ನನಸಾಯ್ತು ಅನ್ನದಾತನ ದಶಕದ ಕನಸು


Team Udayavani, Dec 18, 2017, 12:42 PM IST

Alisagra_Lift_Irrigation_Scheme_Pump_House.jpg

ವಿಜಯಪುರ: ಕಳೆದ ಆರೇಳು ದಶಕಗಳಿಂದ ತನ್ನ ಜಮೀನಿಗೆ ನೀರು ಹರಿಯುತ್ತದೆ ಎಂದು ಕಾಯುತ್ತಲೇ ಇದ್ದ ಬಬಲೇಶ್ವರ ಭಾಗದ ಅನ್ನದಾತನ ಕನಸು ಇದೀಗ ನನಸಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸಲು ಮುಳವಾಡ ಏತ ನೀರಾವರಿಯ ಬಬಲೇಶ್ವರ ಶಾಖಾ ನಾಲೆಗೆ ಹರಿಯಲು ಆರಂಭಿಸಿದ್ದು ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಸ್ವಾತಂತ್ರ್ಯ ಪೂರ್ವದಲ್ಲೇ ಬ್ರಿಟೀಷ ರಿಂದ ಸಮೀಕ್ಷೆ ಕಂಡಿದ್ದ ಮುಳವಾಡ ಏತ ನೀರಾವರಿ ಯೋಜನೆ ಭರವಸೆಗಳ ಮೂಟೆ ಹೊರುತ್ತಲೇ ಬರುತ್ತಿತ್ತು. ಸದರಿ ಯೋಜನೆ ಅನುಷ್ಠಾನಕ್ಕಾಗಿ ಹತ್ತು ಹಲವು ಸ್ವರೂಪದಲ್ಲಿ ಹೋರಾಟ ಮಾಡಿದ್ದ ರೈತರು, ಒಂದಲ್ಲ ಒಂದು ದಿನ ತಮ್ಮ ಜಮೀನಿಗೆ ನೀರು ಹರಿಯುತ್ತದೆ ಎಂಬ ಭರವಸೆಯ ಕಂಗಳಲ್ಲಿ ಕನಸುಗಳನ್ನೇ ಕಟ್ಟಿಕೊಂಡಿದ್ದರು.

ಸದರಿ ಯೋಜನೆ ಏತ ನೀರಾವರಿ ಯೋಜನೆಯಲ್ಲಿಯೇ ಬೃಹತ್‌ ಯೋಜನೆ ಎನಿಸಿಕೊಂಡಿರುವ ಯೋಜನೆ ಇದೀಗ ಕಾಲುವೆಗೆ ನೀರು ಹರಿಯುತ್ತಿದೆ. ಮೊದಲ ಹಂತವಾಗಿ ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಸದರಿ ಏತ ನೀರಾವರಿ ಯೋಜನೆಯ ನಾಲೆಗೆ ನೀರು ಹರಿಸುವ ಪ್ರಾಯೋಗಿಕ ಕಾರ್ಯಕ್ಕೆ ಚಾನೆ ದೊರೆತಿದೆ. ಬೃಹದ್ದಾಕಾರದ ಫೈಲುಗಳು ಉಗುಳುತ್ತಿರುವ ನೀರು ಕಂಡು ರೈತರ ಮೊಗದಲ್ಲಿ ಸಂತಸ ಉಕ್ಕಿ ಹರಿಯುತ್ತಿದೆ. 

ಮುಳವಾಡ ಏತ ನೀರಾವರಿ ಯೋಜನೆಗಾಗಿ ಹತ್ತು ಹಲವು ಸ್ವರೂಪದಲ್ಲಿ ನಡೆಸಿದ್ದ ಹೋರಾಟಗಳು ಒಂದು ಹಂತದಲ್ಲಿ ಬೃಹತ್‌ ಪ್ರತಿಭಟನೆಯ ಸ್ವರೂಪವನ್ನೇ ಪಡೆದಿತ್ತು. ಆದರೆ ಸರ್ಕಾರಗಳ ನಿರ್ಲಕ್ಷ್ಯ, ಆಳುವವರ ನಿರಾಸಕ್ತಿ, ಇಚ್ಛಾಶಕ್ತಿ ಕೊರತೆ ಪರಿಣಾಮ ಮುಳವಾಡ ಯೋಜನೆ ನೀರು ಹರಿಸುವ ಬದಲು ಕಣ್ಣೀರು ಹರಿಸುತ್ತದೆ ಅಷ್ಟೇ ಎಂಬ ನಿರಾಸೆಯೂ ಮೂಡಿತ್ತು. 

