ಬಿಜೆಪಿ ಮುಖಂಡನಿಂದ ತಾಲೂಕಿನ ರೈತರಿಗೆ ಸಿಹಿಯೂಟ


Team Udayavani, Dec 24, 2017, 2:48 PM IST

cham-4.jpg

ಚಾಮರಾಜನಗರ: ರೈತ ದಿನಾಚರಣೆ ಅಂಗವಾಗಿ ಬಿಜೆಪಿ ರೈತ ಮುಖಂಡ ಮಲ್ಲೇಶ್‌ ಸಾವಿರಾರು ರೈತರಿಗೆ ಕಜ್ಜಾಯ, ಪಾಯಸದ ಸಿಹಿಊಟ ಆಯೋಜಿಸಿದ್ದರು. ನಗರದ ಹೌಸಿಂಗ್‌ ಬೋರ್ಡ್‌ ಕಾಲೋನಿಯ ಅರಣ್ಯ ನರ್ಸರಿ ರಸ್ತೆಯಲ್ಲಿರುವ ಮಲ್ಲೇಶ್‌ ಅವರ ಕಚೇರಿ ಸಮೀಪದ ಮೈದಾನದಲ್ಲಿ ಕಜ್ಜಾಯ, ಪಾಯಸ, ಹಲಸಿನಕಾಯಿ ಹುಳಿ, ಅನ್ನ ಸಾಂಬಾರ್‌ ಊಟದ ವ್ಯವಸ್ಥೆ ಮಾಡಲಾಗಿತ್ತು. ತಾಲೂಕು, ಜಿಲ್ಲೆಯ ರೈತರು, ಸಾರ್ವಜನಿಕರು, ಮುಖಂಡರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮುಖಂಡ ಮಲ್ಲೇಶ್‌ ಮಾತನಾಡಿ, ಜಿಲ್ಲೆಯಲ್ಲಿ 1992-93ರಲ್ಲಿ ರೈತ ಸಂಘವನ್ನು ಹುಟ್ಟು ಹಾಕುವ ಮೂಲಕ ಅನೇಕ ರೈತಪರ ಚಳವಳಿ ಮಾಡಿಕೊಂಡು 15 ವರ್ಷಗಳಿಂದಲೂ ಬಂದಿದ್ದೇನೆ. ವಿಶ್ವರೈತ ದಿನಾಚರಣೆಯನ್ನು ಹಬ್ಬವಾಗಿ ಆಚರಿಸಿ, ಅವರಿಗೆ ಸಿಹಿ ಊಟ ಉಣಬಡಿಸಿ ಸಂತೋಷ ತುಂಬುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿ ಸಲಾಗಿದೆ ಎಂದು ಹೇಳಿದರು.

ರೈತರು ಬೆಳೆದ ಪದಾರ್ಥಗಳಿಗೆ ವೈಜ್ಞಾನಿಕ ಬೆಲೆ ಸಿಗದ ಕಾರಣದಿಂದ ರೈತರು ಬಡತನದಲ್ಲಿ ಜೀವನ ಸಾಗಿಸುವಂತಾಗಿದೆ. ರೈತರನ್ನು ನೆನೆಯುವ ಸಲುವಾಗಿ ರೈತ ದಿನಾಚರಣೆ ಅಂಗ ವಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ರೈತಕುಲವೇ ದೊಡ್ಡದು. ಅನ್ನದಾತರೇ ಬುದ್ಧಿ ಜೀವಿಗಳಾಗಿದ್ದಾರೆ. ಆದರಿಂದ ಅವರಿಗೆ ಯಾರಿಂದಲೂ ನೀತಿಪಾಠದ ಭಾಷಣದ ಬೇಕಾ ಗಿಲ್ಲ. ರೈತರ ಬದುಕು ಹಸನಾಗುವ ಕಾಲ ಸನ್ನಿಹಿತವಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವಧಿಯಲ್ಲಿ ರೈತಪರ ಬಜೆಟ್‌ ಮಂಡಿಸಿದರು. ಜಿಲ್ಲೆಯ ಕೆರೆ ಗಳಿಗೆ
ನೀರು ತುಂಬಿಸುವ ಯೋಜನೆ ಜಾರಿಗೊಳಿಸಿ ದರು. ಇದರಿಂದ ಸಾವಿರಾರು ರೈತರ ಜಮೀನಿಗೆ ಅಂತರ್ಜಲ ಹೆಚ್ಚಿತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತರು ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿಸಿ ಯಡಿಯೂರಪ್ಪ ಅವರ ಕೈ ಬಲಪಡಿಸುವಂತೆ ಮನವಿ ಮಾಡಿದರು.

ನಗರದಲ್ಲಿ ಸಮರ್ಪಕವಾಗಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಧೂಳಿನಿಂದ ಆವರಿಸಿದ್ದು, ಜನತೆ ಆತಂಕದಲ್ಲಿದ್ದಾರೆ. ಜಿಲ್ಲಾಡಳಿತ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಲ್ಲಿ ವಿಫ‌ಲವಾಗಿದೆ. ಪಟ್ಟಣದ ಎಲ್ಲ ರಸ್ತೆಗಳಲ್ಲೂ ಕಾಮಗಾರಿ ನಡೆಯುತ್ತಿದ್ದು, ಜನರಿಗೆ ದಾರಿಯೇ ಇಲ್ಲದಾಗಿದೆ. 

ಧೂಳಿನಿಂದಾಗಿ ಶ್ವಾಸಕೋಶ ಕಾಯಿಲೆಗಳು ವ್ಯಾಪಕವಾಗಿ ಹರಡಿವೆ. ಜಿಲ್ಲಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಟೀಕಿಸಿದರು. ಬಿಜೆಪಿ ಮುಖಂಡರಾದ ಯು.ಎಸ್‌. ಶೇಖರ್‌, ಎಸ್‌.ಸೋಮನಾಯಕ, ಜಿ.ಎಂ. ಗಾಡ್ಕರ್‌, ಅರಕಲವಾಡಿನಾಗೇಂದ್ರ, ಬಸವನಪುರ ರಾಜಶೇಖರ್‌, ಮೇಲಾಜಿಪುರನಾಗೇಂದ್ರ, ಮಲ್ಲೂಪುರಶಿವಕುಮಾರ್‌, ದುಂಡಯ್ಯ, ನಿಜಗುಣರಾಜು, ಆರ್‌.ಮಹದೇವಯ್ಯ,
ತಾಪಂ ಉಪಾಧ್ಯಕ್ಷ ದಯಾನಿಧಿ, ಜಿ.ಪಂ. ಸದಸ್ಯ ಬಾಲರಾಜ್‌, ಬಿಸಲವಾಡಿಬಸವರಾಜು, ಮೂಡ್ನಾಕೂಡಕುಮಾರ್‌, ವಿಜಯಕುಮಾರ್‌, ಮಧು, ಪ್ರಸನ್ನ, ಮಹದೇವಸ್ವಾಮಿ, ಜೆ.ಎನ್‌. ಸತೀಶ್‌, ಬೇಡರಪುರಬಸವಣ್ಣ, ಚಂದ್ರಕಲಾ ಬಾಯಿ, ನೂರೊಂದುಶೆಟ್ಟಿ, ಸುಂದರ್‌ರಾಜು, ನಾರಾಯಣ್‌ಪ್ರಸಾದ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.