H-1Bವೀಸಾ ನೀತಿ ಬದಲಿಲ್ಲ; ಅಮೆರಿಕದ ಭಾರತೀಯ ಟೆಕ್ಕಿಗಳಿಗೆ ರಿಲೀಫ್


Team Udayavani, Jan 9, 2018, 1:24 PM IST

Tech.jpg

ವಾಷಿಂಗ್ಟನ್:ಭಾರತೀಯ ಟೆಕ್ಕಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ, ಹೌದು ಭಾರತ ಸೇರಿದಂತೆ ವಿದೇಶಿ ತಂತ್ರಜ್ಞರು, ವೃತ್ತಿಪರರಿಗೆ ಉದ್ಯೋಗ ದೊರಕಿಸಿ ಕೊಡುವ ಎಚ್ 1 ಬಿ ವೀಸಾ ಹೊಂದಿರುವವರು ದೇಶ ಬಿಟ್ಟು ತೆರಳಬೇಕೆಂಬ ಯಾವ ಪ್ರಸ್ತಾಪವನ್ನು ಟ್ರಂಪ್ ಆಡಳಿತ ಸದ್ಯಕ್ಕೆ ಪರಿಗಣಿಸುತ್ತಿಲ್ಲ ಎಂದು ಮಂಗಳವಾರ ತಿಳಿಸಿದೆ.

ಭಾರತೀಯ ತಂತ್ರಜ್ಞರು ಮತ್ತು ವೃತ್ತಿಪರರಿಗೆ ಅಮೆರಿಕದಲ್ಲಿ ಉದ್ಯೋಗ ದೊರಕಿಸಿಕೊಡುವ ಎಚ್ 1ಬಿ ವೀಸಾ ವಿಸ್ತರಣೆಗೆ ಕಡಿವಾಣ ಹಾಕಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ ನಡೆಸಿದ್ದರು. ಇದರಿಂದಾಗಿ 7,50,000 ಭಾರತೀಯರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸಿದ್ದರು.

ಎಚ್ 1ಬಿ ವೀಸಾ ಹೊಂದಿರುವವರು ಅಮೆರಿಕದಲ್ಲಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಭೀತಿಗೆ ತೆರೆ ಬಿದ್ದಿರುವುದಾಗಿ ವರದಿ ವಿವರಿಸಿದೆ.

ಅಮೆರಿಕಾದಲ್ಲಿರುವವರಿಗೆ ಉದ್ಯೋಗ ದೊರಕಿಸಿಕೊಡುವ ಸಿದ್ಧತೆ ನಡೆಸಿರುವ ಟ್ರಂಪ್, ವಿದೇಶಿ (ಭಾರತ ಸೇರಿದಂತೆ) ಐಟಿ ಉದ್ಯೋಗಿಗಳ ಮೇಲೆ ನಿರ್ಬಂಧ ಹೇರಲು ಮುಂದಾಗಿದ್ದರು. ಇದರಿಂದಾಗಿ ಅಮೆರಿಕ ಎಚ್ 1 ಬಿ ವೀಸಾ ಪಡೆಯಲು ಕಠಿಣ ನಿಯಮ ಜಾರಿಗೊಳಿಸಿತ್ತು. ಅಮೆರಿಕದ ಎಚ್ 1 ಬಿ ವೀಸಾದ ಹೊಸ ನೀತಿಯಿಂದಾಗಿ ಭಾರತೀಯ ಐಟಿ ದಿಗ್ಗಜ ಕಂಪನಿಗಳಾದ ಇನ್ಫೋಸಿಸ್, ಟಿಸಿಎಸ್, ವಿಪ್ರೋಗೆ ಭಾರೀ ಹೊಡೆತ ಬೀಳಲಿತ್ತು.

ತಂತ್ರಜ್ಞರು ಮತ್ತು ವೃತ್ತಿಪರರಿಗೆ ಅಮೆರಿಕದಲ್ಲಿ ಉದ್ಯೋಗ ದೊರಕಿಸಿಕೊಡುವ ಎಚ್ 1 ಬಿ ವೀಸಾ ನಿಯಮ ರದ್ದುಪಡಿಸಬೇಕೆಂದು ಡೊನಾಲ್ಡ್ ಟ್ರಂಪ್ ಅಧ್ಯಕ್ಷೀಯ ಚುನಾವಣೆ ವೇಳೆಯೇ ಹೇಳಿಕೆ ನೀಡಿದ್ದರು.

ಎಚ್1 ಬಿ ವೀಸಾ ಪಡೆಯುವವರು ಕನಿಷ್ಠ 1,30, 000 ಲಕ್ಷ ಅಮೆರಿಕನ್ ಡಾಲರ್(ಅಂದಾಜು ವರ್ಷಕ್ಕೆ 8 ಕೋಟಿ) ಸಂಬಳ ಹೊಂದಿರಬೇಕೆಂದು ತಿದ್ದುಪಡಿ ಮಸೂದೆಯಲ್ಲಿ ಹೇಳಲಾಗಿತ್ತು. ಇದು ಈ ಹಿಂದಿನ ನಿಯಮಕ್ಕಿಂತ ದುಪ್ಪಟ್ಟಾಗಿದ್ದು, ಇದರಿಂದ ಭಾರತೀಯ ಐಟಿ ಉದ್ಯೋಗಿಗಳಿಗೆ ಭಾರೀ ಹೊಡೆತ ನೀಡಲಿದೆ ಎಂದು ವಿಶ್ಲೇಷಿಸಲಾಗಿತ್ತು. ಎಚ್1 ಬಿ ವೀಸಾದಿಂದ ವಿದೇಶಿ(ಭಾರತ ಸೇರಿದಂತೆ)ಗರಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವುದಕ್ಕೆ ನಿರ್ಬಂಧ ಹೇರುವ ನಿಟ್ಟಿನಲ್ಲಿ ಹೊಸ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು.

ಏತನ್ಮಧ್ಯೆ ಎಚ್ 1ಬಿ ವೀಸಾ ಅವಧಿ ವಿಸ್ತರಣೆಗೆ ಕಡಿವಾಣ ಹಾಕುವ ನಿರ್ಧಾರಕ್ಕೆ ಅಮೆರಿಕದ ಸೆನೆಟ್ ನಲ್ಲಿಯೂ ತೀವ್ರ ವಿರೋಧ ವ್ಯಕ್ತವಾಗಿತ್ತು, ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಅಧ್ಯಕ್ಷ ಟ್ರಂಪ್ ಅವರ ಜತೆ ಚರ್ಚಿಸಿ ಇಂತಹ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.