ಕೆರೆಗೆ ಹಾರವಾಗಲಿವೆ ಸಾವಿರ ಮರ?


Team Udayavani, Jan 5, 2018, 11:30 AM IST

haklsuru-lae.jpg

ಬೆಂಗಳೂರು: ನಗರದ ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ ಬೆಂಗಳೂರು ಸುತ್ತಮುತ್ತಲಿನ ನಗರಗಳ ಕೆರೆಗಳನ್ನು ತುಂಬಿಸಲು ಸರ್ಕಾರ ಉದ್ದೇಶಿಸಿದ್ದು, ಇದಕ್ಕಾಗಿ ನೂರಾರು ಎಕರೆಯಲ್ಲಿ ಬೆಳೆದುನಿಂತ ಸಾವಿರಾರು ಮರಗಳು ಬಲಿಯಾಗಲಿವೆ.

ಅಕೇಶಿಯ, ಅತ್ತಿ, ನೀಲಗಿರಿ ಸೇರಿದಂತೆ ಸಾಮಾಜಿಕ ಅರಣ್ಯದಡಿ ಕೆರೆಯಂಗಳದಲ್ಲಿ ಬೆಳೆದುನಿಂತ ಸಾವಿರಕ್ಕೂ ಅಧಿಕ ಮರಗಳಿಗೆ ಈಗ ಕೊಡಲಿ ಪೆಟ್ಟು ಬೀಳಲಿದೆ. ಮರಗಳ ತೆರವಿಗೆ ಈಗಾಗಲೇ ಸಣ್ಣ ನೀರಾವರಿ ಇಲಾಖೆಯಿಂದ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ನಗರದಲ್ಲಿ ತಲೆಯೆತ್ತಿರುವ ಮತ್ತು ನಿರ್ಮಾಣಗೊಳ್ಳಲಿರುವ ತ್ಯಾಜ್ಯನೀರು ಸಂಸ್ಕರಣಾ ಘಟಕಗಳಿಂದ ಸಂಸ್ಕರಿಸಿದ ನೀರನ್ನು ಯಶವಂತಪುರ, ಆನೇಕಲ್‌, ಪೂರ್ವಭಾಗ ಒಳಗೊಂಡಂತೆ ಬೆಂಗಳೂರು ವ್ಯಾಪ್ತಿಯಲ್ಲಿ ಅಂದಾಜು 80ಕ್ಕೂ ಹೆಚ್ಚು ಕೆರೆಗಳಿಗೆ ಹರಿಸಲು ಯೋಜನೆ ರೂಪಿಸಲಾಗಿದೆ. ಆದರೆ, ಈಗಾಗಲೇ ಆ ಕೆರೆಯಂಗಳದಲ್ಲಿ ಹತ್ತಾರು ವರ್ಷಗಳಿಂದ ಸಾವಿರಕ್ಕೂ ಹೆಚ್ಚು ಮರಗಳು ಬೆಳೆದುನಿಂತಿವೆ. ಅವೆಲ್ಲವುಗಳನ್ನು ಈಗ ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. 

ಕೆರೆಯಂಗಳದಲ್ಲಿ ಮರ; ನಿಯಮಬಾಹಿರ?: ಕೇವಲ ಕೆರೆಗಳನ್ನು ತುಂಬಿಸುವುದಲ್ಲ, ಈ ಕೆರೆಗಳ ಪುನರುಜ್ಜೀವನಗೊಳಿಸುವ ಉದ್ದೇಶವೂ ಇಲಾಖೆಗಿದೆ. ಈ ನಿಟ್ಟಿನಲ್ಲಿ ಹೂಳು ತೆಗೆಯುವುದು, ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು, ಬದುಗಳನ್ನು ನಿರ್ಮಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ. ಇದಕ್ಕಾಗಿ ಕೆರೆಗಳ ಅಂಗಳದಲ್ಲಿ ಬೆಳೆದ ಮರಗಳನ್ನು ತೆರವುಗೊಳಿಸುವುದು ಅನಿವಾರ್ಯ ಆಗಲಿದೆ. ಅಷ್ಟಕ್ಕೂ ಕೆರೆ ಅಂಚಿನಲ್ಲಿ ಗಿಡ ನೆಡಲು ಅರಣ್ಯ ಇಲಾಖೆಗೆ ಸೂಚಿಸಲಾಗಿತ್ತು.

