ಅವರೆ ಕಾಯಿಯ ತರಾವರಿ ಅವತಾರ


Team Udayavani, Jan 5, 2018, 11:30 AM IST

avaremela.jpg

ಬೆಂಗಳೂರು: ನಗರದ ಶ್ರೀವಾಸವಿ ಕಾಂಡಿಮೆಂಟ್ಸ್‌ನ 18ನೇ ವಾರ್ಷಿಕ ಅವರೆ ಬೇಳೆ ಮೇಳಕ್ಕೆ ಗುರುವಾರ ಚಾಲನೆ ದೊರೆತಿದೆ. ವಿವಿ ಪುರದ ಸಜ್ಜನರಾವ್‌ ವೃತ್ತದಲ್ಲಿನ ಕಾಂಡಿಮೆಂಟ್ಸ್‌ ಬಳಿ ವಿಧಾನ ಪರಿಷತ್‌ ಸದಸ್ಯೆ ತಾರಾ ಅನುರಾಧಾ ಚಾಲನೆ ನೀಡಿದ್ದು, ಜ.15ರವರೆಗೆ ಮೇಳ ನಡೆಯಲಿದೆ.

ಇದೇ ವೇಳೆ ಮಾತನಾಡಿದ ತಾರಾ ಅವರು, ಸಣ್ಣ ಪ್ರಮಾಣದಲ್ಲಿ ಆರಂಭವಾದ ಈ ಮೇಳ ಇಂದು ಬೆಂಗಳೂರಿನ ಪ್ರಮುಖ ಕಾರ್ಯಕ್ರಮವಾಗಿ ಬೆಳೆದಿರುವುದು ಹೆಮ್ಮೆಯ ಸಂಗತಿ. ರೈತರಿಗೂ ಉಪಯೋಗವಾಗುವಂತಹ ಇಂತಹ ಮೇಳಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.

ಅವರೆ ಕಾಯಿಂದ ಪಾಯಸ ಮಾಡುವುದು ನನಗೆ ತಿಳಿದಿತ್ತು. ಆದರೆ ಈ ಮೇಳಕ್ಕೆ ಭೇಟಿ ನೀಡಿದ ನಂತರ ತರಹೇವಾರಿ ಅವರೆ ಕಾಯಿ ಖಾದ್ಯಗಳನ್ನು ತಯಾರಿಸಬಹುದು ಎಂಬುವುದು ನನ್ನ ಅರಿವಿಗೆ ಬಂತು ಎಂದು ಹೇಳಿದರು. ಕಾರ್ಯಕ್ರಮದ ಆಯೋಜಕಿ ಗೀತಾ ಶಿವಕುಮಾರ್‌ ಅವರನ್ನ ತಾರಾ ಪ್ರಶಂಸಿಸಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, ಸರ್ಕಾರ ಇಂತಹ ಮೇಳಗಳನ್ನು ಹೆಚ್ಚು ಪ್ರೋತ್ಸಾಹಿಸಿ ತರಹೇವಾರಿ ಅವರೆ ಬೇಳೆ ಖಾದ್ಯಗಳಿಗೆ ಮಾರುಕಟ್ಟೆ ಸೃಷ್ಟಿಸಬೇಕು. ಉಪ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿದಾಗ ರೈತರಿಗೂ ಸಾಕಷ್ಟು ಅನುಕೂಲ ಆಗಲಿದೆ ಎಂದರು.

ವಿದೇಶಿಯರು ಕೂಡ ಭಾರತೀಯ ಆಹಾರ ಪದ್ಧತಿ ಅನುಕರಿಸುತ್ತಿದ್ದಾರೆ. ಆದರೆ ನಾವು ವಿದೇಶಿ ಆಹಾರದ ಅನುಕರಣೆ ಮಾಡುತ್ತಿದ್ದೇವೆ. ನಮ್ಮಲ್ಲಿಯೇ ಸಿಗುವ ಪೌಷ್ಠಿಕ ಆಹಾರ ಸೇವಿಸುವುದನ್ನು ನಾವು ಮೊದಲು ಕಲಿಯಬೇಕು ಎಂದು ಹೇಳಿದರು.

ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್‌ ಮಾತನಾಡಿ, ವಿದೇಶಿ ಆಹಾರಗಳನ್ನು ನಾವು ಕೊಳ್ಳುವುದರಿಂದ ಆರ್ಥಿಕವಾಗಿ ನಮಗೇ ನಷ್ಟ. ನಮ್ಮ ರೈತರು ಬೆಳೆದ ಬೆಳೆಗಳಲ್ಲಿ ಪೌಷ್ಠಿಕಾಂಶ ಹೆಚ್ಚಿರುತ್ತದೆ. ಅಲ್ಲದೆ ನಮ್ಮ ಬೆಳೆಗಳು ತಾಜಾತನದಿಂದ ಕೂಡಿರಲಿದ್ದು ಆರೋಗ್ಯಕ್ಕೂ ಯೋಗ್ಯ ಎಂದರು. ಈ ವೇಳೆ ಚಿತ್ರನಟಿ ಮಯೂರಿ, ಗಿರಿಜಾ ಲೋಕೇಶ್‌, ಜೆಡಿಎಸ್‌ ಮುಖಂಡ ಶರವಣನ್‌, ಮಮತಾ ಆರ್‌.ವಿ. ದೇವರಾಜ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅವರೆ ಖಾದ್ಯಗಳೂ ಇಲ್ಲಿವೆ: ಹಿತಕಿದ ಅವರೆ ಬೇಳೆ ಹೋಳಿಗೆ, ಅವರೆ ಬೇಳೆ ದೋಸೆ, ಹಿತಕಿದ ಅವರೆ ಬೇಳೆ ಜಾಮೂನು, ಹಿತಕಿದ ಅವರೆ ಬೇಳೆ ಹನಿ ಜಿಲೇಬಿ, ಅವರೆಬೇಳೆ ರೋಲ್‌, ಮಂಚೂರಿ, ರುಮಾಲಿ ರೋಟಿ, ರಾಗಿ ಮುದ್ದೆ-ಅವರೆ ಕಾಳು ಸಾರು ಸೇರಿದಂತೆ ಹಲವು ಬಗೆಯ ಖಾದ್ಯಗಳು ಮೇಳದಲ್ಲಿ ದೊರೆಯಲಿವೆ. ಅವರೆಕಾಯಿ ಕಟ್ಲಿ, ಅವರೆ ಕಾಯಿ ಸ್ಟಿಕ್ಸ್‌ ಈ ಸಲದ ವಿಶೇಷ ಖಾದ್ಯವಾಗಿದ್ದು, ಭೋಜನಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.

ಅವರೆ ಬೇಳೆ ಮೇಳ ಅಂದ್ರೆ ನನಗಿಷ್ಟ. ಪ್ರತಿ ವರ್ಷವೂ ನಾನು ಅವರೆ ಬೇಳೆ ಮೇಳಕ್ಕೆ ಭೇಟಿ ನೀಡಿ ನನಗಿಷ್ಟವಾದ ಭಕ್ಷ್ಯಗಳನ್ನು ಸವಿಯುತ್ತೇನೆ. ಅವರೆ ಕಾಯಿ ದೋಸೆ ಅಂದ್ರೆ ನನಗೆ ಅಚ್ಚುಮೆಚ್ಚು.
-ಮಯೂರಿ, ಚಿತ್ರ ನಟಿ

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.