![9-ullala](https://www.udayavani.com/wp-content/uploads/2024/12/9-ullala-415x249.jpg)
ಕಾರಿಗೆ ಆಕಸ್ಮಿಕ ಬೆಂಕಿ: ಚಾಲಕ ಅಪಾಯದಿಂದ ಪಾರು
Team Udayavani, Dec 22, 2017, 11:32 AM IST
![22-27.jpg](https://www.udayavani.com/wp-content/uploads/2017/12/22/22-27.jpg)
ಮಂಗಳೂರು: ನಗರದ ಬೆಸೆಂಟ್ ಜಂಕ್ಷನ್ ಬಳಿ ಗುರುವಾರ ಮಧ್ಯಾಹ್ನ ಸ್ಯಾಂಟ್ರೊ ಕಾರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿದ್ದು, ಕಾರಿನ ಚಾಲಕ ರಘುರಾಮ್ ಅಪಾಯದಿಂದ ಪಾರಾಗಿದ್ದಾರೆ.
ಇದು ಬೆಂಗಳೂರಿನಲ್ಲಿರುವ ಉಲ್ಲಾಸ್ ಕಾರಂತ (ಡಾ| ಶಿವರಾಮ ಕಾರಂತರ ಪುತ್ರ) ಅವರ ಮಾಲಕತ್ವದ ಕಾರು ಆಗಿದ್ದು, ಉಲ್ಲಾಸ್ ಕಾರಂತ ಅವರು ಮಂಗಳೂರಿಗೆ ಬಂದಾಗಲೆಲ್ಲ ಓಡಾಟಕ್ಕೆ ಈ ಕಾರನ್ನು ಉಪಯೋಗಿಸುತ್ತಿದ್ದರು. ರಘುರಾಮ್ ಅವರು ಕಾರಂತರ ಮನೆತನಕ್ಕೆ ಸೇರಿದವರಾಗಿದ್ದು, ಮಂಗಳೂರಿನ ಬೆಸೆಂಟ್ ಕಾಲೇಜು ಸಮೀಪ ಪಿ.ವಿ.ಎಸ್. ಕಲಾಕುಂಜ ರಸ್ತೆಯಲ್ಲಿ ಅವರ ಮನೆ ಇದೆ.
ಗುರುವಾರ ಮಧ್ಯಾಹ್ನ ರಘುರಾಮ್ ಮನೆಯಿಂದ ಹೊರಟು ಕಾರನ್ನು ಚಲಾಯಿಸಿ ಕೊಂಡು 200 ಮೀ. ಕ್ರಮಿ ಸುವಷ್ಟರಲ್ಲಿ ಮುಂಭಾಗದ ಬೋನೆಟ್ನಲ್ಲಿ ಹೊಗೆ ಯಾಡುತ್ತಿರುವುದು ಕಂಡು ಬಂತು. ಕೂಡಲೇ ಕಾರು ನಿಲ್ಲಿಸಿ ಅವರು ಕೆಳಗೆ ಇಳಿದಿದ್ದು, ಬಳಿಕ ಸಮೀಪದಲ್ಲಿದ್ದ ಆಟೋ ರಿಕ್ಷಾ ಚಾಲಕರ ಸಹಾಯದಿಂದ ನೀರು ಚಿಮುಕಿಲಾಯಿತು. ಬೆಂಕಿ ಶಮನವಾಗದೆ ಇದ್ದಾಗ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಲಾಯಿತು. ಪಾಂಡೇಶ್ವರದ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬಂದಿ ಆಗಮಿಸಿ ಬೆಂಕಿಯನ್ನು ಆರಿಸಿದರು. ಬ್ಯಾಟರಿಯಲ್ಲಿ ಶಾರ್ಟ್ ಸಕೀìಟ್ ನಿಂದಾಗಿ ಘಟನೆ ಸಂಭವಿಸಿದೆ..
ಸುಮಾರು 1 ಲಕ್ಷ ರೂ.ನಷ್ಟ ಸಂಭವಿಸಿದೆ ಎಂದು ರಘುರಾಮ್ ಅವರು ತಿಳಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![9-ullala](https://www.udayavani.com/wp-content/uploads/2024/12/9-ullala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![7(1](https://www.udayavani.com/wp-content/uploads/2024/12/71-4-150x80.jpg)
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
![9-ullala](https://www.udayavani.com/wp-content/uploads/2024/12/9-ullala-150x90.jpg)
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
![BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ](https://www.udayavani.com/wp-content/uploads/2024/12/virat-150x87.jpg)
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
![6](https://www.udayavani.com/wp-content/uploads/2024/12/6-36-150x80.jpg)
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
![8-belthangady](https://www.udayavani.com/wp-content/uploads/2024/12/8-belthangady-150x90.jpg)
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.