ಆದರೆ, ಬಹುತೇಕ ಎಲ್ಲ ಮರಗಳನ್ನೂ ಅಂಗಳದಲ್ಲಿ ಬೆಳೆಸಲಾಗಿದೆ. ಇದು ನಿಯಮಬಾಹಿರ. ಕೆರೆ ಅಂಗಳದಲ್ಲಿ ಮರಗಳನ್ನು ಬೆಳೆಸಿದರೆ, ಕೆರೆಗಳ ಗತಿ ಏನು? ಅದೇನೇ ಇರಲಿ, ಕೆರೆಯಂಗಳದಲ್ಲಿ ಬೆಳೆದ ಮರಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವುದರಿಂದ ತೆರವುಗೊಳಿಸಲು ಪತ್ರ ಬರೆಯಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಮರಗಳ ಲೆಕ್ಕ ಮಾಡಬೇಕು: ಮರಗಳ ತೆರವಿಗೆ ಸಂಬಂಧಿಸಿದ ಪತ್ರ ಕೈಸೇರಿದೆ. ಎಷ್ಟು ಮರಗಳನ್ನು ಕಡಿಯಬೇಕಾಗುತ್ತದೆ ಎಂಬುದನ್ನು ಇನ್ನೂ ಅಂದಾಜಿಸಿಲ್ಲ. ಆದರೆ, ಸಾವಿರಾರು ಮರಗಳನ್ನು ತೆರವುಗೊಳಿಸಬೇಕಾಗುತ್ತದೆ. ಇದರಲ್ಲಿ ಅಕೇಶಿಯ, ಅತ್ತಿ, ಜಾಲಿ, ನೀಲಗಿರಿ ಮತ್ತಿತರ ಪ್ರಕಾರದ ಮರಗಳು ಇವೆ.

ಯಶವಂತಪುರದಲ್ಲೇ 20 ಕೆರೆಗಳನ್ನು ತುಂಬಿಸಲು ಉದ್ದೇಶಿಸಿದ್ದು, ಕೆರೆ ಅಂಗಳದಲ್ಲಿನ ಮರಗಳನ್ನು ತೆರವುಗೊಳಿಸಬೇಕಾಗಿದೆ. ಈ ಬಗ್ಗೆ ಇನ್ನೂ ಅಂತಿಮಗೊಂಡಿಲ್ಲ. ಪರಿಶೀಲನಾ ಹಂತದಲ್ಲಿದೆ ಎಂದು ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು ನಗರದ ಸಂಸ್ಕರಸಿದ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಸೇರಿದಂತೆ ಮೂರು ಜಿಲ್ಲೆಗಳಲ್ಲಿನ ಅಂದಾಜು 250 ಕೆರೆಗಳಿಗೆ 650 ಎಂಎಲ್‌ಡಿ ನೀರು ಹರಿಸಲು ಉದ್ದೇಶಿಸಲಾಗಿದೆ. ಈ ಪೈಕಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಕೆರೆಗಳು ಬರುತ್ತವೆ. 

