ಪೇದೆಯ ಕಳಪೆ ಹೆಲ್ಮೆಟ್‌ ಒಡೆದು ಹಾಕಿದ ಸಾರ್ವಜನಿಕರು!


Team Udayavani, Jan 4, 2018, 12:27 PM IST

m4-helmet.jpg

ಮೈಸೂರು: ಪೊಲೀಸ್‌ ಪೇದೆಯ ಕಳಪೆ ಹೆಲ್ಮೆಟನ್ನೇ ಕಿತ್ತು ಒಡೆದು ಹಾಕುವ ಮೂಲಕ ಕಳಪೆ ಹೆಲ್ಮೆಟ್‌ಗಳ ವಿರುದ್ಧ ಸಮರ ಸಾರಿರುವ ಪೊಲೀಸರಿಗೇ ಸಾರ್ವಜನಿಕರು ಬಿಸಿ ಮುಟ್ಟಿಸಿದ್ದಾರೆ.

ನಗರದ ಚೆಲುವಾಂಬ ಪಾರ್ಕ್‌ಬಳಿ ಪೊಲೀಸ್‌ ಪೇದೆ ತನ್ನ ದ್ವಿಚಕ್ರ ವಾಹನದಲ್ಲಿ ಕಳಪೆ ಹೆಲ್ಮೆಟ್‌ ಇಟ್ಟಿರುವುದನ್ನು ಗಮನಿಸಿದ ಸಾರ್ವಜನಿಕರು, ಪೊಲೀಸರಿಗೊಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ಪೇದೆಯೊಂದಿಗೆ ಮಾತಿನ ಚಕಮಕಿ ನಡೆಸಿ, ಹೆಲ್ಮೆಟನ್ನು ಒಡೆದು ಹಾಕಿದ್ದಾರೆ.

ಈ ವೇಳೆ ಪೇದೆ ಸಮಜಾಯಿಷಿ ನೀಡಿ ನಾನು ಹೆಲ್ಮೆಟ್‌ ಧರಿಸಿಲ್ಲ ತನ್ನ ಬೈಕ್‌ನಲ್ಲಿ ಇರಿಸಿದ್ದೇನೆ ಅಷ್ಟೆ ಎಂದು ವಾದಿಸತೊಡಗಿದಾಗ ಹೆಲ್ಮೆಟ್‌ ಕಿತ್ತು ಒಡೆದು ಹಾಕಿದ ಸಾರ್ವಜನಿಕರು, ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಓಡಿಸುವಂತಿಲ್ಲ. ಈಗ ಹೇಗೆ ಹೋಗುತ್ತೀರಿ ಎಂದು ಪ್ರಶ್ನಿಸಿದಾಗ ಜನರು ಕಣ್ಮರೆಯಾಗುವವರೆಗೂ ಪೊಲೀಸ್‌ ಪೇದೆ ತನ್ನ ದ್ವಿಚಕ್ರ ವಾಹನವನ್ನು ತಳ್ಳಿಕೊಂಡು ಹೋಗಿರುವ ಘಟನೆ ನಡೆದಿದೆ.

ಐಎಸ್‌ಐ ಮುದ್ರೆ ಇಲ್ಲದ ಅರ್ಧ ಹೆಲ್ಮೆಟ್‌ ಧರಿಸಿ ದ್ವಿಚಕ್ರ ವಾಹನ ಓಡಿಸುವವರ ವಿರುದ್ಧ ಮಂಗಳವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, 15,501 ಕಳಪೆ ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡಿದ್ದರು.

ಹೆಲ್ಮೆಟ್‌ ಖರೀದಿಸಲು ಎರಡು ದಿನ ಕಾಲಾವಕಾಶ
ಮೈಸೂರು:
ಗುಣಮಟ್ಟದ ಹೆಲ್ಮೆಟ್‌ ಖರೀದಿಸಲು ಎರಡು ದಿನಗಳ ಕಾಲಾವಕಾಶ ನೀಡಿರುವ ಪೊಲೀಸರು, ಜನವರಿ 6ರಿಂದ ಆಪರೇಷನ್‌ ಸೇಫ್ ರೈಡ್‌ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸುವುದಾಗಿ ತಿಳಿಸಿದ್ದಾರೆ. ಬಿಐಎಸ್‌/ಐಎಸ್‌ಐ ಗುಣಮಟ್ಟದ ಹೆಲ್ಮೆಟ್‌ಗಳನ್ನು ಖರೀದಿಸಿ ಇನ್ನು ಮುಂದೆ ಅವುಗಳನ್ನೇ ಕಡ್ಡಾಯವಾಗಿ ಧರಿಸಲು ಜ.5ರವರೆಗೆ ಸಾರ್ವಜನಿಕರಿಗೆ ಕಾಲಾವಕಾಶ ನೀಡಲಾಗಿದೆ.

ಆಪರೇಷನ್‌ ಸೇಫ್ ರೈಡ್‌ ಆರಂಭವಾದ ಮೇಲೆ ಸಾರ್ವಜನಿಕರು ಬಿಐಎಸ್‌/ಐಎಸ್‌ಐ ಗುಣಮಟ್ಟದ ಹೆಲ್ಮೆಟ್‌ಗಳನ್ನು ಹೆಚ್ಚಾಗಿ ಖರೀದಿಸಲು ಅರಂಭಿಸಿರುವ ಹಿನ್ನಲೆಯಲ್ಲಿ ಕೆಲವು ವರ್ತಕರು ಹೆಲ್ಮೆಟ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂದು ದೂರುಗಳು ಕೇಳಿಬರುತ್ತಿದ್ದು, ಈ ರೀತಿ ಕಂಡು ಬಂದಲ್ಲಿ ಸಾರ್ವಜನಿಕರು ಇದರ ಬಗ್ಗೆ ಹತ್ತಿರದ ಪೊಲೀಸ್‌ ಠಾಣೆಗೆ ದೂರು ನೀಡುವುದು.

ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ಈಗಾಗಲೇ ಕ್ರಮಕೈಗೊಂಡು ಅಂತಹ ಹೆಲ್ಮೆಟ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗುತ್ತಿದೆ. ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಗಳು ಇದ್ದಲ್ಲಿ ಅಂತಹ ಮಾಹಿತಿಯನ್ನು ಸಾರ್ವಜನಿಕರು ಪೊಲೀಸರಿಗೆ ನೀಡುವುದು.

ಆಪರೇಷನ್‌ ಸೇಫ್ ರೈಡ್‌ ಕಾರ್ಯಾಚರಣೆಯು ಸಂಪೂರ್ಣವಾಗಿ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ನಡೆಯುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ನಗರ ಪೊಲೀಸ್‌ ಆಯುಕ್ತ ಡಾ.ಎ. ಸುಬ್ರಹ್ಮಣ್ಯೇಶ್ವರ ರಾವ್‌ ಕೋರಿದ್ದಾರೆ.

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.