ಸಂಜೆ ಏಳು ಗಂಟೆ ರೈಲು ತಪ್ಪಿದರೆ ಮಧ್ಯರಾತ್ರಿವರೆಗೂ ನಿಲ್ದಾಣದಲ್ಲೇ


Team Udayavani, Dec 16, 2017, 4:19 PM IST

train.jpg

ಬೆಂಗಳೂರು: ಪ್ರಯಾಣಿಕರ ಗಮನಕ್ಕೆ. ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಸಂಜೆ 7 ಗಂಟೆಗೆ ನಿಲ್ದಾಣದಿಂದ ಹೊರಡಲಿರುವುದೇ ಕಡೆಯ ರೈಲು. ಇದು ತಪ್ಪಿದರೆ, ಮಧ್ಯರಾತ್ರಿ 12ರವರೆಗೆ ಮೆಜೆಸ್ಟಿಕ್‌ನಲ್ಲೇ ಕಾಲ ಕಳೆಯಬೇಕು! ನಿತ್ಯ ಬೆಂಗಳೂರು-ಮೈಸೂರು ನಡುವೆ ಸಂಚರಿಸುವವರಿಗೆ ಈ ರೀತಿಯ ಸೂಚನೆ ನೀಡುವ ಮೂಲಕ ನೈರುತ್ಯ ರೈಲ್ವೆ ಶಾಕ್‌ ನೀಡಿದೆ.

ಮೈಸೂರು ಮಾರ್ಗವಾಗಿ ಸಂಚರಿಸುತ್ತಿದ್ದ ಬೆಂಗಳೂರು-ಮಂಗಳೂರು-ಕಾರವಾರ ರೈಲು 2018ರ ಫೆಬ್ರವರಿ 10ರಿಂದ ಪ್ರತಿ ಭಾನುವಾರದಿಂದ ಬುಧವಾರದವರೆಗೆ ಕುಣಿಗಲ್‌ ಮಾರ್ಗವಾಗಿ ಕಾರ್ಯಾಚರಣೆ ಮಾಡಲಿದೆ. ಈ ಸಂಬಂಧ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ. ಇದರಿಂದ ವಾರದ ಈ ನಾಲ್ಕು ದಿನಗಳು ಈ ರೈಲು ಅಲಭ್ಯವಾಗಲಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲ ಆಗಲಿದೆ.

ಪ್ರತಿದಿನ ರಾತ್ರಿ 8.30ಕ್ಕೆ ಬೆಂಗಳೂರಿನಿಂದ ಹೊರಡುವ ಈ ರೈಲು ಫೆಬ್ರವರಿಯಿಂದ 7.15ಕ್ಕೆ ಬೆಂಗಳೂರಿನಿಂದ ಕುಣಿಗಲ್‌ ಮಾರ್ಗವಾಗಿ ಮಂಗಳೂರಿಗೆ ತೆರಳಲಿದೆ. ಹಾಗಾಗಿ, ಮೈಸೂರು ಮಾರ್ಗದ ಪ್ರಯಾಣಿಕರಿಗೆ 7 ಗಂಟೆಗೆ ಇಲ್ಲಿಂದ ನಿರ್ಗಮಿಸುವ ಪುಷ್‌ಪುಲ್‌ ರೈಲು ಮಾತ್ರ ಲಭ್ಯವಾಗಲಿದೆ. ಇದು ತಪ್ಪಿದರೆ, ರಾತ್ರಿ 12ಕ್ಕೆ ಹೊರಡುವ ಪ್ಯಾಸೆಂಜರ್‌ ರೈಲು ಬರುವವರೆಗೆ ಕಾಯಬೇಕು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. 

ಬೆಂಗಳೂರು-ರಾಮನಗರ ನಡುವೆ ಉಪನಗರ ರೈಲು ಸೇವೆ ಇದೆ. ಇದನ್ನು ಮುಂದಿನ ದಿನಗಳಲ್ಲಿ ಮೈಸೂರಿನವರೆಗೆ ವಿಸ್ತರಿಸುವ ಚಿಂತನೆ ಇದೆ. ಇದರಿಂದ ಮೈಸೂರಿಗೆ ತೆರಳುವ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದಂತಾಗಲಿದೆ. ಇನ್ನೂ ಈ ಪ್ರಸ್ತಾವನೆ ಪರಿಶೀಲನಾ ಹಂತದಲ್ಲಿದ್ದು, ಅಂತಿಮಗೊಂಡ ನಂತರ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ನೈರುತ್ಯ ರೈಲ್ವೆ ಉಪ ಪ್ರಧಾನ ವ್ಯವಸ್ಥಾಪಕಿ ಇ. ವಿಜಯಾ ತಿಳಿಸಿದ್ದಾರೆ.

