ಸಮಸ್ಯೆ ಇತ್ಯರ್ಥ್ಯಕ್ಕೆ ಸಂಘಟನೆ ಅವಶ್ಯ
Team Udayavani, Dec 15, 2017, 12:51 PM IST
ಪಿರಿಯಾಪಟ್ಟಣ: ಸಂಘಟನೆ ಕೊರತೆಯಿಂದ ಸಮಸ್ಯೆಗಳಿಗೆ ನಿವಾರಣೆ ಸಿಗುತ್ತಿಲ್ಲ ಎಂದು ರಾಜ್ಯ ಪದವೀದರ ಪ್ರಾಥಮಿಕ ಶಿಕ್ಷಕರ ಸಂಘದ ನಂಜನಗೂಡು ತಾಲೂಕು ಅಧ್ಯಕ್ಷ ಪ್ರಕಾಶ್ ತಿಳಿಸಿದರು. ಪಟ್ಟಣದ ಕೋಟೆ ಸರ್ಕಾರಿ ಶಾಲೆಯಲ್ಲಿ ನಡೆದ ಪಿರಿಯಾಪಟ್ಟಣ ತಾಲೂಕು ಪದವೀದರ ಪ್ರಾಥಮಿಕ ಶಿಕ್ಷಕರ ಸಂಘದ ಉದ್ಘಾಟನೆಯಲ್ಲಿ ಮಾತನಾಡಿದರು.
ಪ್ರಾಥಮಿಕ ಶಿಕ್ಷಣದಲ್ಲಿ 1 ರಿಂದ 5 ಮತ್ತು 6 ರಿಂದ8 ಎಂಬ ವಿಭಾಗಗಳಿದ್ದು ಶಿಕ್ಷಕರ ಮೂಲ ವೇತನದಲ್ಲೂ ಸಾಕಷ್ಟು ವ್ಯತ್ಯಾಸಗಳಿವೆ. ನೇಮಕಾತಿ ನಿಯಮದ ಅನುಸಾರ ಬಡ್ತಿಯಲ್ಲಿ ವಿಭಾಗ ಮಾಡಿ ಪದವೀದರ ಪ್ರಾಥಮಿಕ ಶಿಕ್ಷಕರಿಗೆ ಮೊದಲ ಅದ್ಯತೆ ನೀಡಬೇಕೆಂಬುದೇ ನಮ್ಮ ಕೋರಿಕೆ ಎಂದರು.
ಜಿಲ್ಲಾಧ್ಯಕ್ಷ ರವಿ, ರಾಜಾದ್ಯಂತ ಸಂಘದ ರಚನೆಯಾಗುತ್ತಿದ್ದು ಪದಾಧಿಕಾರಿಗಳ ಆಯ್ಕೆ ನಡೆಯುತ್ತಿದೆ. ಪದವೀದರ ಪ್ರಾಥಮಿಕ ಶಿಕ್ಷಕರು ತಮ್ಮ ಜೇಷ್ಠತ ಪಟ್ಟಿ ಸಿದ್ಧಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಲಿಗೆ ತಿಳಿಸಿಬೇಕು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನಮ್ಮಗಳ ವೇತನದಲ್ಲಿ ಸದಸತ್ವ ಶುಲ್ಕಕ್ಕೆಂದು 200 ರೂ.,ಕಡಿತವಾಗುತ್ತಿದ್ದು ಅದನ್ನು ಮರು ಪಾವತಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಬೇಕೆಂದರು. ನೂತನ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಮನು.ಬಿ.ಆರ್, ತನಗೆ ವಹಿಸಿದ ಜವಾಬ್ದಾರಿಗೆ ಯಾವುದೇ ಚ್ಯುತಿ ಬಾರದಂತೆ ಶಿಕ್ಷಕರ ಸಮಸ್ಯೆ ನಿವಾರಣೆಗೆ ಶ್ರಮಿಸುತ್ತೇನೆಂದರು.
ಪದಾಧಿಕಾರಿಗಳ ಆಯ್ಕೆ: ತಾಲೂಕು ಘಟಕದ ಅಧ್ಯಕ್ಷರಾಗಿ ಮನು.ಬಿಆರ್, ಉಪಾಧ್ಯಕ್ಷರಾಗಿ ಯಶಸ್ವಿನಿ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್, ಖಜಾಂಚಿಯಾಗಿ ಮಹಮದ್ ಅತಿಕ್ವುಲ್ಲ, ಸಂಘಟನಾ ಕಾರ್ಯದರ್ಶಿಯಾಗಿ ಲಂಕೇಶ್, ಮಾನಸ, ವಕ್ತಾರರಾಗಿ ಶಿವಣ್ಣ, ನಿರ್ದೇಶಕರಾಗಿ, ಸವಿತಾ, ಪುಷ್ಪವತಿ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ರಾಜ್, ಸಂಘಟನಾ ಕಾರ್ಯದರ್ಶಿ ರೂಪೇಶ್, ರಂಗಪ್ಪ, ಶಿಕ್ಷಕರಾದ ಶ್ರೀನಿವಾಸ್, ಕವಿತಾ, ಮಮತಾ, ಉಷಾ, ರಂಜಿತಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…
Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್
Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.