![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 7, 2018, 11:45 AM IST
ಕಾವೂರು: ಕಾವೂರಿನ ಯಶ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಆಟಿಸಂ ಮಕ್ಕಳ ಕ್ರೀಡಾಕೂಟವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ತಾರಾ ರಾವ್ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿ ಮಾತನಾಡಿ, ಆಟಿಸಂ ಮಕ್ಕಳ ಶಾರೀರಿಕ ಅಭಿವೃದ್ಧಿಗೆ ಪ್ರೋತ್ಸಾಹಗಳನ್ನು ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಅಭಿಪ್ರಾಯಪಟ್ಟರು. ಕಾವೂರಿನ ಹಣ್ಣಿನ ವ್ಯಾಪಾರಿ ಹಸನಬ್ಬ ಅವರು ಮಕ್ಕಳ ಅಭಿವೃದ್ಧಿಗೆ ತನ್ನಿಂದಾದ ಸಹಾಯ ನೀಡಲು ಸಿದ್ಧ ಎಂದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಜಾನ್ ಪಿಂಟೋ, ಎನ್ನೆಸ್ಸೆಸ್ ಸಂಯೋಜನಾಧಿಕಾರಿ ರೇಖಾ, ಚೇತನಾ ಶಾಲೆಯ ವಿಶೇಷ ಶಿಕ್ಷಕ ಕುಶ ನಾೖಕ್ ಕ್ರೀಡಾ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಸೌಮ್ಯಲತಾ ಸಹಕರಿಸಿದರು. ವಿಶೇಷ ಮಕ್ಕಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ವಿದ್ಯಾರ್ಥಿಗಳು ಉತ್ತೇಜನ ನೀಡಿ ಸಹಕರಿಸಿದ್ದು, ಸಮಾಜಕ್ಕೆ ಮಾದರಿಯಾಗಿತ್ತು. ವಿದ್ಯಾರ್ಥಿಗಳ ನಿಸ್ವಾರ್ಥ ಸೇವೆಯ ಬಗ್ಗೆ ಯಶ ಟ್ರಸ್ಟ್ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಟ್ರಸ್ಟಿ ಜಿ.ಕೆ. ಭಟ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಟ್ರಸ್ಟಿ ದುರ್ಗಾಲಕ್ಷ್ಮೀ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಚಂದ್ರಿಕಾ ವಂದಿಸಿದರು ಮತ್ತು ಸುನೀಲ್ ಜಿ.ಬಿ. ಕಾರ್ಯಕ್ರಮ ನಿರ್ವಹಿಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.