ಬೆಂಗಳೂರಿನ ಹಳೆಯ ಕನ್ನಡ ಮಾಧ್ಯಮ ಶಾಲೆಗೆ ಬೀಗ


Team Udayavani, Jan 3, 2018, 12:48 PM IST

vishnuvardhan.jpg

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಕಳೆದ 10 ವರ್ಷದಿಂದ ಶಿಕ್ಷಕರನ್ನು ನೇಮಿಸದೇ ವ್ಯವಸ್ಥಿತವಾಗಿ ಬೆಂಗಳೂರಿನ ಅತ್ಯಂತ ಹಳೆಯ ಕನ್ನಡ ಮಾಧ್ಯಮ ಅನುದಾನಿತ ಶಾಲೆಯೊಂದನ್ನು ಮುಚ್ಚಿದೆ.

ಖ್ಯಾತ ನಟ ಸಾಹಸಸಿಂಹ ಡಾ.ವಿಷ್ಣು ವರ್ಧನ್‌, ಹಿರಿಯ ನಟ ರಮೇಶ್‌ ಭಟ್‌, ಬೆಂಗಳೂರಿನ ಪ್ರಸಿದ್ಧ ವಕೀಲರು, ವಿಜ್ಞಾನಿಗಳು, ಶಿಕ್ಷಣ ತಜ್ಞರು ಓದಿರುವ ಚಾಮರಾಜಪೇಟೆ 4ನೇ ಮುಖ್ಯರಸ್ತೆಯ ಮಾಡೆಲ್‌ ಸ್ಕೂಲ್‌ ಎಜುಕೇಷನ್‌ ಸೊಸೈಟಿಯ ಪ್ರೌಢಶಾಲೆಯನ್ನು ಎರಡು ತಿಂಗಳ ಹಿಂದೆಯೇ ಇಲಾಖೆ ಮುಚ್ಚಿದೆ. ಈಗ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಬೇಕಾದ ವ್ಯವಸ್ಥೆ ಮಾಡಿಕೊಂಡಿದೆ.

6 ರಿಂದ 8ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ 80 ವಿದ್ಯಾರ್ಥಿಗಳು ಹಾಗೂ ಅವರಿಗೆ ಪಾಠ ಹೇಳಿಕೊಡಲು 6 ಶಿಕ್ಷಕರಿದ್ದರು. ವಿದ್ಯಾರ್ಥಿಗಳನ್ನು ಸಮೀಪದ ಸರ್ಕಾರಿ ಹಾಗೂ ಅನುದಾನಿತ ಶಾಲೆಗೆ ವರ್ಗಾಯಿಸಿ, ಶಿಕ್ಷಕರನ್ನು ಬೇರೆ ಶಾಲೆಗೆ ನಿಯೋಜಿಸಿ ಶಿಕ್ಷಣ ಇಲಾಖೆಯಿಂದಲೇ  ಪ್ರೌಢಶಾಲಾ ವಿಭಾಗಕ್ಕೆ ಬೀಗ ಜಡಿದಿದ್ದಾರೆ.

ಪ್ರಾಥಮಿಕ ಶಾಲೆಯಲ್ಲಿ (1ರಿಂದ 7ನೇ ತರಗತಿ) ಸುಮಾರು 35 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಶಾಲೆಯನ್ನು ಮುಚ್ಚಲು ಇಲಾಖೆಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆಡಳಿತ ಮಂಡಳಿಯ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ನಿಯಮದ ಪ್ರಕಾರ ಅನುದಾನಿತ ಶಾಲೆಯ ಪ್ರತಿ ತರಗತಿಯಲ್ಲಿ  ಕನಿಷ್ಠ 25 ವಿದ್ಯಾರ್ಥಿಗಳು ಇರಬೇಕು. ಸರ್ಕಾರಿ ನಿಯಮಕ್ಕೆ ಬದ್ಧವಾಗಿದ್ದ ಈ ಶಾಲೆಯಲ್ಲಿ ಕಳೆದ ಮೂರು ವರ್ಷದಿಂದ ಫ‌ಲಿತಾಂಶ ಕುಸಿದಿತ್ತು. ಇದಕ್ಕೆ ಶಿಕ್ಷಕರ ಕೊರತೆಯೇ ಕಾರಣ, ಕಳೆದ 10 ವರ್ಷದಿಂದ ಸರ್ಕಾರ ಶಿಕ್ಷಕರನ್ನು ನೇಮಕ ಮಾಡಿಲ್ಲ.

