ಶಿರಾಡಿ ಕಾಮಗಾರಿ: ಪರ್ಯಾಯ ರಸ್ತೆಗೆ ಜಿಲ್ಲಾಧಿಕಾರಿ ಸ್ಥಳ ಸಮೀಕ್ಷೆ
Team Udayavani, Dec 22, 2017, 11:06 AM IST
ಮಂಗಳೂರು: ಶಿರಾಡಿ ಘಾಟಿ ಎರಡನೇ ಹಂತದ ರಸ್ತೆ ಕಾಮಗಾರಿ ಸಂದರ್ಭದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸುವ ಇಲ್ಲವೇ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಪರಿಶೀಲಿಸಲು ದ.ಕ. ಜಿಲ್ಲಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ, ತೀರ್ಮಾನಿಸಲಾಗುವುದು ಎಂದು ಸಚಿವ ಬಿ. ರಮಾನಾಥ ರೈ ತಿಳಿಸಿದರು.
ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಸ್ತೆ ಗುಣಮಟ್ಟ ಹಾಗೂ ಸಾರ್ವಜನಿಕರ ಹಿತಾಸಕ್ತಿ ಗಮನಿಸಿ ಹೆಚ್ಚು ವಿಳಂಬಿಸದೆ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಅವರು ತಿಳಿಸಿದರು. ಸಚಿವ ಯು.ಟಿ. ಖಾದರ್ ಮಾತನಾಡಿ, ಶಿರಾಡಿ ಘಾಟಿ ರಸ್ತೆಯ ಕಾಮಗಾರಿ ಆರಂಭಿಸುವುದಕ್ಕೂ ಮೊದಲು ಚಾರ್ಮಾಡಿ ಘಾಟಿ ರಸ್ತೆಯ ಅಭಿವೃದ್ಧಿ ಹಾಗೂ ಅಗಲಗೊಳಿಸುವ ಕಾಮಗಾರಿ ನಡೆಸಬೇಕು ಎಂದರು.
ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ರಸ್ತೆಯನ್ನು ಏಕಕಾಲದಲ್ಲಿ ಸಂಪೂರ್ಣ ಮುಚ್ಚುವ ಅಗತ್ಯ ವಿಲ್ಲ. ಕೈಕಂಬ- ಕಡಬ – ಉಪ್ಪಿನಂಗಡಿ ಮಾರ್ಗ ದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬಹುದು. ಸಣ್ಣಪುಟ್ಟ ಮೋರಿ ಕಾಮಗಾರಿ ಸಂದರ್ಭ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದು ಎಂದರು. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಮಾತನಾಡಿ, ಕಾಮಗಾರಿ ತ್ವರಿತವಾಗಿ ಪೂರ್ಣಗೊಳ್ಳುವ ಸಲುವಾಗಿ ಲೋಕೋಪಯೋಗಿ ಇಲಾಖೆಗೆ ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಎರಡು ಮರಳು ಬ್ಲಾಕ್ಗಳನ್ನು ಹಂಚಿಕೆ ಮಾಡಲಾಗುವುದು ಎಂದರು.
ಲೋಕೋಪಯೋಗಿ ಇಲಾಖೆ ಎಂಜಿನಿಯರ್ (ರಾ.ಹೆ.) ರಮೇಶ್ ಮಾತನಾಡಿ, ದ್ವಿತೀಯ ಹಂತದಲ್ಲಿ 13 ಕಿ.ಮೀ. ಉದ್ದದ ರಸ್ತೆ ಕಾಮಗಾರಿ ಸುಮಾರು 61.57 ಕೋ.ರೂ. ಅಂದಾಜು ವೆಚ್ಚದಲ್ಲಿ ನಡೆಯಲಿದೆ. ಕಾಮಗಾರಿಗೆ 5 ತಿಂಗಳ ಸಮಯ ಬೇಕಿದ್ದು, ಈಗಾಗಲೇ ಟೆಂಡರ್ ಕಾರ್ಯಾದೇಶ ನೀಡಲಾಗಿದೆ. ಗುಣಮಟ್ಟದ ಕಾಮಗಾರಿಗೆ ವಿದೇಶದಿಂದ ಅತ್ಯಾಧುನಿಕ ಯಂತ್ರವನ್ನು ತರಿಸಲಾಗಿದೆ. ರಸ್ತೆ ಗುಣಮಟ್ಟ ಕಾಪಾಡಲು ಕಾಮಗಾರಿ ಸಂದರ್ಭದಲ್ಲಿ ವಾಹನ ಸಂಚಾರ ನಿರ್ಬಂಧ ಅಗತ್ಯ ಎಂದರು. ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್. ಖಾದರ್, ಜಿ.ಪಂ. ಸಿಇಒ ಡಾ| ಎಂ.ಆರ್. ರವಿ, ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.