ಸ್ವಚ್ಛ ಸರ್ವೇಕ್ಷಣೆಯಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಮುಖ್ಯ


Team Udayavani, Jan 5, 2018, 12:10 PM IST

m4-swachcha.jpg

ಮೈಸೂರು: ದೇಶದ ಸ್ವಚ್ಛನಗರಗಳ ಪಟ್ಟಿಯಲ್ಲಿ ಮೈಸೂರು ಮತ್ತೂಮ್ಮೆ ಅಗ್ರಸ್ಥಾನ ಪಡೆಯಲು ಸಾರ್ವಜನಿಕರು ಸ್ವಚ್ಛ ಸರ್ವೇಕ್ಷಣೆಯಲ್ಲಿ ಪಾಲ್ಗೊಳ್ಳುವಂತೆ ನಗರ ಪಾಲಿಕೆ ಆಯುಕ್ತ ಜಿ.ಜಗದೀಶ್‌ ಮನವಿ ಮಾಡಿದರು.

ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ನಡೆಯುತ್ತಿರುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಎರಡು ಬಾರಿ ಪ್ರಥಮ ಸ್ಥಾನ ಪಡೆದಿದ್ದ ಮೈಸೂರು, ಕಳೆದ ವರ್ಷ 5ನೇ ಸ್ಥಾನ ಪಡೆದಿದ್ದು, ಹೀಗಾಗಿ ಈ ಬಾರಿ ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕೆಂಬ ಗುರಿ ಹೊಂದಲಾಗಿದೆ. ಆದರೆ ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಆದ್ದರಿಂದ ಗುರುವಾರದಿಂದ ಆರಂಭವಾಗಿರುವ ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ನಾಗರಿಕರು ಹೆಚ್ಚಾಗಿ ಭಾಗವಹಿಸಬೇಕಿದೆ.

ಸ್ವಚ್ಛ ಸರ್ವೇಕ್ಷಣೆ ಸಂದರ್ಭದಲ್ಲಿ ನಾಗರಿಕರ ಪ್ರತಿಕ್ರಿಯೆ ಪಡೆದು ನಿರ್ದಿಷ್ಟ ಅಂಕಗಳನ್ನು ನೀಡಲಿದ್ದು, ಆದ್ದರಿಂದ ಜ.4 ರಿಂದ ಮಾರ್ಚ್‌ 10ರವರೆಗೆ ನಡೆಯುವ ಸಮೀಕ್ಷೆಯಲ್ಲಿ ಭಾಗವಹಿಸಿ ಮೈಸೂರಿಗೆ ಮತ್ತೂಮ್ಮೆ ದೇಶದ ಸ್ವಚ್ಛನಗರ ಎಂಬ ಗರಿಮೆ ತಂದುಕೊಡಬೇಕಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಕೋರಿದರು.

ಅಭಿಪ್ರಾಯದ ಕೊರತೆ: ಸ್ವಚ್ಛ ಸರ್ವೇಕ್ಷಣೆಗೆ ಸಂಬಂಧಿಸಿದಂತೆ ಕಳೆದ ವರ್ಷ ನಾಗರಿಕ ಪ್ರತಿಕ್ರಿಯೆಯ ಕೊರತೆ, ಮಾರುಕಟ್ಟೆ, ವಾಣಿಜ್ಯ ಸ್ಥಳಗಳು, ಸಮುದಾಯ ಶೌಚಾಲಯಗಳ ಕೊರತೆಯಿಂದಾಗಿ ಹೆಚ್ಚಿನ ಅಂಕಗಳು ಲಭಿಸಲಿಲ್ಲ. ಆದರೆ, ಈ ವರ್ಷ ಮಾರುಕಟ್ಟೆಯಲ್ಲಿ ಅಗತ್ಯವಾದ ಸಾರ್ವಜನಿಕ ಮತ್ತು ಸಮುದಾಯದ ಶೌಚಾಲಯಗಳನ್ನು ಹೆಚ್ಚಾಗಿ ನಿರ್ಮಿಸಲಾಗಿದ್ದು,

