ಕೆಂಪೇಗೌಡ ಅಧ್ಯಯನ ಕೇಂದ್ರಕ್ಕೆ ಗ್ರಹಣ


Team Udayavani, Jan 2, 2018, 12:20 PM IST

bang-univercity.jpg

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರಕ್ಕೆ ಸ್ವಂತ ಕಟ್ಟಡ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲ. ಆದರೂ, ಐವರು ಸಂಶೋಧಕರು ಕೆಂಪೇಗೌಡರ ಕುರಿತಾದ ಸಂಶೋಧನೆ ನಡೆಸುತ್ತಿದ್ದಾರೆ.

ಕೆಂಪೇಗೌಡರ ಇತಿಹಾಸ ಮತ್ತು ಸಮಕಾಲೀನ ಸನ್ನಿವೇಶ, ಹೋರಾಟ ಇತ್ಯಾದಿಗಳ ಅಧ್ಯಯನಕ್ಕಾಗಿ ಬೆಂಗಳೂರು ವಿಶ್ವವಿದ್ಯಾಯದಲ್ಲಿ ಅಧ್ಯಯ ಕೇಂದ್ರ ತೆರೆಯಲಾಗಿದೆ. ಅಧ್ಯಯನ ಕೇಂದ್ರ ಕಟ್ಟಡ ನಿರ್ಮಾಣಕ್ಕಾಗಿ 3 ಎಕರೆ ಜಮೀನನ್ನು ಬೆಂವಿವಿಯಿಂದಲೇ ಮೀಸಲಿಟ್ಟಿದೆ. ಕೇಂದ್ರ ಅಭಿವೃದ್ಧಿಗೆ ಬಿಬಿಎಂಪಿಯಿಂದ 50 ಕೋಟಿ ರೂ. ಮಂಜೂರಾಗಿದೆ. ಕಟ್ಟಡದ ಶಂಕುಸ್ಥಾಪನೆ ಮಾಡಿ 3 ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿಲ್ಲ.

ಅಧ್ಯಯನ ಕೇಂದ್ರದಲ್ಲಿ ಐವರು ಪ್ರಶಿಕ್ಷಣಾರ್ಥಿಗಳು ಸಂಶೋಧನೆ ಚುಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಉನ್ನತ ಮಟ್ಟದ ಸಂಶೋಧನೆಗೆ ಪೂರಕವಾದ ಯಾವ ವ್ಯವಸ್ಥೆ ಹಾಗೂ ಸೌಲಭ್ಯವೂ ಇಲ್ಲಿಲ್ಲ. ಅಧ್ಯಯನ ಕೇಂದ್ರವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗಲು ಬೇಕಾದ ಪರಿಕರಗಳ ವ್ಯವಸ್ಥೆ ಕೂಡ ಮಾಡಿಕೊಟ್ಟಿಲ್ಲ. ಕಾರಣ, ಸಮಾಜಶಾಸ್ತ್ರ ವಿಭಾಗದ ಕಟ್ಟಡದಲ್ಲೇ ಕೇಂದ್ರ ಕಾರ್ಯ ಚಟುವಟಿಕೆ ನಡೆಯುತ್ತಿದೆ.

ಬೆಂಗಳೂರು ನಿರ್ಮಾತೃ ಕೆಂಪೇಗೌಡ ಹೆಸರಿನ ಅಧ್ಯಯನ ಪೀಠವನ್ನು ಬೆಂಗಳೂರು ವಿವಿಯಲ್ಲಿ ಸ್ಥಾಪನೆ ಮಾಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಪ್ರೊ.ತಿಮ್ಮೇಗೌಡ ಅವರು ಕುಲಪತಿಯಾಗಿದ್ದ ಸಂದರ್ಭದಲ್ಲಿ ಅಧ್ಯಯನ ಕೇಂದ್ರ ತೆರೆಯಲಾಯಿತು. ಬಿಬಿಎಂಪಿ ಕೌನ್ಸಿಲ್‌ ಸಭೆಯ ನಿರ್ಣಯದಂತೆ 50 ಕೋಟಿ ರೂ.ಗಳನ್ನು ಅಧ್ಯಯನ ಕೇಂದ್ರದ ಅಭಿವೃದ್ಧಿಗೆ ಮೀಸಲಿಡಲಾಯಿತ್ತು. ಇದಕ್ಕೆ ಪೂರಕವಾಗಿ ಬೆಂಗಳೂರು ವಿವಿ 3 ಎಕೆರೆ ಜಾಗವನ್ನೂ ಮೀಸಲಿಟ್ಟಿತ್ತು.

ಸಂಶೋಧನಾ ಪ್ರಕ್ರಿಯೆ: ಸೌಲಭ್ಯ ನೀಡಿಲ್ಲ ಎಂದ ಮಾತ್ರಕ್ಕೆ ಕೆಂಪೇಗೌಡರ ಕುರಿತಾದ ಸಂಶೋಧನಾ ಕಾರ್ಯ ಮೊಟಕಾಗಿಲ್ಲ. ಅಧ್ಯಯನ ಕೇಂದ್ರ ಸ್ಥಾಪನೆಯಾದ ದಿನದಿಂದಲೂ ಸಂಶೋಧನೆ ನಡೆಯುತ್ತಲೇ ಇದೆ. ಕೆಂಪೇಗೌಡರ ಇತಿಹಾಸ, ಅಂದಿನ ಜನಜೀವನ, ಆರ್ಥಿಕ ಪರಿಸ್ಥಿತಿ ಇತ್ಯಾದಿ ಸೇರಿದಂತೆ ಅವರ ಕಾಲಘಟ್ಟದ ಅಧ್ಯಯನವನ್ನು ಐವರು ಬೇರೆ ಬೇರೆ ಆಯಾಮಗಳಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ಇದರೊಂದಿಗೆ ಕೇಂದ್ರಕ್ಕೆ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

ಕೆಂಪೇಗೌಡ ಅಧ್ಯಯನ ಕೇಂದ್ರಕ್ಕೆ ಜಾಗ ನೀಡಲಾಗಿದೆ. ಆದರೆ, ಕಟ್ಟಡ ಕಾಮಗಾರಿ ಆರಂಭವಾಗಿಲ್ಲ. ಸಮಾಜಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ಕಾರ್ಯ ನಡೆಸುತ್ತಿದ್ದೇವೆ. ಅಧ್ಯಯನ ಕೇಂದ್ರಕ್ಕೆ ಬೇಕಾದ ಯಾವ ಸೌಲಭ್ಯವೂ ಸರಿಯಾಗಿ ಸಿಕ್ಕಿಲ್ಲ.
-ಡಾ.ಎನ್‌.ಶೈಖ್‌ ಮಸ್ತಾನ್‌, ಕೇಂದ್ರದ ನಿರ್ದೇಶಕ

ಕೆಂಪೇಗೌಡ ಅಧ್ಯಯನ ಪೀಠದ ಕಟ್ಟಡ ನಿರ್ಮಾಣ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಮುಂದಿನ ವಾರದಲ್ಲಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾರ್ಯಾದೇಶ ನೀಡಲಾಗುವುದು.
-ಆರ್‌.ಸಂಪತ್‌ರಾಜ್‌, ಮೇಯರ್‌

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.