ನೂರಾರು ಕೋಟಿ ಅಕ್ರಮ ಅಸಾಧ್ಯ


Team Udayavani, Jan 5, 2018, 11:30 AM IST

nooraru-bill.jpg

ಬೆಂಗಳೂರು: “ಇಂದಿರಾ ಕ್ಯಾಂಟೀನ್‌’ ಮೂಲಕ ವಿತರಿಸಲಾದ ಊಟ-ತಿಂಡಿಯ ಬಿಲ್‌ ಪಾವತಿಯಲ್ಲಿ ನೂರಾರು ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಆದರೆ, ಕೇಟರಿಂಗ್‌ ಸೇವೆ ಪಡೆದ ಗುತ್ತಿಗೆದಾರರಿಗೆ ಈವರೆಗೆ ಪಾವತಿಸಲಾದ ಮೊತ್ತವೇ 8.53 ಕೋಟಿ ರೂ. ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ಸ್ಪಷ್ಟಪಡಿಸಿದರು.

ಇದುವರೆಗೆ 154 ಇಂದಿರಾ ಕ್ಯಾಂಟೀನ್‌ಗಳಿಗೆ 76,150 ತಿಂಡಿ, 76,450 ಮಧ್ಯಾಹ್ನದ ಊಟ ಹಾಗೂ 44,250 ರಾತ್ರಿ ಊಟ ಸೇರಿ ಒಟ್ಟಾರೆ ತಿಂಗಳಿಗೆ 1,96,950 ಊಟ-ತಿಂಡಿ ವಿತರಿಸಲಾಗಿದೆ. ಸರ್ಕಾರ ಪ್ರತಿ ತಿಂಡಿಗೆ 9.50 ರೂ. ಹಾಗೂ ಊಟಕ್ಕೆ 11.25 ರೂ. ಸಬ್ಸಿಡಿ ನೀಡುತ್ತಿದೆ. ಎಲ್ಲ ಸೇರಿ ಗುತ್ತಿಗೆದಾರರಿಗೆ ತಿಂಗಳಿಗೆ 6.24 ಕೋಟಿ ರೂ. ಪಾವತಿಸಬೇಕಾಗುತ್ತದೆ.

ನಗರದ ಎಲ್ಲ 198 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಗೊಂಡು, ವರ್ಷಕ್ಕೆ ಪಾವತಿಸುವ ಸಬ್ಸಿಡಿ ಲೆಕ್ಕಹಾಕಿದರೂ ನೂರು ಕೋಟಿ ರೂ. ದಾಟುವುದಿಲ್ಲ. ವಾಸ್ತವ ಹೀಗಿರುವಾಗ, ಆಗಸ್ಟ್‌ 16ರಿಂದ ಆರಂಭಗೊಂಡ ಇಂದಿರಾ ಕ್ಯಾಂಟೀನ್‌ನಲ್ಲಿ ನೂರಾರು ಕೋಟಿ ಅಕ್ರಮ ನಡೆಯಲು ಹೇಗೆ ಸಾಧ್ಯ ಎಂದು ಮಂಜುನಾಥ ಪ್ರಸಾದ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. 

ಅಷ್ಟೇ ಅಲ್ಲ, ತಿಂಡಿ-ಊಟ ಪೂರೈಕೆಯಾದ ತಕ್ಷಣ ಗುತ್ತಿಗೆದಾರರಿಗೆ ಬಿಲ್‌ ಪಾವತಿ ಆಗುವುದಿಲ್ಲ. ಕ್ಯಾಂಟೀನ್‌ಗಳಿಗೆ ಇಂಡೆಂಟ್‌ ನೀಡಿದ ನಂತರ ಅದು ಸಾರ್ವಜನಿಕರಿಗೆ ನಿಗದಿತ ಪ್ರಮಾಣದಲ್ಲಿ ವಿತರಣೆ ಆಗುತ್ತಿದೆಯೇ ಎನ್ನುವುದು ಸೇರಿದಂತೆ ಮೂರು ಹಂತಗಳಲ್ಲಿ ತಪಾಸಣೆ ನಡೆಯುತ್ತದೆ.

ಇದಕ್ಕಾಗಿ ಮಾರ್ಷಲ್‌ಗ‌ಳನ್ನು ನಿಯೋಜಿಸಲಾಗಿದೆ. ಜತೆಗೆ ಸಿಸಿಟಿವಿ ದೃಶ್ಯಗಳನ್ನು ಪರಿಗಣಿಸಿದ ನಂತರವಷ್ಟೇ ಬಿಲ್‌ ಪಾವತಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಆದಾಗ್ಯೂ ಇಂದಿರಾ ಕ್ಯಾಂಟೀನ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಕಂಡುಬಂದರೆ, ನೇರವಾಗಿ ನನ್ನ ಗಮನಕ್ಕೆ ತರಬಹುದು. ಸಲಹೆಗಳಿಗೂ ಸ್ವಾಗತ ಎಂದು ಆಯುಕ್ತರು ತಿಳಿಸಿದರು. 

26ರಂದು ಮೊಬೈಲ್‌ ಕ್ಯಾಂಟೀನ್‌ ಶುರು: ಗಣರಾಜ್ಯೋತ್ಸವಕ್ಕೆ ನಗರದಲ್ಲಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ಗಳ ಸೇವೆ ಆರಂಭವಾಗಲಿದೆ. ಜ.26ರಂದು ವಿಧಾನಸೌಧ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ಮಂಜುನಾಥ ಪ್ರಸಾದ್‌ ಹೇಳಿದರು.

ಈಗಾಗಲೇ 154 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಸ್ಥಳದ ಲಭ್ಯತೆ ಇಲ್ಲದ ಕಡೆಗಳಲ್ಲಿ ಮೊಬೈಲ್‌ ಕ್ಯಾಂಟೀನ್‌ ಸೇವೆ ಕಲ್ಪಿಸಲು ನಿರ್ಧರಿಸಲಾಗಿದೆ. 24 ಮೊಬೈಲ್‌ ಕ್ಯಾಂಟೀನ್‌ಗಳು ನಗರದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.