ದೇವಸ್ಥಾನ ಅಧ್ಯಕ್ಷರಿಂದ ಮಸೀದಿಗೆ ಭೂದಾನ !


Team Udayavani, Dec 17, 2017, 1:59 PM IST

1612kpk4Bhumi.jpg

ಪುತ್ತೂರು: ಕೋಮುಸೂಕ್ಷ್ಮ ಜಿಲ್ಲೆಯೆಂದೇ ಗುರುತಿಸಲ್ಪಟ್ಟಿರುವ ಕರಾವಳಿಯಲ್ಲಿ ಸಣ್ಣಪುಟ್ಟ ವಿಚಾರಕ್ಕೂ ಕೋಮು ಭಾವನೆಗಳು ಕೆರಳುತ್ತಿದ್ದು, ನೋವು, ಸಂಕಷ್ಟ, ಜೀವಹಾನಿಗಳು ಸಂಭವಿಸುತ್ತಿವೆ. ಇವೆಲ್ಲದರ ನಡುವೆ ಮಸೀದಿಗಾಗಿ ತನ್ನ ಸ್ವಂತ ಭೂಮಿಯನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷರೊಬ್ಬರು ಸೌಹಾರ್ದಕ್ಕೆ ಸಾಕ್ಷಿಯಾಗಿದ್ದಾರೆ.

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮ ಓಲೆಮುಂಡೋವು ನಿವಾಸಿ ಮೋಹನ್‌ ರೈ ಅವರು ತನ್ನ ಭೂಮಿಯನ್ನು ಮಸೀದಿಗೆ ದಾನ ಮಾಡುವ ಮೂಲಕ ಕೋಮು ಸಾಮರಸ್ಯ ಮೆರೆದವರು.

ಓಲೆಮುಂಡೋವು ನಿವಾಸಿ ಪ್ರಗತಿಪರ ಕೃಷಿಕರೂ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರೂ ಆಗಿರುವ ಓಲೆಮುಂಡೋವು ಮೋಹನ್‌ ರೈ ಅವರ ಜಾಗಕ್ಕೆ ತಾಗಿಕೊಂಡೇ ಓಲೆಮುಂಡೋವು ದರ್ಗಾ ಮತ್ತು ಮಸೀದಿ ಇದೆ. ದರ್ಗಾ ಕಟ್ಟಡ ವಿಸ್ತರಣೆಗೆ ಸ್ಥಳಾವಕಾಶದ ಕೊರತೆ ಇರುವ ಕಾರಣ ಮಸೀದಿ ಸಮಿತಿಯವರು ಮೋಹನ್‌ ರೈ ಅವರಲ್ಲಿ ಜಾಗವನ್ನು ನೀಡುವಂತೆ ಕೇಳಿಕೊಂಡಿದ್ದರು. 

ಮಸೀದಿಯವರ ಬೇಡಿಕೆಗೆ ಸಮ್ಮತಿಸಿದ ಅವರು  ಡಿ. 15 ರಂದು ಶುಕ್ರವಾರ ಮಸೀದಿಗೆ ತೆರಳಿ ತನ್ನ ಸ್ವಾಧೀನದ ಪಟ್ಟಾ ಜಾಗದಲ್ಲಿ ಸುಮಾರು 12 ಸೆಂಟ್ಸ್‌ ಸ್ಥಳವನ್ನು ಮಸೀದಿಗೆ ಬಿಟ್ಟುಕೊಡುವುದಾಗಿ ವಾಗ್ಧಾನ ಮಾಡಿದ್ದಾರೆ.

ಓಲೆಮುಂಡೋವು ದರ್ಗಾದಲ್ಲಿ ನಡೆಯುವ ಉರೂಸ್‌ ಕಾರ್ಯಕ್ರಮಗಳಲ್ಲಿ ಈ ಹಿಂದೆಯೂ ಭಾಗವಹಿಸುತ್ತಾ ತನ್ನಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಸಹಕಾರವನ್ನು ನೀಡುತ್ತಿದ್ದ ಮೋಹನ್‌ ರೈ ಅವರು ಕೆಯ್ಯೂರು ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದಾರೆ. ಶುಕ್ರವಾರ ಮಸೀದಿಗೆ ಆಗಮಿಸಿ ಭೂಮಿಯನ್ನು ದಾನ ಮಾಡುವ ವೇಳೆ ಓಲೆಮುಂಡೋವು ಮಸೀದಿ ಅಧ್ಯಕ್ಷ ಪುತ್ತುಮೋನು ಹಾಜಿ, ಮಸೀದಿಯ ಖತೀಬರಾದ ಸಯ್ಯದಲವಿ ತಂšಳ್‌ ಮಾಸ್ತಿಕುಂಡು, ಉಮ್ಮರ್‌ ಮುಸ್ಲಿಯಾರ್‌, ಇಬ್ರಾಹಿಂ ಕಡ್ಯ, ರೆಂಜಲಾಡಿ ಇಸ್ಲಾಮಿಕ್‌ ಸೆಂಟರ್‌ನ ಸಂಚಾಲಕ ಕೆ.ಆರ್‌. ಹುಸೈನ್‌ ದಾರಿಮಿ ರೆಂಜಲಾಡಿ  ಉಪಸ್ಥಿತರಿದ್ದರು.