ಅನೇಕ ಕಡೆಗಳಲ್ಲಿ ಡಸ್ಟ್‌ಬಿನ್‌ಗಳನ್ನು ಸಹ ಇರಿಸುವ ಮೂಲಕ ಕಳೆದ ಬಾರಿ ಉಂಟಾಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳಲಾಗಿದೆ. ಹೀಗಾಗಿ ಸಾರ್ವಜನಿಕರು ಸಹ ಹೆಚ್ಚಾಗಿ ಅಭಿಪ್ರಾಯಗಳನ್ನು ಹಂಚಿಕೊಂಡಲ್ಲಿ, ಮೈಸೂರು ನಗರ ಮತ್ತೂಮ್ಮೆ ಸ್ವಚ್ಛತೆಯಲ್ಲಿ ಮೊದಲ ಸ್ಥಾನಪಡೆಂ‌ುುವುದಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವರ್ಷ ಹೊಸತೇನಿದೆ: ಈ ಬಾರಿಯ ಸಮೀಕ್ಷೆಯಲ್ಲಿ ಪಾಲಿಕೆಯಿಂದ ಸಲ್ಲಿಸುವ ದಾಖಲೆ ಹಾಗೂ ಸ್ಥಳ ಪರಿಶೀಲನೆ ಸಂದರ್ಭದಲ್ಲಿನ ಮಾಹಿತಿ ಸರಿಯಾಗಿರದಿದ್ದಲ್ಲಿ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಈ ಕಾರಣದಿಂದ ಕಳೆದ ಮೂರು ತಿಂಗಳಿಂದಲೂ ಪಾಲಿಕೆ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿ, ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ಆದ್ದರಿಂದ ಸಮೀಕ್ಷೆಯ 4000 ಅಂಕಗಳಲ್ಲಿ ನಾವು ಸಂಗ್ರಹಿಸಿರುವ ದಾಖಲೆಗಳ ಆಧಾರದಲ್ಲಿ 2600 ಅಂಕಗಳು ದೊರೆಯುವುದು ಖಚಿತವಾಗಿದೆ. ಇನ್ನು ಸ್ವಚ್ಛ ಸರ್ವೇಕ್ಷಣಾ ಆಪ್‌ಗ್ಳನ್ನು ಕನಿಷ್ಠ 18,000 ಮಂದಿ ಬಳಕೆ ಮಾಡಬೇಕಿದ್ದು, ಈಗಾಗಲೇ 27,000 ಮಂದಿ ಈ ಆಪ್‌ ಬಳಕೆ ಮಾಡುತ್ತಿದ್ದಾರೆ. ಇದೂ ಸಹ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಗೆ ಅನುಕೂಲವಾಗಲಿದೆ. ಕಳೆದ ವರ್ಷ ಸ್ವಚ್ಛ ಸರ್ವೇಕ್ಷಣೆಯಲ್ಲಿ 434 ನಗರಗಳು ಭಾಗವಹಿಸಿದ್ದು, ಈ ಬಾರಿ 4000ಕ್ಕೂ ಹೆಚ್ಚು ನಗರಗಳು ಭಾಗವಹಿಸುತ್ತಿವೆ ಎಂದರು.

ಮೇಯರ್‌ ಎಂ.ಜೆ.ರವಿಕುಮಾರ್‌, ಪಾಲಿಕೆ ಸದಸ್ಯರಾದ ಮಹದೇವಪ್ಪ, ಕೆ.ವಿ.ಮಲ್ಲೇಶ್‌, ಜಗದೀಶ್‌, ಚಲುವೇಗೌಡ, ಆರೋಗ್ಯಾಧಿಕಾರಿ ಡಾ.ನಾಗರಾಜ್‌, ಮಾಜಿ ಎಂಎಲ್ಸಿ ಡಿ.ಮಾದೇಗೌಡ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಇನ್ನಿತರರು ಹಾಜರಿದ್ದರು.

ತಾಂತ್ರಿಕ ಸಮಸ್ಯೆ ಇದೆ: ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಾರ್ವಜನಿಕರು ಮೊಬೈಲ್‌ ಮೂಲಕ ಅಭಿಪ್ರಾಯ ನೀಡುವ ಪ್ರಕ್ರಿಯೆಯಲ್ಲಿ ತಾಂತ್ರಿಕೆ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳ ಮೂಲಕ ಸ್ವಚ್ಛ ಭಾರತ್‌ ಮಿಷನ್‌ಗೆ ದೂರು ನೀಡಲಾಗಿದೆ ಎಂದು ಪಾಲಿಕೆ ಆಯುಕ್ತ ಜಿ.ಜಗದೀಶ್‌ ತಿಳಿಸಿದರು.

ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆ ವೇಳೆ ಸಾರ್ವಜನಿಕರು ಟೋಲ್‌ ಫ್ರೀ ಸಂಖ್ಯೆ 1969ಗೆ ಕರೆ ಮಾಡಿ ತಮ್ಮ ಅನಿಸಿಕೆ ನೀಡಬಹುದಾಗಿದೆ. ಆದರೆ ಬಿಎಸ್‌ಎನ್‌ಎಲ್‌ ಮೊಬೈಲ್‌ ಬಳಕೆದಾರರು ಈ ಸಂಖ್ಯೆಗೆ ಕರೆಮಾಡಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಲು ತೊಂದರೆಯಾಗುತ್ತಿದ್ದು, ಈ ಬಗ್ಗೆ ಈಗಾಗಲೇ ಬಿಎಸ್‌ಎನ್‌ಎಲ್‌ಗೆ ದೂರು ನೀಡಲಾಗಿದೆ. ಉಳಿದಂತೆ ಬೇರೆ ನೆಟ್‌ವರ್ಕ್‌ಗೆ ಸೇರಿದ ಯಾವುದೇ ಮೊಬೈಲ್‌ ಮೂಲಕ ಸಾರ್ವಜನಿಕರು ತಮ್ಮ ಪ್ರತಿಕ್ರಿಯೆ ನೀಡಲು ಸಮಸ್ಯೆ ಆಗುತ್ತಿಲ್ಲ ಎಂದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.