ಇಂದಿರಾಗಿಂತ ನಾವೇ ಹೆಚ್ಚು ಪ್ರಬಲ: ಮೋದಿ


Team Udayavani, Dec 21, 2017, 7:35 AM IST

modi-1.jpg

ನವದೆಹಲಿ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿನ ಕಾಂಗ್ರೆಸ್‌ಗಿಂತಲೂ ಈಗಿನ ಬಿಜೆಪಿ ಹೆಚ್ಚು ಪ್ರಬಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. 

ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫ‌ಲಿತಾಂಶ ಪ್ರಕಟವಾದ ಮೇಲೆ ಇದೇ ಮೊದಲ ಬಾರಿಗೆ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈಗ 19 ರಾಜ್ಯಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ  ಸರ್ಕಾರಗಳಿವೆ. ವಿಶೇಷವೆಂದರೆ ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದ ವೇಳೆ ದೇಶದಲ್ಲಿ 18 ಕಾಂಗ್ರೆಸ್‌ ಆಡಳಿತದ ಸರ್ಕಾರಗಳಿದ್ದವು. ನಾವು ಈ ಸಂಖ್ಯೆಯನ್ನೂ ಮೀರಿದ್ದೇವೆ ಎಂದರು. 

80ರ ದಶಕದಲ್ಲಿ ಕೇವಲ 2 ಸ್ಥಾನ ಹೊಂದಿದ್ದ ಬಿಜೆಪಿ, ಈಗ ಈ ಪ್ರಮಾಣದ ಸಾಧನೆ ಮಾಡಿರುವ ಬಗ್ಗೆ ನೆನೆದು ಭಾವುಕರಾದರು. ಕಣ್ಣಲ್ಲಿ ನೀರು ತುಂಬಿಕೊಂಡಿದ್ದರೂ ಹೊರಗೆ ತೋರದೇ ಪಕ್ಷದಕ್ಕಾಗಿ ದುಡಿದ ನಾಯಕರ ಸ್ಮರಿಸಿದರು. ಅಲ್ಲದೆ ಲೋಕಸಭೆ ಚುನಾವಣೆ ವೇಳೆ ಗುಜರಾತ್‌ನಲ್ಲಿನ ಸಾಧನೆ ಕಂಡು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಹೇಳಿದ್ದ ಮಾತುಗಳನ್ನೂ ನೆನಪಿಸಿಕೊಂಡರು. 

ಯುವಕರ ಬೆಳೆಸಿ: ಈ ಮಧ್ಯೆ, ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಫ‌ಲಿತಾಂಶದ ಬಗ್ಗೆ ಮಾತನಾಡುತ್ತಲೇ ಕಾಂಗ್ರೆಸ್‌ ಪಕ್ಷವನ್ನೂ ತಿವಿದರು. ಕಾಂಗ್ರೆಸ್‌ ನಾಯಕರು ತಮಗೆ ನೈತಿಕ ಗೆಲುವು ಸಿಕ್ಕಿದೆ ಎಂದು ಮಾತನಾಡುತ್ತಿದ್ದಾರೆ. ಇದು ಹಾಸ್ಯಾಸ್ಪದ ವಿಚಾರ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ನಾಯಕರು, ಕಾರ್ಯಕರ್ತರು ಮೈಮರೆಯ ಬಾರದು. ತಕ್ಷಣದಿಂದಲೇ 2018ರಲ್ಲಿ ನಡೆಯುವ ರಾಜ್ಯ ವಿಧಾನಸಭೆಗಳ ಚುನಾವಣೆ ಮತ್ತು 2019ರ ಲೋಕಸಭೆ ಚುನಾವಣೆಗಾಗಿ ಈಗಿನಿಂದಲೇ ಸಿದ್ಧವಾಗಬೇಕು ಎಂದು ಎಚ್ಚರಿಕೆ ರೂಪದ ಕರೆ ನೀಡಿದರು. 