2016ರಲ್ಲಿ ಶಾಲೆಯ ಶಿಕ್ಷಕರೊಬ್ಬರು ನಿವೃತ್ತಿ ಹೊಂದಿದ್ದರು. ನಂತರವೂ ನೇಮಕಾತಿ ನಡೆದಿಲ್ಲ. ಇಲಾಖೆಯಿಂದ ಶಿಕ್ಷಕರ ನೇಮಕಕ್ಕೆ ಆದೇಶ ಆಗಿದ್ದರೂ, ಬಿಇಒ ಮತ್ತು ಡಿಡಿಪಿಐಗಳು ಇದಕ್ಕೆ ಅವಕಾಶ ನೀಡಿಲ್ಲ. ಮುಖ್ಯಶಿಕ್ಷಕರ ಜವಾಬ್ದಾರಿಯನ್ನು ಬಿಇಒ ನಿಭಾಯಿಸುತ್ತಿದ್ದರು ಎಂದು ಶಾಲೆಯ ಮೂಲಗಳು ಮಾಹಿತಿ ನೀಡಿದರು.

1870ರಲ್ಲಿ ನರ್ಸರಿಯೊಂದಿಗೆ ಆರಂಭಗೊಂಡ ಮಾಡೆಲ್‌ ಸ್ಕೂಲ್‌ ಎಜುಕೇಷನ್‌ ಸೊಸೈಟಿ, 1957ರಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆ ತೆರೆದಿತ್ತು. ಹಲವು ಗಣ್ಯರು ಓದಿದ ಮತ್ತು ಭೇಟಿ ನೀಡಿದ ಶಾಲೆ ಇದಾಗಿದೆ. ಬಾಸ್ಕೊ ಮನೆಯ ನೂರಾರು ಅನಾಥ ಮಕ್ಕಳಿಗೆ ಶಿಕ್ಷಣ ನೀಡಿದ ಸಂಸ್ಥೆಯೂ ಹೌದು. ಒಂದು ಕಾಲದಲ್ಲಿ ಈ ಶಾಲೆಯಲ್ಲಿ ಸೀಟು ಪಡೆಯಲು ತೀವ್ರ ಪೈಪೋಟಿ ಇತ್ತು. 8 ಸುಸಜ್ಜಿತ ಕೊಠಡಿ ಇಂದಿಗೂ ಇದೆ ಎಂದು ಶಿಕ್ಷಕರೊಬ್ಬರು ಮಾಹಿತಿ ನೀಡಿದರು.

ಶಾಲೆ ಮುಚ್ಚುವಂತೆ ಇಲಾಖೆಯಿಂದ ಪತ್ರ ಬಂದಿದೆ. ಮಕ್ಕಳಲ್ಲಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಬಂದು ಸಮೀಕ್ಷೆ ಮಾಡಿ ವರದಿ ನೀಡಿದ್ದಾರೆ. ಬೆಂಗಳೂರಿನ ಪ್ರಪ್ರಥಮ ಕನ್ನಡ ಮಾಧ್ಯಮ ಶಾಲೆ ಇದು. ಅದನ್ನು ಉಳಿಸಿಕೊಳ್ಳಲು ಇಲಾಖೆಯೇ ಪ್ರಯತ್ನ ಮಾಡುತ್ತಿಲ್ಲ. 
-ಯದುಕುಮಾರ್‌, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.