2018ರ ಪ್ರವಾಸೋದ್ಯಮಕ್ಕೆ ಹೊಸ ಥೀಮ್‌


Team Udayavani, Jan 2, 2018, 12:19 PM IST

surfing.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆಯ 2018 ರ ಸಾಲಿಗಾಗಿ ರೂಪಿಸಿರುವ” ನಿಮ್ಮ ಸಾಹಸ ಗಾಥೆಯನ್ನು ನೀವೆ ರಚಿಸಿ’ ಎನ್ನುವ ವಿನೂತನ ನಿರೂಪಣ ವಸ್ತುವನ್ನು ಸೋಮವಾರ ಲೋಕಾರ್ಪಣೆ ಮಾಡಿದರು. ತಮ್ಮ ನಿವಾಸ ಕಾವೇರಿ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರೂಪಣ ವಸ್ತುವನ್ನು ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದರು.

ಹೊಸ ನಿರೂಪಣ ವಸ್ತುವನ್ನು ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ 2018ರಲ್ಲಿ ಹೊಸದಾದ ವಿಶಿಷ್ಟ ಥೀಮ್‌ ಪರಿಚಯಿಸಿದೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಕರ್ನಾಕಟದಲ್ಲಿ ಪರಂಪರೆ, ಸಂಸ್ಕೃತಿ, ನಿಸರ್ಗ, ಬೀಚ್‌ಗಳು ಹಾಗೂ ವನ್ಯಸಂಪತ್ತು ಇದ್ದು, ಇವು ಪ್ರವಾಸಿಗರಿಗೆ ಅತ್ಯಂತ ಆಕರ್ಷಣೀಯವಾಗಿವೆ ಎಂದರು.

ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಪ್ರವಾಸೋದ್ಯಮ ಇಲಾಖೆ ರೂಪಿಸಿರುವ ಈ ನಿರೂಪಣ ವಸ್ತುವಿನ ಆಶಯ ಕುರಿತು ಮುಖ್ಯಮಂತ್ರಿಗಳಿಗೆ ವಿವರ ನೀಡಿದರು.

ಪ್ರವಾಸದಲ್ಲಿ ನಾವು ಏನು ವೀಕ್ಷಿಸುತ್ತೇವೆ ಎಂಬುದಕ್ಕಿಂತ ಏನನ್ನು ಮಾಡುತ್ತೇವೆ ಮತ್ತು ಹೇಗೆ ಮಾಡುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರವಾಸಿಗರು ಸಾಮಾನ್ಯಕ್ಕಿಂತ ವಿಶಿಷ್ಟವಾದದ್ದನ್ನು ಬಯಸುತ್ತಾರೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಮೊದಲನೆಯ ದಿನದಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ತನ್ನ ಹೊಸ ವಿನೂತನ ಥೀಮ್‌ ಅನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ “ಒಂದು ರಾಜ್ಯ ಮತ್ತು ಹಲವು ವಿಶ್ವ’ ಎಂಬ ಘೋಷವಾಕ್ಯಕ್ಕೆ  ಪೂರಕವಾಗಿ ರಾಜ್ಯದಲ್ಲಿ ವೈವಿಧ್ಯಮಯ ಪ್ರವಾಸೋದ್ಯಮ ಅವಕಾಶಗಳಿವೆ. ಕರ್ನಾಟಕದಲ್ಲಿ ಪಾರಂಪರಿಕ ತಾಣಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡ ರಾಷ್ಟ್ರೀಯ ಪಾರ್ಕ್‌ಗಳು ಜನಪ್ರಿಯವಾಗಿವೆ. ಇವುಗಳ ಜತೆಗೆ ಗುಡ್ಡ ಪ್ರದೇಶಗಳು, ಮನಮೋಹಕ ಜಲಪಾತಗಳು,

ಧಾರ್ಮಿಕ ಸ್ಥಳಗಳು ಮತ್ತು ಸುದೀರ್ಘ‌ ಬೀಚ್‌ಗಳು ಜನಪ್ರಿಯವಾಗಿವೆ. ಹಿಮದ ಹೊರತಾಗಿ ಕರ್ನಾಟಕದಲ್ಲಿ ಎಲ್ಲ ರೀತಿಯ ಪ್ರವಾಸ ತಾಣಗಳೂ ಇವೆ ಎಂದರು. ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುರ್ಮಾ, ಕರ್ನಾಟಕ ಪ್ರವಾಸೋದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್‌ ಪುಷ್ಕರ್‌, ಜಂಗಲ್‌ ಲಾಡ್ಜಸ್‌ ವ್ಯವಸ್ಥಾಪಕ ನಿರ್ದೇಶಕ  ವಿಜಯ್‌ ಶರ್ಮ ಇದ್ದರು.

ವಿಶಿಷ್ಟ ಅನುಭವ: 2017ನೆ ವರ್ಷ ವನ್ಯಜೀವಿಗಳ ವರ್ಷ ಎಂದು ಘೋಷಿಸಲಾಗಿದೆ. ಈ ಕಾರ್ಯಕ್ರಮದಡಿ ವನ್ಯಜೀವಿಗಳ ವೀಕ್ಷಣೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಪ್ರವಾಸಿಗರು ವಿಶಿಷ್ಟ ಅನುಭವವನ್ನು ಪಡೆದಿದ್ದರು.ಈ ಥೀಮ್‌ ಅಡಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸರ್ಫಿಂಗ್‌ ಫೆಸ್ಟಿವಲ…, ಹಂಪಿಯಲ್ಲಿ ಮೋರ್ಟಾ ಸೈಕಲ್‌ ಟೂರಿಸಂ, ಮೈಸೂರಿನಲ್ಲಿ ಏರೋ ನ್ಪೋರ್ಟ್ಸ್, ಸ್ಕೆ ಡೈವಿಂಗ್‌, ಕಾರವಾರ ಮತ್ತು ಮಂಗಳೂರಿನಲ್ಲಿ ವಾರ್ಟ ನ್ಪೋರ್ಟ್ಸ್ ಹಮ್ಮಿಕೊಳ್ಳಲಾಗಿತ್ತು ಎಂದು ಸಿಎಂಗೆ ಪ್ರಿಯಾಂಕ ಖರ್ಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.