ಸಂಭ್ರಮದಿಂದ ಸೃಷ್ಟಿಯಾದ ತ್ಯಾಜ್ಯ ರಾಶಿ
Team Udayavani, Jan 2, 2018, 12:19 PM IST
ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿ ನಡೆದ ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಹಾಗೂ ಬಡಾವಣೆಗಳಲ್ಲಿ ರಾಶಿಗಟ್ಟಲೇ ತ್ಯಾಜ್ಯ ಸೃಷ್ಟಿಯಾಗಿದ್ದು, ವಿಲೇವಾರಿಗೆ ಪೌರಕಾರ್ಮಿಕರು ಪರದಾಡುವಂತಾಯಿತು.
ಭಾನುವಾರ ಮಧ್ಯರಾತ್ರಿ ಎಂ.ಜಿ.ರಸ್ತೆ, ಚರ್ಚ್ಸ್ಟ್ರೀಟ್, ಬ್ರಿಗೇಡ್ ರಸ್ತೆಗಳಲ್ಲಿ ನಡೆದ ಹೊಸ ವರ್ಷಾಚರಣೆಯಲ್ಲಿ ಸಾವಿರಾರು ಜನರು ಭಾಗಿಯಾಗಿ, ಹೂಸ ವರ್ಷ ಸಡಗರದಿಂದ ಸ್ವಾಗತಿಸಿದ್ದು, ಇದರೊಂದಿಗೆ ತಾವು ಸೇವಿಸಿದ ಪಾನೀಯ ಬಾಟಲಿ, ಆಹಾರದ ಪ್ಲೇಟ್ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿದ್ದಾರೆ.
ತ್ಯಾಜ್ಯವನ್ನು ತೆರವುಗೊಳಿಸಲು ಪೌರಕಾರ್ಮಿಕರು ಕಷ್ಟ ಅನುಭವಿಸಬೇಕಾಯಿತು. ಸಾಮಾನ್ಯ ದಿನಗಳಲ್ಲಿ ಈ ರಸ್ತೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಮುಗಿಯುತ್ತಿದ್ದ ಸ್ವತ್ಛತಾ ಕಾರ್ಯ, ಸೋಮವಾರ ಸಂಜೆಯವರೆಗೆ ನಡೆಯಿತು.
ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳು ಸೇರಿದಂತೆ ಇಂದಿರಾನಗರ, ಕೋರಮಂಗಲ ಸೇರಿ ನಗರದ ಪ್ರಮುಖ ಬಡಾವಣೆಗಳಲ್ಲಿಯೂ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿರುವುದರಿಂದ ಲಾರಿಗಟ್ಟಲೇ ತ್ಯಾಜ್ಯ ಸೃಷ್ಟಿಯಾಗಿದೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ನುಸುಕಿನಿಂದಲೇ ಸೋಮವಾರ ಸ್ವತ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದು, ತ್ಯಾಜ್ಯ ವಿಲೇವಾರಿಗಾಗಿ ಹೆಚ್ಚುವರಿ ಪೌರಕಾರ್ಮಿಕರು ಹಾಗೂ ವಾಹನಗಳನ್ನು ನಿಯೋಜಿಸರಿದರಿಂದ ಶೀಘ್ರ ತ್ಯಾಜ್ಯ ತೆರವುಗೊಳಿಸಲು ಸಾಧ್ಯವಾಯಿತು ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.