ಚಪ್ಪಲಿಯಲ್ಲಿ ಚಿಪ್ ಇದ್ಯಂತೆ
Team Udayavani, Dec 28, 2017, 6:30 AM IST
ಇಸ್ಲಾಮಾಬಾದ್/ನವದೆಹಲಿ: ಭದ್ರತೆಯ ನೆಪದಲ್ಲಿ ಭಾರತದ ಪ್ರಜೆ ಕುಲಭೂಷಣ್ ಜಾಧವ್ ಪತ್ನಿಯ ಕುಂಕುಮ, ಮಂಗಳಸೂತ್ರ ತೆಗೆಸಿದ ಪಾಕಿಸ್ತಾನ ಸರ್ಕಾರ ಮತ್ತೂಂದು ಹೊಣೆಗೇಡಿತನ ಪ್ರದರ್ಶಿಸಿದೆ. ಇದೀಗ ಜಾಧವ್ರ ಪತ್ನಿಯ ಚಪ್ಪಲಿಯಲ್ಲಿ ಲೋಹದ ಅಂಶವಿದೆ ಎಂದು ಅನುಮಾನಿಸಿ ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದೆ. ಪಾಕಿಸ್ತಾನ ವಿದೇಶಾಂಗ ಇಲಾಖೆ ಸಚಿವಾಲಯದ ವಕ್ತಾರರೇ ಅದನ್ನು ಹೇಳಿದ್ದಾಗಿ “ಪಾಕಿಸ್ತಾನ ಟುಡೇ’ ಎಂಬ ಪತ್ರಿಕೆ ವರದಿ ಮಾಡಿದೆ.
ಇದೇ ವಿಚಾರದ ಬಗ್ಗೆ “ದ ಡಾನ್’ ಕೂಡ ವರದಿ ಪ್ರಕಟಿಸಿದೆ. ಅದರ ಪ್ರಕಾರ “ಜಾಧವ್ ಪತ್ನಿಯ ಚಪ್ಪಲಿ ಯಲ್ಲಿ ಇದ್ದ ಲೋಹದ ಅಂಶ ಚಿಪ್ ಅಥವಾ ಕ್ಯಾಮೆರಾವೋ ಎಂಬುದು ಪತ್ತೆಯಾಗಬೇಕಿದೆ. ಅದಕ್ಕಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆ ಶೂಗಳ ಬದಲಿಗೆ ಜಾಧವ್ ಪತ್ನಿಗೆ ಬೇರೆ ಜತೆ ಚಪ್ಪಲಿ ಧರಿಸಲು ನೀಡಲಾಗಿತ್ತು. ಭೇಟಿ ವೇಳೆ ಚಿನ್ನಾಭರಣಗಳನ್ನು ತೆಗೆದು ಇರಿಸುವಂತೆ ಸೂಚಿಸಲಾಗಿತ್ತು. ಬಳಿಕ ಅವುಗಳನ್ನು ಅವರಿಗೆ ಹಿಂತಿರುಗಿಸಲಾಗಿದೆ. ಈ ಬಗ್ಗೆ ಮಂಗಳವಾರ ರಾತ್ರಿಯೇ ವಿದೇಶಾಂಗ ಇಲಾಖೆ ವಕ್ತಾರ ಮಾಹಿತಿ ನೀಡಿದ್ದಾರೆ’ ಎಂದು ಅದರಲ್ಲಿ ಹೇಳಿಕೊಳ್ಳಲಾಗಿದೆ.
ಇಂದು ಹೇಳಿಕೆ: ಹಲವು ವಿವಾದದ ಮುಖಗಳನ್ನು ಕಂಡಿರುವ ಬೆಳವಣಿಗೆ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗುರುವಾರ ಲೋಕಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ. ಬುಧವಾರ ಸದನ ಸಮಾವೇಶಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಬೆಳವಣಿಗೆ ಬಗ್ಗೆ ಆಕ್ಷೇಪವೆತ್ತಿದ್ದರಿಂದ ಅವರು ಸ್ಪಷ್ಟನೆ ನೀಡಲಿದ್ದಾರೆ.
ಭಾರತದ ಆರೋಪ ತಿರಸ್ಕಾರಮತ್ತೂಂದೆಡೆ, ಜಾಧವ್ ಪತ್ನಿ, ತಾಯಿಗೆ ಅವಮಾನ ಮಾಡಲಾಗಿದೆ ಎಂಬ ಭಾರತದ ವಿದೇಶಾಂಗ ಇಲಾಖೆ ಆರೋಪವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಪತ್ನಿಯ ಚಪ್ಪಲಿಯಲ್ಲಿ ಸಂಶಯಾ ಸ್ಪದ ಅಂಶ ಪತ್ತೆಯಾಗಿದ್ದರಿಂದ ಅದನ್ನು ವಶಪಡಿಸಿಕೊಳ್ಳಲಾಯಿತು ಎಂಬ ಅಂಶವನ್ನು ಒಪ್ಪಿಕೊಂಡಿದೆ. “ಪಾಕಿಸ್ತಾನ ಸರ್ಕಾರ ಅರ್ಥಹೀನ ವಾಗ್ಯುದ್ಧದಲ್ಲಿ ಭಾಗವಹಿಸಲು ಇಚ್ಛಿಸುತ್ತಿಲ್ಲ. ಭಾರತ ಸರ್ಕಾರ ಮಾಡಿರುವ ಆರೋಪಗಳನ್ನು ಸಾರಾಸಗಟಾಗಿ ತಿರಸ್ಕರಿಸು ತ್ತೇವೆ. ಅವರಿಗೆ ಅಂಥ ಸಂಶಯಗಳಿದ್ದಲ್ಲಿ ಇಸ್ಲಾಮಾಬಾದ್ನಲ್ಲಿರುವ ಭಾರತದ ಡೆಪ್ಯುಟಿ ಹೈಕಮಿಷನರ್ ಈ ಬಗ್ಗೆ ಡಿ.25ರಂದೇ ಆಕ್ಷೇಪಿಸಬಹುದಿತ್ತಲ್ಲವೇ?’ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.