650 ಎಂಎಲ್‌ಡಿ ನೀರು ಕೆರೆಗಳಿಗೆ: ನಗರದಲ್ಲಿ ಪ್ರಸ್ತುತ 24 ತ್ಯಾಜ್ಯನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ಗಳಿದ್ದು, ಇವುಗಳಿಂದ ನಿತ್ಯ 1,057 ದಶಲಕ್ಷ ಲೀ. ನೀರು ಸಂಸ್ಕರಿಸಲಾಗುತ್ತಿದೆ. ಈ ಪೈಕಿ ಸದ್ಯ 440 ಎಂಎಲ್‌ಡಿ ಕೋಲಾರಕ್ಕೆ ಹಾಗೂ 210 ಎಂಎಲ್‌ಡಿ ಚಿಕ್ಕಬಳ್ಳಾಪುರ ಕೆರೆಗಳಿಗೆ ಹರಿಸುವ ಪ್ರಸ್ತಾವನೆ ಇದೆ. ಇನ್ನೂ 9 ಘಟಕಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಮುಂದಿನ ದಿನಗಳಲ್ಲಿ ಇದರಿಂದ 515 ಎಂಎಲ್‌ಡಿ ಶುದ್ಧೀಕರಿಸಿದ ನೀರು ಲಭ್ಯವಾಗಲಿದೆ. ಇದಲ್ಲದೆ, ಕಾವೇರಿ 5ನೇ ಹಂತದಲ್ಲಿ ಮತ್ತೆ 16 ತ್ಯಾಜ್ಯನೀರು ಸಂಸ್ಕರಣಾ ಘಟಕ ನಿರ್ಮಿಸುವ ಯೋಜನೆ ಇದೆ. ಆಗ ಒಟ್ಟಾರೆ ನಿತ್ಯ 1,701 ದಶಲಕ್ಷ ಲೀ. ನೀರು ಸಿಗಲಿದೆ ಎಂದು ಜಲಮಂಡಳಿಯ ಮುಖ್ಯ ಎಂಜಿನಿಯರ್‌ (ತ್ಯಾಜ್ಯನೀರು ನಿರ್ವಹಣೆ) ಎನ್‌. ಸತೀಶ್‌ ತಿಳಿಸುತ್ತಾರೆ. 

ಎಷ್ಟು ಕೆರೆಗಳಿಗೆ ನೀರು?
ಕೋಲಾರ    126
ಚಿಕ್ಕಬಳ್ಳಾಪುರ    64
ಬೆಂಗಳೂರು    69
ಹರಿಸಲಿರುವ ನೀರು    650 ಎಂಎಲ್‌ಡಿ

ಎಲ್ಲಿ, ಎಷ್ಟು ಮರಗಳಿಗೆ ಕುತ್ತು?: ಯಶವಂತಪುರ, ಆನೇಕಲ್‌, ಹೊಸಕೋಟೆ ಸೇರಿದಂತೆ ಸುತ್ತಲಿನ ಕೆರೆಗಳಲ್ಲಿನ ಸಾವಿರಕ್ಕೂ ಅಧಿಕ ಮರಗಳಿಗೆ ಕುತ್ತು ಬಂದಿದೆ. ಜೆಸಿಬಿ ಸಹಾಯದಿಂದ ಈ ಕೆರೆಗಳನ್ನು ಎರಡರಿಂದ ಮೂರು ಅಡಿ ಆಳ ಮಣ್ಣು ತೆಗೆಯಬೇಕು. ಜತೆಗೆ ಅಂಗಳವನ್ನು ಸಮತಟ್ಟು ಮಾಡಬೇಕಾಗುತ್ತದೆ.

ಇದಕ್ಕಾಗಿ ಈ ಮರಗಳ ತೆರವು ಮಾಡುವುದು ಅನಿವಾರ್ಯ. ಇದಕ್ಕೆ ಇದುವರೆಗೆ ಪರಿಸರವಾದಿಗಳ ಯಾವುದೇ ಆಕ್ಷೇಪ ಬಂದಿಲ್ಲ. ಮರಗಳ ತೆರವಿನ ಹಿಂದಿರುವ ಉದ್ದೇಶ ಕೂಡ ಪರಿಸರಕ್ಕೆ ಪೂರಕವಾದುದಾಗಿದೆ. ಕೆರೆಗಳನ್ನು ಉಳಿಸಲು ಮತ್ತು ಆ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಇದು ಅಗತ್ಯ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.