ಇದೀಗ ಹಲವು ದಶಕಳ ಹೋರಾಟದ ಫಲ ಹಾಗೂ ಹಿರಿಯರು ಕಂಡಿದ್ದ ಕನಸು ನನಸಾಗಿದೆ ಎಂದು ಯೋಜನೆ ಅನುಷ್ಠಾನದ ಹೋರಾಟದ ಮುಂಚೂಣಿಯಲ್ಲಿದ್ದ ನೀಲಗುಂದ ಶ್ರೀಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಡಾ| ಎಂ.ಬಿ. ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾದ ಕಾರಣ ಹಾಗೂ ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವ ಕನಸು ಕಟ್ಟಿಕೊಂಡು, ಸಾಕಾರ ಮಾಡುವ ಛಲದ ಪರಿಣಾಮವೇ ಬಬಲೇಶ್ವರದಂಥ ಹಳ್ಳಿಗಳ ರೈತರ ಮನೆ ಬಾಗಿಲಿಗೆ ಕೃಷ್ಣೆ ತಲುಪುವಂತಾಗಿದೆ. ಬಸವ ನಾಡಿನಲ್ಲೇ ನಾನು ಜನಿಸಿ, ಈ ಜಿಲ್ಲೆಯ ಜನರ ಆಶೀರ್ವಾದದ ಫಲವಾಗಿ ಸಚಿವ ಮಾತ್ರವಲ್ಲ ಜಲಸಂಪನ್ಮೂಲ ಖಾತೆ ದೊರೆತಿದೆ.

ಅದನ್ನು ಸಮರ್ಥವಾಗಿ ಬಳಸಿಕೊಂಡು ಜಿಲ್ಲೆಯ ಜನರ ಋಣ ತೀರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಅಷ್ಟೇ ಎಂದು ಯೋಜನೆಗೆ ಚಾಲನೆ ನೀಡಿದ ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಅವರು ಹೇಳುವ ಮೂಲಕ ವಿನೀತ ಭಾವ ಪ್ರದರ್ಶಿಸಿರುವುದು ನಿಜಕ್ಕೂ ಅನುಕರಣೀಯ.

ಯೋಜನೆ ಅನುಷ್ಠಾನಕ್ಕೆ ಕಳೆದ ಹಲವು ದಶಕಗಳಿಂದ ನಡೆಸಿದ ಹೋರಾಟಗಾರರ ಪರಿಶ್ರಮ, ಜನರ ಮನದಲ್ಲಿ ನೀರಿನ ಜಾಗೃತಿ ಹೋರಾಟ ರೂಪಿಸಲು ಪ್ರೇರಕ ಶಕ್ತಿಯಾಗಿದ್ದ ಜಿಲ್ಲೆ ಮಠಾಧೀಶರು, ಜಿಲ್ಲೆಯ ನಾಯಕರ ಐಕ್ಯತೆ ಹಾಗೂ ಸಂಘಟಿತ ಹೋರಾಟದ ಫಲ ಇದೀಗ ನಾಲೆಗೆ ನೀರಾಗಿ ಹರಿಸು ಬರುತ್ತಿದೆ. ಈ ಕೆಲಸದಲ್ಲಿ ಅಧಿಕಾರಿಗಳು ಮಾಡಿದ ಪರಿಶ್ರಮವನ್ನು ಮರೆಯಬಾರದು ಎನ್ನುತ್ತಾರೆ ಸಚಿವ ಡಾ| ಎಂ.ಬಿ. ಪಾಟೀಲ.

64 ಸಾವಿರ ಎಕರೆ ಭೂಮಿ ನೀರಾವರಿ ಒಟ್ಟಾರೆಯಾಗಿ 5 ಲಕ್ಷ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಮಹತ್ವದ
ಯೋಜನೆಯಾಗಿದ್ದು, ಅದರಲ್ಲಿ 4 ಎ ಲಿಫ್ಟ್‌ ಅಡಿಯಲ್ಲಿಯೇ 64,210 ಎಕರೆ ಭೂಮಿ ನೀರಾವರಿಗೊಳಪಡಲಿದೆ. ಮುಳವಾಡ, ಕಾರಜೋಳ, ಕಾಖಂಡಕಿ, ಬಬಲೇಶ್ವರ, ನಿಡೋಣಿ, ತೊನಶ್ಯಾಳ, ಕುಬಕಡ್ಡಿ, ಸಾರವಾಡ, ದೂಡಿಹಾಳ, ಮದಗುಣಕಿ, ಶೇಗುಣಸಿ, ಕಂಬಾಗಿ, ಹಲಗಣಿ, ಯಕ್ಕುಂಡಿ, ಕನಮುಚನಾಳ, ದಾಶ್ಯಾಳ, ತಿಗಣಿಬಿದರಿ, ನಾಗರಾಳ, ಕುಮಠೆ, ಅರ್ಜುಣಗಿ, ಹೊಕ್ಕುಂಡಿ, ಜಮಖಂಡಿ ತಾಲೂಕಿನ ಖಾಜಿಬೀಳಗಿ, ಗೋಠೆ, ತೊದಲಬಾಗಿ, ಕಲಬೀಳಗಿ, ಗದ್ಯಾಳ ಗ್ರಾಮಗಳ 64,210 ಎಕರೆ ಭೂಮಿ ನೀರಾವರಿಗೊಳಪಡಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.