ಕೋಟೆ ತಾಲೂಕು ಆವರಿಸಿದ ದಟ್ಟ ಮಂಜಿನ ಚಳಿ
Team Udayavani, Jan 3, 2018, 1:17 PM IST
ಎಚ್.ಡಿ.ಕೋಟೆ: ದಟ್ಟ ಕಾಡು ಮತ್ತು ನೀರಿನಿಂದ ಸುತ್ತುವರಿದಿರುವ ವನಸಿರಿನಾಡು ಖ್ಯಾತಿಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಸಾಮಾನ್ಯವಾಗಿ ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇದ್ದು ಚಳಿ ಇರುವುದು ಸಾಮಾನ್ಯ.
ಅದೇ ರೀತಿ ಈ ಬಾರಿಯೂ ಕಳೆದ ಮೂರ್ನಾಲ್ಕು ದಿನಗಳಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇಬ್ಬನಿ ಮತ್ತು ಕೊರೆವ ಚಳಿ ಪ್ರಾರಂಭವಾಗಿದ್ದು ಜನರು ಸುರಿವ ಇಬ್ಬನಿಗೆ ಹೆದರಿ ಮನೆಯಲ್ಲೇ ಕೆಲ ಸಮಯ ಕಳೆಯುವಂತಾಗಿದೆ.
ತಾಲೂಕು ವಿಶೇಷವಾಗಿ ನಾಗರಹೊಳೆ ಅಭಯಾರಣ್ಯ ಸೇರಿದಂತೆ ರಾಜ್ಯದ ಜೀವನಾಡಿಗಳಲ್ಲೊಂದಾದ ಕಬಿನಿ ಜಲಾಶಯ ಸೇರಿದಂತೆ ನುಗು, ತಾರಕ, ಹೆಬ್ಟಾಳ್ಳ ಜಲಾಶಯಗಳನ್ನು ತನ್ನೊಳಗೆ ಅಡಗಿಸಿಕೊಂಡಿದ್ದು, ಸುಮಾರು 40 ರಿಂದ 60 ಕಿ.ಲೋ ಮೀಟರ್ ವ್ಯಾಪ್ತಿಯ ನಾಲೆಗಳನ್ನು ಹೊಂದಿರುವುದರಿಂದ ದಿನೇ ದಿನೆ ಇಬ್ಬನಿ ಹೆಚ್ಚಾಗುತ್ತಿರುವುದರಿಂದ ಶೀತಗಾಳಿ ಬೀಸುತ್ತಿದ್ದು ಚಳಿಯ ವಾತಾವರಣ ಹೆಚ್ಚಿದೆ.
ಸಂಚಾರಕ್ಕೆ ಅಡ್ಡಿ: ದಟ್ಟ ಇಬ್ಬನಿ ಬೆಳಗ್ಗೆ 8 ಗಂಟೆಯಾದರೂ ಅವರಿಸಿದ ಪರಿಣಾಮ ಮಂಜು ಮುಸುಕಿದ ವಾತಾವರಣದಿಂದಾಗಿ ವಾಹನ ಸವಾರರು ಸಂಚಾರಿಸಲು ಅಡೆತಡೆ ಎದುರಾಗುತ್ತಿದ್ದು, ವಾಹನಗಳ ಲೈಟ್ ಹಾಕಿಕೊಂಡು ಸಂಚಾರಿಸುತ್ತಿದ್ದರು, ಇತ್ತ ಶಾಲಾ ಕಾಲೇಜು ಮಕ್ಕಳು ದಟ್ಟ ಮಂಜಿನ ನಡುವೆ ಕೊರೆವ ಚಳಿಯಲ್ಲಿ ತೆರಳುತ್ತಿರುವ ದೃಶ್ಯ ಎದ್ದು ಕಾಣುತ್ತಿತ್ತು.
ಇನ್ನು ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ನಡೆಸುವ ಅಂಗಡಿ ಮಾಲೀಕರು ಬೆಳಗ್ಗೆ 8 ಗಂಟೆಯಾದರೂ ಇಬ್ಬನಿ ಸರಿಯುವವರೆಗೂ ತಮ್ಮ ತಮ್ಮ ಅಂಗಡಿಗಳನ್ನು ತೆರೆಯದೆ ಮನೆಯಲ್ಲಿ ಬೆಚ್ಚಗೆ ಕೂರುವಂತಹ ವಾತಾವರಣವಿದೆ. ಮುಸುಕಿದ ಮಂಜಿನಿಂದಾಗಿ ವಾಹನ ಸವಾರರ ಸಂಚಾರದ ಕಷ್ಟದ ಜೊತೆಗೆ ದಮ್ಮು ಇನ್ನಿತರ ರೋಗಿಗಳಿಗೆ ತುಂಬಾ ಕಷ್ಟವಾಗುತ್ತಿದ್ದು, ದಟ್ಟ ಮಂಜಿನಿಂದ ಜನ ಮಾತ್ರ ಬೇಸತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.