1995ರ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸಿಕೊಂಡಿದೆ. ಇದಕ್ಕೆ ಆ ಪಕ್ಷ ಯುವಕರನ್ನು ಬಳಸಿಕೊಂಡ ರೀತಿ ಕಾರಣ. ಹೀಗಾಗಿ ಪಕ್ಷದ ಒಳಗೆ ಮತ್ತು ಹೊರಗೆ ಯುವಕರನ್ನು ಮುನ್ನಲೆಗೆ ಕರೆದುಕೊಂಡು ಬರಲು ಶ್ರಮಿಸಬೇಕು. ಈ ಮೂಲಕವೇ ಪಕ್ಷವನ್ನು ಮತ್ತಷ್ಟು ಗಟ್ಟಿ ಮಾಡಬೇಕು ಎಂಬ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‌ಕುಮಾರ್‌ ಹೇಳಿದ್ದಾರೆ.

ಇದಲ್ಲದೇ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಯಾವುದೇ ರೀತಿಯ ಆರೋಪ ಮಾಡಲಿ, ಸುಳ್ಳು ಸುದ್ದಿ ಹಬ್ಬಿಸಲಿ, ಯಾವುದೇ ಕಾರಣಕ್ಕೂ ಕಾರ್ಯಕರ್ತರು ಹೆದರುವುದು ಬೇಡ ಎಂಬ ಸಲಹೆಯನ್ನೂ ಮೋದಿ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. 
2022ರ ವೇಳೆಗೆ ಹೊಸ ಭಾರತ ನಿರ್ಮಿಸಲು ಎಲ್ಲರೂ ಶ್ರಮಿಸಬೇಕಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಿ ಎಂದೂ ಸೂಚಿಸಿದ್ದಾರೆ. ಈ ಮಧ್ಯೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಕೂಡ, ಕಾಂಗ್ರೆಸ್‌ ನೈತಿಕ ಗೆಲುವಿನ ಬಗ್ಗೆ ಹಾಸ್ಯಾಸ್ಪದ ವಿಚಾರ ಎಂದಿದ್ದಾರೆ. ಸೋತರೂ, ನಾವು ಗೆದ್ದಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ ನಾವು ಈ ಹಿಂದಿನ ಎಲ್ಲ ಚುನಾವಣೆಗಳಿಗಿಂತ ಈ ಬಾರಿ ಹೆಚ್ಚಿನ ವೋಟ್‌ ಶೇರ್‌ ಪಡೆದಿದ್ದೇವೆ ಎಂದಿದ್ದಾರೆ. 

ಭಾವುಕರಾದ ಪ್ರಧಾನಿ
ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಹಿಂದಿನ ಸ್ವರೂಪ “ಜನಸಂಘ’ವನ್ನು ಗುಜರಾತ್‌ನಲ್ಲಿ ಕಟ್ಟಿ ಬೆಳೆಸಿದ ಸಂಘಟನೆಯ ದಿಗ್ಗಜರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ ಗದ್ಗದಿತರಾದರು. ಗುಜರಾತ್‌ನಲ್ಲಿ ಅವಿರತ ದುಡಿಮೆಯಿಂದ ಜನ ಸಂಘ ಕಟ್ಟಿದ ಮಕರಂದ್‌ ದೇಸಾಯಿ, ಅರವಿಂದ್‌ ಮನಿವರ್‌  ವಸಂತ್‌ ರಾವ್‌ ಗಜೇಂದ್ರಗಡ್ಕರ್‌ ಹಾಗೂ ಇತರರನ್ನು ನೆನೆದ ಮೋದಿ, ಗದ್ಗದಿತರಾದರು. ಅಂಥ ಹಲವಾರು ಮಹನೀಯರ ತ್ಯಾಗ, ಪರಿಶ್ರಮಗಳನ್ನು ಬಣ್ಣಿಸುವಾಗ ಬಂದ ಕಣ್ಣೀರನ್ನು ಎರಡು-ಮೂರು ಬಾರಿ ತಡೆ ಹಿಡಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.