ಮೈಸೂರಲ್ಲಿ ಹ್ಯಾಪಿ ನ್ಯೂ ಇಯರ್‌ ಘೋಷಣೆ ಅಬ್ಬರ


Team Udayavani, Jan 2, 2018, 1:03 PM IST

m5-happy-new.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಜನತೆ ಸಡಗರ, ಸಂಭ್ರಮದಿಂದ 2018ನೇ ಹೊಸ ವರ್ಷವನ್ನು ಬರಮಾಡಿಕೊಂಡು, ಸಂಭ್ರಮಾಚರಣೆ ಮೂಲಕ ನೂತನ ವರ್ಷದ ಸಂತಸದಲ್ಲಿ ಮಿಂದೆದ್ದರು.

ಹೊಸ ವರ್ಷದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ 12ಗಂಟೆಗೂ ಮೊದಲೇ ನಗರದಲ್ಲಿ ಸಂಭ್ರಮ ಕಳೆಕಟ್ಟಿತ್ತು. ಹಾಡು, ಕುಣಿತ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಂತಸದ ಕ್ಷಣಗಳನ್ನು ಆನಂದಿಸಿದರು. ರಾತ್ರಿ 12 ಗಂಟೆ ಆಗುತ್ತಿದ್ದಂತೆ ನಗರದೆಲ್ಲೆಡೆ ಹ್ಯಾಪಿ ನ್ಯೂ ಇಯರ್‌ ಘೋಷಣೆಗಳ ಅಬ್ಬರ ಜೋರಾಗಿತ್ತು. ಕುಟುಂಬಸ್ಥರು,

ಸ್ನೇಹಿತರು, ಆತ್ಮೀಯರು ಮಾತ್ರವಲ್ಲದೆ ಎಲ್ಲರೊಂದಿಗೆ ಹೊಸ ವರ್ಷದ ಖುಷಿ ಹಂಚಿಕೊಂಡ ಜನರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹಿರಿಯರು-ಕಿರಿಯರೆನ್ನದೇ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ ಜನರು, ಕಳೆದ ವರ್ಷದ ಕಹಿ ಅನುಭವಗಳನ್ನು ಬದಿಗೊತ್ತಿ ಸಿಹಿ ತಿನಿಸು, ಕೇಕ್‌ಗಳನ್ನು ತಿಂದು ಸಂಭ್ರಮಿಸಿದರು.

ಪ್ರವಾಸಿಗರ ಸಂಭ್ರಮ: ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಮೈಸೂರು ದೇಶ-ವಿದೇಶಗಳ ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣವಾಗಿದ್ದು, ಕೇರಳ, ತಮಿಳುನಾಡು ಸೇರಿದಂತೆ ದೇಶದ ಹಲವು ರಾಜ್ಯಗಳಿಂದ ಆಗಮಿಸಿದ್ದ ಪ್ರವಾಸಿಗರು ಸಹ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮುಳುಗಿದರು. ಪ್ರಮುಖವಾಗಿ ನಗರದ ಸಂದೇಶ್‌ ದಿ ಪ್ರಿನ್ಸ್‌, ಆಲಿವ್‌ ಗಾರ್ಡನ್‌,

ಕೋರಂ, ಸದರನ್‌ ಸ್ಟಾರ್‌, ರ್ಯಾಡಿಸನ್‌ ಬ್ಲೂ, ಲಲಿತಮಹಲ್‌, ಪೈವಿಸ್ಟಾ, ಕ್ರಿಸ್ಟಲ್‌ಪಾರ್ಕ್‌, ಕಂಟ್ರಿ ಕ್ಲಬ್‌, ರುಚಿ ದಿ ಪ್ರಿನ್ಸ್‌, ರೂಸ್ಟ್‌, ಜೆ.ಪಿ.ಪಾರ್ಚೂನ್‌ ಹೊಟೇಲ್‌, ಏಟ್ರಿಯಂ, ರೇಸ್‌ ಕ್ಲಬ್‌, ಗಾಲ್ಫ್ ಕ್ಲಬ್‌, ನ್ಪೋರ್ಟ್ಸ್ ಕ್ಲಬ್‌ ಸೇರಿದಂತೆ ಅನೇಕ ಕಡೆಗಳಲ್ಲಿ ನ್ಯೂ ಇಯರ್‌ ಪಾರ್ಟಿಯ ಸಂಭ್ರಮ ಮನೆಮಾಡಿತ್ತು.

2 ಲಕ್ಷ ಲಡ್ಡು ವಿತರಣೆ: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಜಯನಗರ 1ನೇ ಹಂತದ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರತಿವರ್ಷದಂತೆ 2 ಲಕ್ಷ ಲಾಡುಗಳನ್ನು ವಿತರಿಸಲಾಯಿತು. ಮುಂಜಾನೆ 5 ಗಂಟೆಯಿಂದಲೇ ಆರಂಭಗೊಂಡ ಲಡ್ಡು ವಿತರಣೆ ಕಾರ್ಯ ಸೋಮವಾರ ಸಂಜೆವರೆಗೂ ನಡೆಯಿತು. ದೇವರ ದರ್ಶನಕ್ಕೆಂದು ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಲಡ್ಡು ಪ್ರಸಾದ ಸ್ವೀಕರಿಸಿದರು.

ದೇವಾಲಯಗಳಿಗೆ ಲಗ್ಗೆ: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನಗರದ ಅನೇಕ ಹೋಟೆಲ್‌, ರೆಸ್ಟೋರೆಂಟ್‌ಗಳು ಜನರಿಂದ ತುಂಬಿ ಹೋಗಿತ್ತು. ಆದರೆ, ಬೆಳಗ್ಗೆ ಆಗುತ್ತಿದ್ದಂತೆ ನಗರದಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಭಕ್ತರ ದಂಡು ಜೋರಾಗಿತ್ತು. ಮುಂಜಾನೆಯೇ ದೇವಸ್ಥಾನಗಳಿಗೆ ತೆರಳಿದ ಜನರು ಹೊಸ ವರ್ಷಾಚರಣೆ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಿಬಾವ ಮೆರೆದರು.

ಇದರಿಂದಾಗಿ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಒಂಟಿಕೊಪ್ಪಲಿನ ವೆಂಕಟರಮಣ ಸ್ವಾಮಿ ದೇವಸ್ಥಾನ, ಗಣಪತಿ ಸಚ್ಚಿದಾನಂದ ಆಶ್ರಮದ ದತ್ತ ವೆಂಕಟೇಶ್ವರ ಸ್ವಾಮಿ ದೇವಾಲಯ, ಸರಸ್ವತಿಪುರಂನ ಬಂದಂತಮ್ಮ ದೇವಸ್ಥಾನ, ವಿಜಯನಗರದ ಸಪ್ತಮಾತೃಕಾ ದೇವಸ್ಥಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿತ್ತು.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.