ಇವಿಎಂ ದೋಷ ಬಹಿರಂಗಕ್ಕೆ ಪ್ರಿಯಾಂಕ ಖರ್ಗೆ ಪತ್ರ


Team Udayavani, Jan 3, 2018, 12:47 PM IST

prioyank-kharge.jpg

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಇವಿಎಂ (ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌)ಗಳಲ್ಲಿನ ದೋಷಗಳ ಬಗ್ಗೆ ಸಾರ್ವಜನಿಕರಲ್ಲಿರುವ ಗೊಂದಲಗಳ ನಿವಾರಣೆಗೆ ಬಹಿರಂಗ ಪ್ರಾತ್ಯಕ್ಷಿಕೆ ಏರ್ಪಡಿಸಬೇಕೆಂದು ಕೇಂದ್ರ ಚುನಾವಣಾ ಆಯೋಗಕ್ಕೆ ಐಟಿ, ಬಿಟಿ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದಾರೆ.

ಇವಿಎಂಗಳ ದೋಷಗಳ ಬಗ್ಗೆ ಬಹಿರಂಗ ಸವಾಲು ಹಾಕದೇ ದೋಷಗಳನ್ನು ಪತ್ತೆಹಚ್ಚಿ ಬಹಿರಂಗ ಪಡಿಸಲು ಅವಕಾಶ ಕಲ್ಪಿಸಬೇಕು ಎನ್ನುವ ಮನವಿ ಮಾಡಿಕೊಂಡಿರುವ ಪ್ರಿಯಾಂಕ ಖರ್ಗೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತೀಯ ಚುನಾವಣಾ ಪದ್ಧತಿ ಸಾಕಷ್ಟು ಪಾವಿತ್ರ್ಯತೆ ಉಳಿಸಿಕೊಂಡಿದ್ದು, ಕಳೆದ 70 ವರ್ಷಗಳಿಂದಲೂ ಚುನಾವಣೆಯನ್ನು ಆಯೋಗವು ವ್ಯವಸ್ಥಿತವಾಗಿ ನಡೆಸಿಕೊಂಡು ಬರುತ್ತಿದೆ.

ತಂತ್ರಜ್ಞಾನ ಆವಿಷ್ಕಾರದ ನಂತರ ಕೇಂದ್ರ ಚುನಾವಣಾ ಆಯೋಗ ದೇಶದಲ್ಲಿ 1999ರಲ್ಲಿ ಮೊದಲ ಬಾರಿಗೆ ಇವಿಎಂಗಳ ಬಳಕೆ ಆರಂಭಿಸಿದೆ. ಇದರಿಂದ ಸಾಕಷ್ಟು ಮಾನವ ಶಕ್ತಿ ಮತ್ತು ಸಮಯದ ಉಳಿತಾಯವೂ ಆಗುತ್ತಿದೆ. ಅಲ್ಲದೇ ಬೋಗಸ್‌ ವೋಟಿಂಗ್‌ ನಿಯಂತ್ರಣ ಮತ್ತು ಚುನಾವಣಾ ಫ‌ಲಿತಾಂಶವನ್ನು ಶೀಘ್ರವಾಗಿ ನೀಡಲು ಇವಿಎಂಗಳ ಬಳಕೆ ಮಹತ್ವದ್ದಾಗಿದೆ. 

ಆದರೆ, ಸಾಕಷ್ಟು ಸಂಖ್ಯೆ ಇವಿಎಂಗಳ ಬಳಕೆಯಿಂದ ನಿರ್ದಿಷ್ಟ ವ್ಯಕ್ತಿಯ ಪರವಾಗಿ ಮತಗಳು ಬೀಳುವಂತೆ ಮಾಡಲು ಇವಿಎಂಗಳನ್ನು ಹ್ಯಾಕ್‌ ಮಾಡಬಹುದೆಂಬ ಸಂಶಯ ಜನರಲ್ಲಿ ಮೂಡಿತ್ತು. ಆಯೋಗ ರಾಜಕೀಯ ಪಕ್ಷಗಳಿಗೆ ಅದರ ಸತ್ಯಾಸತ್ಯತೆಯ ಪರೀಕ್ಷೆಗೆ ಮುಕ್ತ ಅವಕಾಶ ನೀಡಿತ್ತು. ಅಲ್ಲದೇ ಸುಪ್ರೀಂಕೋರ್ಟ್‌ ಕೂಡ ಇವಿಎಂಗಳ ನಿಖರತೆಯ ಬಗ್ಗೆ ತಿಳಿಯಲು ವಿವಿ ಪ್ಯಾಟ್‌ಗಳನ್ನು ಅಳವಡಿಸಲು ಆದೇಶ ನೀಡಿತ್ತು.

ಸುಪ್ರಿಂಕೋರ್ಟ್‌ ಆದೇಶದಂತೆ ಕೆಲವು ಇವಿಎಂಗಳಿಗೆ ಮಾತ್ರ ಆಯ್ಕೆ ಆಧಾರದಲ್ಲಿ ವಿವಿ ಪ್ಯಾಟ್‌ ಅಳವಡಿಸಿ ಪರೀಕ್ಷೆ ನಡೆಸುವುದರಿಂದ ಜನರಲ್ಲಿ ಸಂಶಯಗಳು ಉಳಿಯುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನೇತೃತ್ವದಲ್ಲಿಯೇ 250 ಇವಿಎಂಗಳನ್ನು ಆಯ್ಕೆ ಮಾಡಿ ಪರೀಕ್ಷೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ಇವಿಎಂಗಳ ಬಗ್ಗೆ ಜನರಿಗಿರುವ ಸಂಶಯ ನಿವಾರಿಸಬಹುದು.

ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ತಜ್ಞರು ಈ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಇವಿಎಂಗಳ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಅನುಕೂಲವಾಗುತ್ತದೆ. ಈ ಮೂಲಕ ಸಾರ್ವಜನಿಕರಿಗೆ ಇವಿಎಂಗಳ ಬಗ್ಗೆ ಇರುವ ಅನುಮಾನ ದೂರ ಮಾಡಿ, ಚುನಾವಣಾ ವ್ಯವಸ್ಥೆಯನ್ನು ಸರಳಗೊಳಿಸಿದಂತಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.