ಆಧಾರ್‌ ಡಾಟಾಬೇಸ್‌ ಕನ್ನ ಸಾಧ್ಯ: ಎಡ್ವರ್ಡ್‌ ಸ್ನೋಡೆನ್‌ ಎಚ್ಚರಿಕೆ


Team Udayavani, Jan 5, 2018, 3:43 PM IST

Aadhar-doll-700.jpg

ಹೊಸದಿಲ್ಲಿ : ಭಾರತ ಸರಕಾರ ಹೇಳಿಕೊಂಡಿರುವಂತೆ ಆಧಾರ್‌ ಡಾಟಾಬೇಸ್‌ ಸುರಕ್ಷಿತವಲ್ಲ; ಅದಕ್ಕೆ ಹ್ಯಾಕರ್‌ಗಳು ಸುಲಭದಲ್ಲಿ ಕನ್ನ ಹಾಕಬಹುದಾಗಿದೆ ಎಂದು ಅಮೆರಿಕದ ವ್ಹಿಸಲ್‌ ಬ್ಲೋವರ್‌ ಎಡ್ವರ್ಡ್‌ ಸ್ನೋಡೆನ್‌ ಹೇಳಿದ್ದಾರೆ.

ಭಾರತದಲ್ಲಿ ಆಧಾರ್‌ ಡಾಟಾ ಬೇಸ್‌ಗೆ ಅಕ್ರಮವಾಗಿ ಕೈ ಹಾಕಲಾಗಿರುವ ಬಗ್ಗೆ ಸಿಬಿಎಸ್‌ ಪತ್ರಕರ್ತ ಝಾಕ್‌ ವಿಟೇಕರ್‌ ಅವರು ಬಝ್ಫೀಡ್‌ ವರದಿಗೆ ನೀಡಿರು ಪ್ರತಿಕ್ರಿಯೆಗೆ ರೀ-ಟ್ವೀಟ್‌ ಮಾಡಿರುವ ಸ್ನೋಡನ್‌, ಖಾಸಗಿ ಮಾಹಿತಿಗಳ ಸುರಕ್ಷಿತವಾಗಿರಬೇಕು ಎಂಬುದು ಎಲ್ಲ ಸರಕಾರಗಳ ಸಹಜ ಪ್ರವೃತ್ತಿ ಮತ್ತು ಆಶಯವಾಗಿರುತ್ತದೆ; ಆದರೆ ಅದಕ್ಕೆ ಕನ್ನ ಹಾಕುವುದಕ್ಕೆ ಯಾವುದೇ ಕಾನೂನು ಒಂದು ಅಡಚಣೆಯೇ ಅಲ್ಲ ಎಂಬುದನ್ನು ಇತಿಹಾಸವೇ ನಮಗೆ ತೋರಿಸುತ್ತದೆ; ಪರಿಣಾಮವಾಗಿ ಅವು ಸುಲಭದಲ್ಲಿ ಚೋರರ ಕೈವಶವಾಗುತ್ತವೆ’ ಎಂದು ಹೇಳಿದ್ದಾರೆ. 

ವಿಟೇಕರ್‌ ಅವರು ಈ ಮೊದಲು ಭಾರತವು ತನ್ನ 1.2 ಶತಕೋಟಿ ಜನರ ಖಾಸಗಿ ಮಾಹಿತಿಗಳ ಆಧಾರ್‌ ಡಾಟಾ ಬೇಸ್‌ ಹೊಂದಿದೆ; ಅದಕ್ಕೆ ಕನ್ನ ಹಾಕಲಾಗಿದೆ ಎಂದು ವರದಿಯಾಗಿದೆ. ಆ್ಯಡ್ಮಿನ್‌ ಖಾತೆಗಳು ಸುಲಭದಲ್ಲಿ ಕನ್ನ ಹಾಕುವವರ ವಶವಾಗುತ್ತವೆ ಮತ್ತು ಅವು ಮಾರಲ್ಪಡುತ್ತವೆ’ ಎಂದು ಎಚ್ಚರಿಸಿದ್ದರು. 