ಪರ್ಯಾಯ ಸೇವೆಗೆ ಆಗ್ರಹ: ಇಡೀ ರಾಜ್ಯದಲ್ಲಿ ಬೆಂಗಳೂರು-ಮೈಸೂರು ನಡುವೆ ಅತಿ ಹೆಚ್ಚು 20 ವಿವಿಧ ಪ್ರಕಾರದ ರೈಲುಗಳು ಸಂಚರಿಸುತ್ತವೆ.  ಪ್ರತಿದಿನ ಕನಿಷ್ಠ ಸುಮಾರು 20 ಸಾವಿರ ಜನ ಸಂಚರಿಸುತ್ತಾರೆ. ಅದರಲ್ಲೂ ರಾಮನಗರ, ಚನ್ನಪಟ್ಟಣ ಸೇರಿದಂತೆ ಸುತ್ತಮುತ್ತಲಿನಿಂದ 5-6 ಸಾವಿರ ಜನ ಬೆಂಗಳೂರಿಗೆ ಕೆಲಸಕ್ಕೆ ಬರುತ್ತಾರೆ. ಅವರಲ್ಲಿ ಬಹುತೇಕರು 8.30ರ ರೈಲು ಅವಲಂಬಿಸಿದ್ದಾರೆ.

ಜತೆಗೆ ಪ್ರವಾಸಿ ತಾಣವಾಗಿರುವ ಮೈಸೂರಿಗೂ ಹೆಚ್ಚು ಜನ ತೆರಳುತ್ತಾರೆ. ಈಗ ಏಕಾಏಕಿ ಮಾರ್ಗ ಬದಲಾವಣೆಯಿಂದ ಸಾಕಷ್ಟು ಸಮಸ್ಯೆ ಆಗಲಿದೆ. ಆದ್ದರಿಂದ ಕೂಡಲೇ ಇದಕ್ಕೆ ಪರ್ಯಾಯ ಸೇವೆ ಕಲ್ಪಿಸಬೇಕು ಎಂದು ಕರ್ನಾಟಕ ರೈಲ್ವೆ ವೇದಿಕೆ ಸಂಚಾಲಕ ಟಿ.ಪಿ. ಲೋಕೇಶ್‌ ಆಗ್ರಹಿಸುತ್ತಾರೆ.  ಬೆಂಗಳೂರಿನಿಂದ ಕುಣಿಗಲ್‌ ಮಾರ್ಗವಾಗಿ ಮಂಗಳೂರಿಗೆ ಹೋಗುವುದರಿಂದ ಸುಮಾರು 80 ಕಿ.ಮೀ. ಕಡಿಮೆ ಆಗುವುದರ ಜತೆಗೆ 2 ತಾಸು ಉಳಿತಾಯ ಕೂಡ ಆಗಲಿದೆ.

ಪ್ರಯಾಣಿಕರ ಹಿತದೃಷ್ಟಿಯಿಂದ ಇದು ಒಳ್ಳೆಯದು. ಇದನ್ನು ನಾಲ್ಕು ದಿನಕ್ಕೆ ಸೀಮಿತಗೊಳಿಸದೆ, ವಾರವಿಡೀ ವಿಸ್ತರಿಸಲಿ. ಆದರೆ, ಇದಕ್ಕೆ ಪರ್ಯಾಯವಾಗಿ ಮೈಸೂರಿಗೆ ರಾತ್ರಿ 8ರಿಂದ 8.30ರ ಅವಧಿಯಲ್ಲಿ ಮೆಮು ರೈಲು ಸೇವೆ ಆರಂಭಿಸಬೇಕು. ಇದರಿಂದ ಸಾವಿರಾರು ಜನರಿಗೆ ಅನುಕೂಲ ಆಗಲಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

mng-Rain

Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ

Anand-ZP-CEO-DK

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.