ದೀಪಕ್ ರಾವ್ ಕೊಲೆಗೆ ಬಿಜೆಪಿ ಕಾರ್ಪೋರೇಟರ್ ಕಾರಣ: ಎಚ್ಡಿಕೆ ಆರೋಪ
Team Udayavani, Jan 9, 2018, 6:45 AM IST
ಮೈಸೂರು: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿಯ ಕಾರ್ಪೋರೇಟರ್ ಭಾಗಿ ಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ
ನಾಲ್ವರನ್ನು ಬಂಧಿಸಲಾಗಿದೆ. ದೀಪಕ್ ಕೊಲೆಗೆ ಬಿಜೆಪಿ ನಾಯಕರೇ ಕಾರಣರೆಂಬ ಮಾಹಿತಿ ತಮಗಿದೆ. ಆದರೆ, ಕೊಲೆಗೆ ಕಾರಣರ್ಯಾರು? ಪ್ರೇರೇಪಿಸಿದವರು ಯಾರು? ಎಂಬ ಮಾಹಿತಿಯನ್ನು ಸರ್ಕಾರ ಏಕೆ ಬಹಿರಂಗಪಡಿಸುತ್ತಿಲ್ಲ? ಯಾರನ್ನು ರಕ್ಷಣೆ ಮಾಡಲು ಹೊರಟಿದೆ ಈ ಸರ್ಕಾರ? ಈ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಒಪ್ಪಂದ ಮಾಡಿಕೊಂಡಿದ್ದಾರಾ ಎಂದು ಕಿಡಿಕಾರಿದ ಕುಮಾರ ಸ್ವಾಮಿ, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಕೊಲೆ ಸೇರಿ ಎಲ್ಲ ಪ್ರಕರಣಗಳಲ್ಲಿ ಸರ್ಕಾರದ ವೈಫಲ್ಯತೆ ಎದ್ದು ಕಾಣುತ್ತಿದೆ. ಹಂತಕರ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧಿಸುತ್ತೇವೆಂದು ಎಷ್ಟು ಬಾರಿ ಹೇಳುತ್ತೀರಿ ಎಂದು ಪ್ರಶ್ನಿಸಿದರು.
ತುಪ್ಪ ಸುರಿಯಲ್ಲ: ವಾತಾವರಣ ತಿಳಿಗೊಂಡು ಶಾಂತಿ ನೆಲೆಗೊಳ್ಳಲಿ ಎಂದು ಮಂಗಳವಾರ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸೌಹಾರ್ದ ಸಭೆಯನ್ನು ಮುಂದೂಡಿದ್ದೇವೆ. ಬೆಂದ ಮನೆಯಲ್ಲಿ ಗಳ ಹಿರಿಯುವ, ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುವುದಿಲ್ಲ. ಜೆಡಿಎಸ್ ಪಕ್ಷ ಹಿಂದೂಗಳ ಪರ, ಮುಸ್ಲಿಮರ ಪರ ಅಂತಲ್ಲ. ನಾವು ರಾಜ್ಯದ ಆರೂವರೆ ಕೋಟಿ ಜನರ ಪರ. ಚುನಾವಣೆಗಾಗಿ ನಾವು ಜಾತಿ, ಧರ್ಮವನ್ನು ಒಡೆಯುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.