ಶಾಲೆಗೆ ಶತಸಂಭ್ರಮ: ಸವಣೂರಿನಲ್ಲಿ ಹಬ್ಬದ ವಾತಾವರಣ


Team Udayavani, Dec 30, 2017, 3:49 PM IST

30-Dec-15.jpg

ಸವಣೂರು: ಶಾಲೆಯೊಂದು ಶತಮಾನ ಪೂರೈಸುವ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಲು ಇಡೀ ಊರೇ ಸಿದ್ಧವಾಗಿದೆ. ಊರ ತುಂಬಾ ಹಬ್ಬದ ವಾತಾವರಣ. ಸವಣೂರು ಪೇಟೆಯನ್ನು ವಿದ್ಯುತ್‌ ದೀಪ, ರಾಷ್ಟ್ರ ಧ್ವಜಗಳಿಂದ ಶೃಂಗರಿಸಲಾಗಿದೆ. ಶ್ರವಣರ ಊರು ಸವಣೂರು ಈಗ ಶಿಕ್ಷಣದೂರು ಆಗಿದೆ. ನೂರು ವರ್ಷಗಳಲ್ಲಿ ಈ ಶಾಲೆಯಲ್ಲಿ ಕಲಿತು ವಿವಿಧೆಡೆ ಉನ್ನತ ಉದ್ಯೋಗ ಪಡೆದವರು ಹಲವರು.

1917 ಡಿಸೆಂಬರ್‌ 15ರಂದು ಚಾಪಲ್ಲ ಎಂಬಲ್ಲಿ ಕಿರಿಯ ಪ್ರಾಥಮಿಕ ಶಾಲೆಯಾಗಿ ಆರಂಭಗೊಳ್ಳವುವ ಮೂಲಕ ಜ್ಞಾನಮಂದಿರವೊಂದು ರೂಪುಗೊಂಡಿತು.ಅಜಲಾಡಿ ಬೀಡು ಕರಿಯಪ್ಪ ಬಂಟ ಮುಗೇರುಗುತ್ತು ಅವರ ಮುಖಂಡತ್ವದಲ್ಲಿ ಊರಿನವರು ಸೇರಿ ಶಾಲೆಗೊಂದು ಸೂರು ಮಾಡಿದರೆಂದು ಹೇಳಲಾಗಿದೆ. 1963ರ ವರೆಗೂ ಕಿರಿಯ ಪ್ರಾಥಮಿಕ ಶಾಲೆಯಾಗಿದ್ದ ಇದು ಜುಲೈ 8,1963ರಂದು ಇದು ಹಿರಿಯ ಪ್ರಾಥಮಿಕ ಶಾಲೆಯಾಗಿ ಮಾರ್ಪಾಡು ಹೊಂದಿ ಜಿಲ್ಲಾ ಬೋರ್ಡ್‌ನ ಉಸ್ತುವಾರಿಯಲ್ಲಿದ್ದ ಈ ಶಾಲೆಯು ಸವಣೂರು ಬಸದಿ ಬಳಿಯ ಕಟ್ಟಡವೊಂದರಲ್ಲಿ 15-04-1970ನೇ ಇಸವಿಯವರೆಗೆ ನಡೆಯಿತು.

ನಂತರ ಸವಣೂರು, ಪುಣ್ಚಪ್ಪಾಡಿ ಗ್ರಾಮದ ಶಿಕ್ಷಣಾಸಕ್ತರು ಸೇರಿಕೊಂಡು ತಾಲೂಕು ಅಭಿವೃದ್ಧಿ ಮಂಡಳಿ, ಗ್ರಾ.ಪಂ.ನ ಸಹಕಾರದಲ್ಲಿ ಈಗಿರುವ ಸ್ಥಳದಲ್ಲಿ ಸುಂದರವಾದ ವಿದ್ಯಾದೇಗುಲ ನಿರ್ಮಿಸಿದರು. ಅಂದು 200 ಮಕ್ಕಳನ್ನು ಹೊಂದಿದ್ದ ಈ ಶಿಕ್ಷಣ ಸಂಸ್ಥೆ ಈಗಲೂ ಅದನ್ನು ಉಳಿಸಿಕೊಂಡಿದೆ. 

ಅಂದು ಮುಳಿಹುಲ್ಲಿನ ಛಾವ ಣಿಯಾಗಿದ್ದ ಶಾಲೆ ಇಂದು ತಾರಸಿ ಛಾವಣಿಯಾಗಿದೆ. ಶತ ಸಂಭ್ರಮದಲ್ಲಿರುವ ಈ ಶಾಲೆಯ ಶತಮಾನೋತ್ಸವ ಅವಿಸ್ಮರಣೀಯ ವಾಗಿರಿಸುವ ನಿಟ್ಟಿನಲ್ಲಿ ಈಗಾಗಲೇ ಸುಮಾರು 23 ಲಕ್ಷ ರೂ. ವೆಚ್ಚದಲ್ಲಿ ಗ್ಯಾಲರಿ ನಿರ್ಮಿಸಲಾಗಿದೆ. 25 ಲಕ್ಷ ರೂ. ವೆಚ್ಚದಲ್ಲಿ ನೂತನ ಕೊಠಡಿಗಳನ್ನು ನಿರ್ಮಿಸಲಾಗಿದೆ. ಈ ಕೊಠಡಿಗಳಲ್ಲಿ ವರ್ಲಿ ಚಿತ್ರಕಲೆ ಬಿಡಿಸಲಾಗಿದೆ. ಸಂಸ್ಕೃತಿ, ಶಿಕ್ಷಣಕ್ಕೆ ಸಂಬಂಧಿಸಿದ ವಿಚಾರಗಳು ಮೂಡಿಬಂದಿದೆ. ಶತಸಂಭ್ರಮದಲ್ಲಿರುವ ಈ ಶಾಲೆಯಲ್ಲಿ ಇಲ್ಲಿವರೆಗೆ ಸೇವೆ ಸಲ್ಲಿಸಿರುವ ಶಿಕ್ಷಕರನ್ನು ಗೌರವಿಸುವುದು,ಅವರ ಸೇವಾ ವಿವರವನ್ನು ಶತಹೆಜ್ಜೆ ಪುಸ್ತಕದಲ್ಲಿ ದಾಖಲಿಸುವ ಮೂಲಕ ಅವರ ಸೇವೆ ಗುರುತಿಸುವ ಕಾರ್ಯ ನಡೆದಿದೆ.

ಪ್ರಸ್ತುತ ಈ ಶಾಲೆಯಲ್ಲಿ 226 ವಿದ್ಯಾರ್ಥಿಗಳು, ಮುಖ್ಯಶಿಕ್ಷಕರು ಸೇರಿ 8 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನೊಳಗೊಂಡ ಶತಸಂಭ್ರಮಾಚರಣೆಯನ್ನು ಕಣ್ತುಂಬಿಸಿಕೊಳ್ಳಲು ಇಡೀ ಊರಿಗೆ ಊರೇ ಎದುರು ನೋಡುತ್ತಿದೆ.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.