ಮೂರು ಕಾರಣ ಹೇಳಿ ಸನ್ನಿ ನೈಟ್ಸ್‌ಗೆ ಅಧಿಕೃತ ತೆರೆ


Team Udayavani, Dec 26, 2017, 1:35 PM IST

sunny-leone.jpg

ಬೆಂಗಳೂರು: ದಿ ಟೈಮ್ಸ್‌ ಕ್ರಿಯೇಷನ್ಸ್‌ ಹೊಸ ವರ್ಷಾಚರಣೆಗಾಗಿ ಮಾನ್ಯತಾ ಟೆಕ್‌ಪಾರ್ಕ್‌ ಆವರಣದಲ್ಲಿ ಆಯೋಜನೆಗೆ ಮುಂದಾಗಿದ್ದ ಬಾಲಿವುಡ್‌ ಸನ್ನಿ ಲಿಯೋನ್‌ರ “ಸನ್ನಿ ನೈಟ್ಸ್‌’ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಕಡೆಗೂ ಪೊಲೀಸರು ನಿರಾಕರಿಸಿದ್ದಾರೆ.

ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಬರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಸೇರಿ ಮೂರು ಪ್ರಮುಖ ಕಾರಣಗಳನ್ನು ನೀಡಿ ನಗರ ಪೊಲೀಸ್‌ ಆಯುಕ್ತರು ಕಾರ್ಯಕ್ರಮಕ್ಕೆ ಅನುಮತಿ ಕೊಡಲಾಗದು ಎಂದು ಹೇಳಿದ್ದಾರೆ.

ಹೊಸ ವರ್ಷಾಚರಣೆಗಾಗಿ ನಗರದೆಲ್ಲೆಡೆ ಸೂಕ್ತ ಪೊಲೀಸ್‌ ಭದ್ರತೆ ಒದಗಿಸುವ ಜವಾಬ್ದಾರಿಯಿದ್ದು, ಸನ್ನಿ ನೈಟ್ಸ್‌ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜತೆಗೆ ಸಂಭ್ರಮಾಚರಣೆ ವೇಳೆ ಎಂ.ಜಿ.ರಸ್ತೆ. ಬ್ರಿಗೇಡ್‌ ರಸ್ತೆ ಸೇರಿದಂತೆ ನಗರಾದ್ಯಂತ ಒಟ್ಟು 10 ಸಾವಿರ ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಸನ್ನಿ ನೈಟ್ಸ್‌ ಕಾರ್ಯಕ್ರಮಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ಕೊಡಲು ಸಾಧ್ಯವಿಲ್ಲ. ಭದ್ರತೆ ಇಲ್ಲದೆ ಕಾರ್ಯಕ್ರಮ ನಡೆದರೆ ಕಾನೂನು -ಸುವ್ಯವಸ್ಥೆ ಪಾಲನೆ ಕಷ್ಟ. ಹೀಗಾಗಿ, ಅನುಮತಿ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

ಸನ್ನಿ ನೈಟ್ಸ್‌ ಕಾರ್ಯಕ್ರಮಕ್ಕಾಗಿ ಬರುವ ಕಲಾವಿದರ ವಾಸ್ತವ್ಯದ ಬಗ್ಗೆ ಅರ್ಜಿಯಲ್ಲಿ ಹೇಳಲಾಗಿಲ್ಲ. ಅಲ್ಲದೆ, ಬೆಸ್ಕಾಂ, ಲೊಕೋಪಯೋಗಿ ಇಲಾಖೆ ಸೇರಿದಂತೆ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆದಿಲ್ಲ.  ಕಾರ್ಯಕ್ರಮ ಕುರಿತು ರೂಪುರೇಷೆ ಸಿದ್ಧಪಡಿಸಿಕೊಂಡಿಲ್ಲ. ವಾಹನ ನಿಲ್ದಾಣಕ್ಕೆ ಸ್ಥಳ ಅಭಾವವಿರುವುದರಿಂದ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಡಚಣೆಯಾಗಲಿದೆ.

ಕೇರಳದಲ್ಲಿ ಅಹಿತಕರ ಘಟನೆಗಳು: ನಟಿ ಸನ್ನಿ ಲಿಯೋನ್‌ರ ಇದೇ ಮಾದರಿಯ ಕಾರ್ಯಕ್ರಮ ಕೇರಳದಲ್ಲಿ ಆಯೋಜನೆಗೊಂಡಿದ್ದಾಗ ಅಲ್ಲಿ ಬಹಳಷ್ಟು ಅಹಿತಕರ ಘಟನೆಗಳು ನಡೆದಿದ್ದವು. ಅಲ್ಲದೆ, ಕಾರ್ಯಕ್ರಮದ ದಿನದಂದು ಯುವಕ, ಯುವತಿಯರು ಮದ್ಯಪಾನ ಮಾಡಿ ಆಚರಣೆಯಲ್ಲಿ ತೊಡಗಿಕೊಳ್ಳುವುದು ಮತ್ತು ಸಮಾಜಘಾತುಕ ವ್ಯಕ್ತಿಗಳು ಈ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು,

ಸ್ಥಳದಲ್ಲಿ ದಾಂಧಲೆ ನಡೆಸುವುದು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವತಿಯರು ಮತ್ತು ಮಹಿಳೆಯರ ಜತೆ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಗಿರೀಶ್‌ ತಿಳಿಸಿದ್ದಾರೆ.

