ಆಲಂಕಾರಿನಿಂದ ಕುದ್ಮಾರು, ಸವಣೂರು ಮಾರ್ಗವಾಗಿ ನೂತನ ಬಸ್ ಸಂಚಾರ ಆರಂಭ
Team Udayavani, Dec 17, 2017, 4:53 PM IST
ಆಲಂಕಾರು: ಕುಮಾರಧಾರಾ ನದಿಗೆ ಶಾಂತಿಮೊಗರು ಬಳಿ ನಿರ್ಮಿಸಲಾದ ಸೇತುವೆ ಉದ್ಘಾಟನೆಗೊಂಡಿರುವುದರಿಂದ
ಕಡಬ, ಆಲಂಕಾರು, ಕುದ್ಮಾರು, ಸವಣೂರು ಮಾರ್ಗವಾಗಿ ಪುತ್ತೂರನ್ನು ಸಂಪರ್ಕಿಸುವ ನೂತನ ಬಸ್ ಸಂಚಾರ
ಶನಿವಾರದಿಂದ ಆರಂಭವಾಗಿದೆ. ಧರ್ಮಸ್ಥಳ ಘಟಕದಿಂದ ಈ ಸೇವೆ ಆರಂಭವಾಗಿದ್ದು, ಆಲಂಕಾರಿನಲ್ಲಿ ಸಾರ್ವಜನಿಕರು ಬಸ್ಸನ್ನು ವಿಜೃಂಭಣೆ ಯಿಂದ ಸ್ವಾಗತಿಸಿದರು.
ಬಸ್ಸಂಚಾರದ ವೇಳಾಪಟ್ಟಿ
ಬೆಳಗ್ಗೆ ಪುತ್ತೂರಿನಿಂದ ಕಡಬಕ್ಕೆ 6.30ಕ್ಕೆ ಬಸ್ ಹೊರಡಲಿದೆ. ಬಳಿಕ 9.15ಕ್ಕೆ ಕಡಬದಿಂದ ಪುತ್ತೂರಿಗೆ, 10.30ಕ್ಕೆ ಪುತ್ತೂರಿನಿಂದ ಕಡಬಕ್ಕೆ, 3.15ಕ್ಕೆ ಕಡಬದಿಂದ ಪುತ್ತೂರಿಗೆ, 4.30ಕ್ಕೆ ಪುತ್ತೂರಿನಿಂದ ಕಡಬಕ್ಕೆ, 5.45ಕ್ಕೆ ಕಡಬದಿಂದ ಪುತ್ತೂರಿಗೆ ಪ್ರಯಾಣ ಬೆಳೆಸಿ ದಿನದ ಸಂಚಾರವನ್ನು ಕೊನೆಗೊಳಿಸಲಿದೆ. ಬಸ್ಸಂಚಾರವನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಇತರ ರೂಟ್ಗಳ ಬಸ್ ಸಂಚಾರದ ವೇಳಾ ಪಟ್ಟಿಯನ್ನು ಹೊಂದಾಣಿಕೆ ಮಾಡಿ ಸಂಚಾರದ ವೇಳಾಪಟ್ಟಿ ಬದಲಾಗುವ ಸಾಧ್ಯತೆಗಳಿವೆ ಎಂದು ಕಡಬ ಸಂಚಾರಿ ನಿಯಂತ್ರಕರು ತಿಳಿಸಿದ್ದಾರೆ.
ಬಸ್ಗೆ ಸ್ವಾಗತ
ನೂತನ ಬಸ್ ಕಡಬದಿಂದ ಸಂಚಾರ ಆರಂಭಿಸಿದೆ ಎಂದು ತಿಳಿಯುತ್ತಿದ್ದಂತೆ ಆಲಂಕಾರಿನ ಜನತೆ ಸಂಭ್ರಮದಿಂದ ಸ್ವಾಗತಿಸಲು ಕಾತರದಿಂದ ಕಾಯುತ್ತಿದ್ದರು. ಬಸ್ ಆಲಂಕಾರು ಶರವೂರು ದುರ್ಗಾಪರಮೇಶ್ವರೀ ದೇವಾಲಯದ ಸ್ವಾಗತ ಗೋಪುರ ಪ್ರವೇಶಿಸುತ್ತಿದ್ದಂತೆ, ಹೂಹಾರ ಹಾಕಿ ಸ್ವಾಗತಿಸಲಾಯಿತು. ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಹೂಗುತ್ಛ ನೀಡಿ ಗ್ರಾಮಸ್ಥರು ಬರಮಾಡಿಕೊಂಡರು. ಬಳಿಕ ರಸ್ತೆಗೆ ತೆಂಗಿನಕಾಯಿ ಒಡೆಯುವುದರ ಮೂಲಕ ಧಾರ್ಮಿಕವಾಗಿ ಸ್ವಾಗತಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್ ಚೌಟ
Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.