತರಗತಿಯ ಒಟ್ಟು 63 ವಿದ್ಯಾರ್ಥಿಗಳೊಂದಿಗೆ 6 ಮಂದಿ ಶಿಕ್ಷಕರು, 2 ಮಂದಿ ಡಿ ಗ್ರೂಪ್ ನೌಕರರು ಮತ್ತು ಇಬ್ಬರು ಅಡುಗೆ ಸಿಬ್ಬಂದಿ 3 ದಿನಗಳ ಕಾಲ ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದರು. ಡಿ.6ರ ರಾತ್ರಿ 9ಗಂಟೆಗೆ ಹೊರಟು ಡಿ.7ರ ಗುರುವಾರ ಮುಂಜಾನೆ ಜೋಗ್ಫಾಲ್ಸ್, ಮುಡೇìಶ್ವರ, ಕೊಲ್ಲೂರು ಮೂಲಕ ಸಂಜೆ ಉಡುಪಿಗೆ ತೆರಳಿ, ಅಲ್ಲಿ ತಂಗಿದ್ದರು. ಡಿ.8ರ ಮುಂಜಾನೆ ಉಡುಪಿ ಕೃಷ್ಣನ ದರ್ಶನ ಪಡೆದ ವಿದ್ಯಾರ್ಥಿಗಳು, ಮಣಿಪಾಲ್ ಮ್ಯೂಸಿಯಂ, ಮಲ್ಪೆ ಬೀಚ್, ಕಟೀಲು ನೋಡಿಕೊಂಡು, ಧರ್ಮಸ್ಥಳಕ್ಕೆ ತೆರಳಿದ್ದರು. ಡಿ.9ರಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಬೇಲೂರು ಮೂಲಕ ವಾಪಸ್ ಬರುವ ಸಮಯದಲ್ಲಿ ರಾತ್ರಿ 9ಗಂಟೆ ವೇಳೆಗೆ ಭೋಜನಕ್ಕೆ ಇಳಿದಿದ್ದರು. ಈ ವೇಳೆ ವಿದ್ಯಾರ್ಥಿಗಳು ಮನರಂಜನೆಗಾಗಿ ಡ್ಯಾನ್ಸ್ ಮಾಡಿದರು. ದಣಿದ ವಿದ್ಯಾರ್ಥಿಗಳು ನೀರು ಕೇಳಿದಾಗ ಮುಖ್ಯ ಶಿಕ್ಷಕ ಮತ್ತು ಸಹ ಶಿಕ್ಷಕರು ಕುಡಿಯುವ ನೀರಿಗೆ ಮದ್ಯ ಬೆರೆಸಿ ನೀಡಿದ್ದರು. ಈ ನೀರು ಕುಡಿದ 18ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊಟ್ಟೆನೋವು, ಹೊಟ್ಟೆ ಉರಿ, ವಾಂತಿಯಿಂದ ಸ್ಥಳದಲ್ಲಿಯೇ ಅಸ್ವಸ್ಥರಾದರು.
ಪ್ರವಾಸ ಮುಗಿಸಿ ಮನೆಗೆ ಬಂದ ಮಕ್ಕಳು ಅಸ್ವಸ್ಥರಾಗಿದ್ದನ್ನು ಕಂಡು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬಯಲಿಗೆ ಬಂದಿದೆ. ಬಳಿಕ, ಮುಖ್ಯ ಶಿಕ್ಷಕ ಸಚ್ಚಿದಾನಂದ ಮೂರ್ತಿ, ಸಹ ಶಿಕ್ಷಕರಾದ ಷೇಕ್ ಮುಜಾಮೀಲ್, ಧನಸಿಂಗ್ ರಾಥೋಡ್ರನ್ನು ಅಮಾನತು ಮಾಡಿ ಡಿಡಿಪಿಐ ಶಿವಶಂಕರರೆಡ್ಡಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-150x98.jpg)
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
![Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ](https://www.udayavani.com/wp-content/uploads/2024/07/hassan-150x104.jpg)
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ
![ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್](https://www.udayavani.com/wp-content/uploads/2024/07/moodigere-150x95.jpg)
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-150x105.jpg)
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
MUST WATCH
ಹೊಸ ಸೇರ್ಪಡೆ
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-150x83.jpg)
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
![rohit sharma](https://www.udayavani.com/wp-content/uploads/2024/07/rohit-150x83.jpg)
Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-150x90.jpg)
Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.