ಹಣ ವಾಪಸ್‌: ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ನೋಡಲು 3ರಿಂದ 8 ಸಾವಿರ ರೂ. ಕೊಟ್ಟು “ಬುಕ್‌ ಮೈ ಶೋ’ ಮೂಲಕ ಟಿಕೆಟ್‌ ಖರೀದಿಸಿದವರ ಹಣ ಸದ್ಯದಲ್ಲೇ ಅವರ ಖಾತೆ ಸೇರಲಿದೆ. ಪೊಲೀಸ್‌ ಇಲಾಖೆ ಅಧಿಕೃತವಾಗಿ ಕಾರ್ಯಕ್ರಮ ರದ್ದು ಪಡಿಸಿದ ಹಿನ್ನೆಲೆಯಲ್ಲಿ ವೆಬ್‌ಸೈಟ್‌ ನಿರ್ವಾಹಕರಿಗೆ ಇ-ಮೇಲ್‌ ಮೂಲಕ ಸಂಪರ್ಕಿಸಿದ್ದು, ಟಿಕೆಟ್‌ ಖರೀದಿಸಿದವರ ಖಾತೆಗೆ ಸಂಪೂರ್ಣ ಹಣ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಇನ್ನು 3-4 ದಿನಗಳಲ್ಲಿ ಹಣ ವಾಪಸ್‌ ಆಗಲಿದೆ ಎಂದು ಕಾರ್ಯಕ್ರಮ ಆಯೋಜಕ ಹರೀಶ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಆ ಮೂರು ಕಾರಣಗಳು…
-ಸನ್ನಿ ನೈಟ್ಸ್‌ ಕಾರ್ಯಕ್ರಮಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ಕೊಡಲು ಸಾಧ್ಯವಿಲ್ಲ
-ಬೆಸ್ಕಾಂ, ಸ್ಥಳೀಯ ಪ್ರಾಧಿಕಾರದಿಂದ ಯಾವುದೇ ರೀತಿ ಅನುಮತಿ ಪಡೆದಿಲ್ಲ
-ಕಾರ್ಯಕ್ರಮದ ಕುರಿತು ಆಯೋಜಕರು ಸಮರ್ಪಕ ರೂಪುರೇಷೆ ಸದ್ಧಪಡಿಸಿಲ್ಲ

ಎಂ.ಜಿ, ಬ್ರಿಗೇಡ್‌ ರಸ್ತೆಗಳಲ್ಲಿ ಪ್ರತ್ಯೇಕ ಪಥ!
ಬೆಂಗಳೂರು:
ಕಳೆದ ವರ್ಷ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಈ ಬಾರಿಯ ಆಚರಣೆಗೆ ವಿಶೇಷ ಭದ್ರತೆ ಒದಗಿಸಲು ಸಿದ್ಧತೆ ನಡೆಸಿರುವ ಪೊಲೀಸ್‌ ಇಲಾಖೆ, ಮಹಾತ್ಮ ಗಾಂಧಿ ರಸ್ತೆ ಹಾಗೂ ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ನಲ್ಲಿ ಪುರುಷರು ಮತ್ತು ಮಹಿಳೆಯರ ಓಡಾಟಕ್ಕೆ ಪ್ರತ್ಯೇಕ ಪಥ ನಿಗದಿಪಡಿಸಲು ಚಿಂತನೆ ನಡೆಸಿದೆ.

ಆದರೆ, ನಗರ ಪೊಲೀಸ್‌ ಆಯುಕ್ತರು ಸಮ್ಮತಿ ಸೂಚಿಸಿದ ನಂತರವೇ ಈ ಹೊಸ ಮಾದರಿಯ ಭದ್ರತೆ ಅನುಷ್ಠಾನಕ್ಕೆ ತರುವುದಾಗಿ ಕೇಂದ್ರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ಪ್ರತ್ಯೇಕ ಬ್ಯಾರಿಕೇಡ್‌: ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಚರ್ಚ್‌ ಸ್ಟ್ರೀಟ್‌ನಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಎರಡು ಪಥಗಳನ್ನು ನಿರ್ಮಿಸಲಾಗುತ್ತದೆ. ಶೇ.70ರಷ್ಟು ಸ್ಥಳದಲ್ಲಿ ಪುರುಷರು ಹಾಗೂ ಶೇ.30ರಷ್ಟು ಸœಳದಲ್ಲಿ ಮಹಿಳೆಯರಿಗೆ ಮೀಸಲಿರಿಸಲಾಗುವುದು.

ಜತೆಗೆ 12 ಅಡಿ ಎತ್ತರದ 15 ವೀಕ್ಷಣಾ ಗೋಪುರಗಳು (ವಾಚ್‌ ಟವರ್‌), 500 ಸಿಸಿಟಿವಿ ಕ್ಯಾಮೆರಾಗಳು ಹಾಗೂ 200 ಫೋಕಲ್‌ ಲೈಟ್‌ಗಳನ್ನು ಈ ರಸ್ತೆಗಳಲ್ಲಿ ಅಳವಡಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ವಿವರಿಸಿದ್ದಾರೆ.

ಭದ್ರತೆ ಸಂಬಂಧ ನಗರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಕೆಲ ಅಧಿಕಾರಿಗಳು ಪ್ರತ್ಯೇಕ ಪಥಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಆಯುಕ್ತರಿಂದ ಇನ್ನೂ ಯಾವುದೇ ಅಧಿಕೃತ ಆದೇಶ ಬಂದಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.