ಒಂದು ದಿನದ ಮೌಲ್ಯಮಾಪನ ಬಹಿಷ್ಕಾರ


Team Udayavani, Dec 27, 2017, 1:25 PM IST

moulyamapaana.jpg

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ 2006ರ ನಂತರ ನೇಮಕಗೊಂಡ ಪ್ರಾಧ್ಯಾಪಕರಿಗೆ ಬಾಕಿ ವೇತನ ನೀಡಬೇಕು ಹಾಗೂ ಅತಿಥಿ ಉಪನ್ಯಾಸಕರಿಗೆ 30 ಸಾವಿರ ಮಾಸಿಕ ವೇತನಕ್ಕೆ ಆಗ್ರಹಿಸಿ ಬೆಂವಿವಿ ವ್ಯಾಪ್ತಿ ಕಾಲೇಜುಗಳ ಮೌಲ್ಯಮಾಪಕರು ಮಂಗಳವಾರ ಮೌಲ್ಯಮಾಪನ ಬಹಿಷ್ಕರಿಸಿ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಮೌಲ್ಯಮಾಪನ ಬಹಿಷ್ಕಾರ: ವಿಶ್ವವಿದ್ಯಾಲಯ ಅನುದಾನ ಆಯೋಗವು 6ನೇ ವೇತನ ಆಯೋಗದ ಪರಿಷ್ಕೃತ ವೇತನವನ್ನು ಬಿಡುಗಡೆ ಮಾಡಿದ್ದರೂ, ಕಾಲೇಜು ಶಿಕ್ಷಣ ಇಲಾಖೆಯಿಂದ ಸರ್ಕಾರಿ, ಅನುದಾನಿತ ಹಾಗೂ ವಿವಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 2006ರ ನಂತರ ನೇಮಕಗೊಂಡ ಪ್ರಾಧ್ಯಾಪಕರಿಗೆ ಪೂರ್ಣ ಪ್ರಮಾಣದ ವೇತನ ನೀಡುತ್ತಿಲ್ಲ.

ಹಾಗೆಯೇ ಅತಿಥಿ ಉಪನ್ಯಾಸಕರು ಮಾಸಿಕ 12 ಸಾವಿರ ರೂ.ಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಈ ತಾರತಮ್ಯ ನಿವಾರಣೆ ಮಾಡಬೇಕು ಎಂದು ಆಗ್ರಹಿಸಿ ಬೆಂವಿವಿ ಪ್ರಾಧ್ಯಾಪಕರ ಸಂಘದ ವತಿಯಿಂದ ಉತ್ತರ ಪತ್ರಿಕೆ ಮೌಲ್ಯಮಾಪನವನ್ನು ದಿನದ ಮಟ್ಟಿಗೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು.

ಆದೇಶ ವಾಪಸ್‌ಗೆ ಆಗ್ರಹ: ಸರ್ಕಾರದಿಂದ ನಮ್ಮ ಬೇಡಿಕೆ ಈಡೇರಿಸದೇ ಇದ್ದರೆ ಭವಿಷ್ಯದಲ್ಲಿ ಉಗ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿಯವರಿಗೆ  ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮೇಲ್ಮನೆ ಸದಸ್ಯರಾದ ಬಸವರಾಜ ಹೊರಟ್ಟಿ, ರಮೇಶ್‌ ಬಾಬು, ಪುಟ್ಟಣ್ಣ, ಮರಿತಿಬ್ಬೇಗೌಡ ಮೊದಲಾದವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಾಧ್ಯಾಪಕರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ಈಗಾಗಲೇ ನೀಡಿರುವ ಭತ್ಯೆಯನ್ನು ವಸೂಲಿ ಮಾಡುವ ಪ್ರವೃತ್ತಿ ಕೈಬಿಡಬೇಕು. ಈ ಸಂಬಂಧ ಹೊರಡಿಸಿದ್ದ ಆದೇಶ ವಾಪಾಸ್‌ ಪಡೆಯುವಂತೆ ಮೇಲ್ಮನೆ ಸದಸ್ಯ ರಮೇಶ್‌ ಬಾಬು ಆಗ್ರಹಿಸಿದರು.

ಫ‌ಲಿತಾಂಶ ವಿಳಂಬ: ಮೌಲ್ಯಮಾಪಕರು ಪ್ರತಿಭಟನೆ ಮಾಡುವ ವಿಷಯ ಗೊತ್ತಿದ್ದರೂ, ವಿವಿಯಿಂದ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ಹೀಗಾಗಿ ಇದು ಫ‌ಲಿತಾಂಶದ ಮೇಲೆ ನೇರ ಪರಿಣಾಮ ಬೀರಲಿದೆ. ಮುಂದಿನ ಸೆಮಿಸ್ಟರ್‌ ತರಗತಿಗಳು ಜ.10ರಿಂದ ಆರಂಭವಾಗಲಿದೆ ಎಂಬುದನ್ನು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಅಷ್ಟರೊಳಗೆ ಫ‌ಲಿತಾಂಶ ನೀಡಬೇಕಾಗುತ್ತದೆ. ಮೌಲ್ಯಮಾಪನ ವಿಳಂಬವಾದರೆ ಫ‌ಲಿತಾಂಶ ಕೂಡ ವಿಳಂಬವಾಗಲಿದೆ.

ಚಿಲ್ಲರೆ ಸಂಗ್ರಹ: ವಿದ್ಯಾರ್ಥಿಗಳ ದಾಖಲಾತಿ ವೇಳೆ ವಿಶ್ವವಿದ್ಯಾಲಯಕ್ಕೆ ನೀಡಬೇಕಿದ್ದ ಪೂರ್ತಿ ಹಣದಲ್ಲಿ ಚಿಲ್ಲರೆ ಹಣ ನೀಡದೇ ಇರುವ ಕಾಲೇಜುಗಳಿಂದ ಬಾಕಿ ಹಣ ಸಂಗ್ರಹಿಸುವ ಕಾರ್ಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ. 2004-05ನೇ ಸಾಲಿನಿಂದ 25ರೂ., 35 ರೂ., 90 ರೂ.ಗಳಿಂದ 55 ಸಾವಿರ ರೂ. ವರೆಗೂ ನೀಡಲು ಬಾಕಿ ಇದೆ.

ಬಾಕಿ ಇಟ್ಟುಕೊಂಡಿರುವ ಹಣವನ್ನು ಅತಿಶೀಘ್ರದಲ್ಲೇ ವಿವಿಗೆ ಸಲ್ಲಿಸುವಂತೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಶ್ವವಿದ್ಯಾಲಯದ ಲೆಕ್ಕಪರಿಶೋಧನೆ ವೇಳೆ ಬಾಕಿ ಇರುವ ಮೊತ್ತದ ಬಗ್ಗೆ ಮಾಹಿತಿ ಸಿಕ್ಕಿದೆ. ಬೆಂವಿವಿ ವ್ಯಾಪ್ತಿಯ ಸುಮಾರು 43 ಕಾಲೇಜುಗಳು ಬಾಕಿಹಣ ನೀಡಬೇಕಿದೆ ಎಂದು ವಿವಿ ಮೂಲದಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.