ಟ್ರಿಬ್ಯೂನ್‌ ಪತ್ರಿಕೆ ನಡೆಸಿದ್ದ ತನಿಖೆಯಲ್ಲಿ ಆಧಾರ್‌ ಭದ್ರತೆಯಲ್ಲಿ ಲೂಪ್‌ ಹೋಲ್‌ ಇರುವುದು ಬಹಿರಂಗವಾಗಿತ್ತು.  ಆಧಾರ್‌ ಕಾರ್ಡ್‌ ಡೇಟಾ ಭದ್ರತೆ ಮತ್ತು ಸುರಕ್ಷೆಯ ಬಗ್ಗೆ ಯುಐಡಿಎಐ ಮತ್ತು ಕೇಂದ್ರ ಸರಕಾರ ಎಷ್ಟೇ ಭರವಸೆ ನೀಡಿದರೂ 12 ಡಿಜಿಟ್‌ಗಳ ಈ ವಿಶಿಷ್ಟ ಗುರುತು ಸಂಖ್ಯೆಯ ಡಾಟಾಗಳನ್ನು ಸುಲಭದಲ್ಲಿ ಮತ್ತು ಅನಿರ್ಬಂಧಿತವಾಗಿ ಪಡೆಯಬಹುದಾಗಿದೆ ಎಂಬುದು “ದ ಟ್ರಿಬ್ಯೂನ್‌’ತನಿಖೆಯಲ್ಲಿ ಬಹಿರಂಗವಾಗಿತ್ತು.

ತನ್ನ ವರದಿಗಾರರು ವಾಟ್ಸಾಪ್‌ನಲ್ಲಿ ಅನಾಮಿಕ ಮಾರಾಟಗಾರರ ಮೂಲಕ, ಪೇಟಿಎಂ ನಲ್ಲಿ ಏಜಂಟ್‌ ಒಬ್ಬರಿಗೆ ಕೇವಲ 500 ರೂ. ಪಾವತಿಸಿ  ಆಧಾರ್‌ ಡಾಟಾ ಖರೀದಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿತ್ತು.

ಖರೀದಿ ನಡೆಸಿದ ಕೇವಲ 10 ನಿಮಿಷಗಳಲ್ಲಿ ಆ ಏಜಂಟ್‌ ಪತ್ರಿಕಾ ವರದಿಗಾರನಿಗೆ ಲಾಗಿನ್‌ ಐಡಿ ಮತ್ತು ಪಾಸ್‌ ವರ್ಡ್‌ ಕೊಟ್ಟಿದ್ದಾನೆ. ಇದರ ಮೂಲಕ ನೂರು ಕೋಟಿ ಆಧಾರ್‌ ನಂಬರ್‌ಗಳಿಗೆ ಅನಿರ್ಬಂಧಿತ ಸಂಪರ್ಕ ದೊರಕಿ ಅವುಗಳಲ್ಲಿನ ಖಾಸಗಿ ಮಾಹಿತಿಗಳನ್ನು ತನಿಖಾ ವರದಿಗಾರ ಪಡೆದಿರುವುದಾಗಿ “ದ ಟ್ರಿಬ್ಯೂನ್‌’ ವರದಿ ತಿಳಿಸಿತ್ತು.

ಲಾಗ್‌ ಇನ್‌ ಗೇಟ್‌ವೇ ಮೂಲಕ ಯಾರೇ ಆದರೂ ಯಾವುದೇ ನಿರ್ದಿಷ್ಟ ಆಧಾರ್‌ ನಂಬರ್‌ ಅನ್ನು ಪೋರ್ಟಲ್‌ನಲ್ಲಿ ತಲುಪಬಹುದಾಗಿದ್ದು ಆ ನಂಬರ್‌ನ ವ್ಯಕ್ತಿಯ ಹೆಸರು, ವಿಳಾಸ, ಪೋಸ್ಟಲ್‌ ಕೋಡ್‌, ಫೋಟೋ, ಫೋನ್‌ ನಂಬರ್‌, ಇ-ಮೇಲ್‌ ವಿಳಾಸ ಇತ್ಯಾದಿಗಳನ್ನು ಸುಲಭದಲ್ಲಿ ಪಡೆಯಬಹುದಾಗಿದೆ. ಇದಕ್ಕಿಂತ ಗಂಭೀರವಾದ ಇನ್ನೊಂದು ಆಘಾತಕಾರಿ ಸಂಗತಿ ಎಂದರೆ ಹೆಚ್ಚುವರಿಯಾಗಿ 300 ರೂ.ಗಳನ್ನು ಏಜಂಟ್‌ಗೆ ಪಾವತಿಸಿದರೆ ಆಧಾರ್‌ ಕಾರ್ಡ್‌ ಪ್ರಿಂಟ್‌ ಮಾಡಬಲ್ಲ ಸಾಫ್ಟ್ ವೇರನ್ನು ಕೂಡ ಆತ ಒದಗಿಸುತ್ತಾನೆ ಎಂದು ಪತ್ರಿಕಾ ವರದಿ ತಿಳಿಸಿತ್ತು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.