ನನ್ನ ಜಾಗದ ಪಕ್ಕದಲ್ಲೇ ಮಸೀದಿ ಮತ್ತು ದರ್ಗಾ ಇದೆ, ಅವರಿಗೆ ಸ್ಥಳಾವಕಾಶದ ಕೊರತೆ ಇತ್ತು, ಇದಕ್ಕಾಗಿ ನಾನು 12 ಸೆಂಟ್ಸ್‌ ಸ್ಥಳವನ್ನು ಮಸೀದಿಗೆ ಉಚಿತವಾಗಿ ನೀಡಿದ್ದೇನೆ. ಎಷ್ಟು ಜಾಗ ಅವರಿಗೆ ಬೇಕಿತ್ತೂ ಅಷ್ಟು ನೀಡಿದ್ದೇನೆ. ದೇವರು ಎಲ್ಲರಿಗೂ ಒಬ್ಬನೇ ಆಗಿದ್ದಾನೆ, ನಾವು ಎಲ್ಲರನ್ನೂ ಗೌರವಿಸಬೇಕು, ಕೋಮುಗಳ ಮಧ್ಯೆ ಪರಸ್ಪರ ಅಪನಂಬಿಕೆ ಸಲ್ಲದು, ಯಾರಧ್ದೋ ಸಾವಿನಲ್ಲಿ ಸಂತೋಷಪಡುವ ಮನೋಭಾವ ನಮ್ಮದಾಗಬಾರದು. ನನಗೆ ದೇವರು ಎಲ್ಲವನ್ನೂ ಕೊಟ್ಟಿದ್ದಾನೆ, ಅವನು ಕೊಟ್ಟಿದ್ದ ಭೂಮಿಯಿಂದ ಸ್ವಲ್ಪ ಭಾಗವನ್ನು ದೇವರಿಗೆ ಕೊಟ್ಟಿದ್ದೇನೆ. ನಾವು ಯಾರೇ ಆಗಲಿ ಜಾತಿ, ಧರ್ಮದ ಹೆಸರಿನಲ್ಲಿ ಎಂದಿಗೂ ಕಚ್ಚಾಟ ಮಾಡಬಾರದು ಅದರಿಂದ ಯಾರಿಗೂ ಏನೂ ಲಾಭವಿಲ್ಲ.
 ಓಲೆಮುಂಡೋವು ಮೋಹನ್‌ ರೈ, ಅಧ್ಯಕ್ಷರು ವಿಷ್ಣುಮೂರ್ತಿ ದೇವಸ್ಥಾನ

ಇದೊಂದು ಅತ್ಯಂತ ಅವಿಸ್ಮರಣೀಯ ದಿನವಾಗಿದೆ. ಓಲೆಮುಂಡೋವು ಮೋಹನ್‌ ರೈಗಳಂತಹ ಹೃದಯವಂತಿಕೆ ಪ್ರತಿಯೊಬ್ಬ ಭಾರತೀಯನಲ್ಲೂ ಇರಬೇಕು. ಹಿಂದೂ- ಮುಸ್ಲಿಂ ಸಮುದಾಯದವರು ಸಹಕಾರದಿಂದ ಬದುಕು ಸಾಗಿಸುವಂತಾದರೆ ಅದಕ್ಕಿಂತ ದೊಡ್ಡ ಸಂಪತ್ತು ದೇಶಕ್ಕೆ ಬೇರೆ ಬೇಕಿಲ್ಲ. ರೈಗಳು  ಜಗತ್ತೇ ಮೆಚ್ಚುವ ಕೆಲಸವನ್ನು ಮಾಡಿದ್ದಾರೆ.
ಕೆ.ಆರ್‌. ಹುಸೈನ್‌ ದಾರಿಮಿ ರೆಂಜಲಾಡಿ, ಸಂಚಾಲಕರು, ರೆಂಜಲಾಡಿ ಇಸ್ಲಾಮಿಕ್‌ ಸೆಂಟರ್‌

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.