ದೇವರ ಪಟ್ಟಣ ಸವಾರಿ, ಅವಭೃಥ ಸ್ನಾನ: ಇಂದು ಜಾತ್ರೆ ಸಂಪನ್ನ


Team Udayavani, Jan 12, 2018, 11:11 AM IST

12-Jan-9.jpg

ಸುಳ್ಯ: ಶ್ರೀ ಚೆನ್ನಕೇಶವ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಬುಧವಾರ ಮಧ್ಯರಾತ್ರಿ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತವೃಂದ ತೇರನ್ನು ಎಳೆದು, ಶ್ರೀ ದೇವರ ದರ್ಶನ ಪಡೆದು, ಪುನೀತವಾಯಿತು.

ರಥೋತ್ಸವ
ಕಲ್ಕುಡ ದೈವಗಳ ಭಂಡಾರ ದೇವಾಲಯಕ್ಕೆ ಆಗಮಿಸಿತ್ತು. ದೇವಸ್ಥಾನದ ವತಿಯಿಂದ ದೈವವನ್ನು ಸ್ವಾಗತಿಸಲಾಯಿತು. ರಥಬೀದಿಯಲ್ಲಿ ದೈವ ದೇವರನ್ನು ಎದುರುಗೊಂಡು, ದೈವ ಮತ್ತು ದೇವರು ಮುಖಾಮುಖೀ ನಡೆಯಿತು. ರಥದಲ್ಲಿ ಶ್ರೀ ದೇವರನ್ನು ಕುಳ್ಳಿರಿಸಿ, ಪೂಜಾದಿ ಕಾರ್ಯಕ್ರಮಗಳು ನಡೆದವು. ಮಧ್ಯರಾತ್ರಿ 1.30ರ ಹೊತ್ತಿಗೆ ವೈಭವದ ರಥೋತ್ಸವ ಆರಂಭಗೊಂಡಿತ್ತು. ಕಲ್ಕುಡ ಮತ್ತು ಉದ್ರಾಂಡಿ ದೈವಗಳು ರಥದ ಜತೆಗೆ ಸಂಚರಿಸಿದವು. ರಥೋತ್ಸವ ಮುಖ್ಯ ರಸ್ತೆಯ ಸಮೀಪದ ದೇವರ ಕಟ್ಟೆ ಬಳಿ ತನಕ ಸಾಗಿ, ಪುನಃ ದೇವಾಲಯಕ್ಕೆ ಹಿಂತಿರುಗಿತ್ತು.

ಶಾಸಕ ಎಸ್‌. ಅಂಗಾರ, ಅನುವಂಶಿಕ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್‌ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ, ಸಮಿತಿ ಸದಸ್ಯರಾದ ಪಡ್ಡಂಬೈಲು ವೆಂಕಟರಮಣ ಗೌಡ, ಕೆ. ಉಪೇಂದ್ರ ಕಾಮತ್‌, ಲಿಂಗಪ್ಪ ಗೌಡ, ಎಂ. ಮೀನಾಕ್ಷಿ ಗೌಡ, ಎನ್‌. ಜಯಪ್ರಕಾಶ್‌ ರೈ, ಎನ್‌.ಎ. ರಾಮಚಂದ್ರ, ಎ. ರಮೇಶ್‌ ಬೈಪಾಡಿತ್ತಾಯ, ಅಕಾಡೆಮಿ ಆಫ್‌ ಎಜುಕೇಶನಲ್‌ ಪ್ರಧಾನ ಕಾರ್ಯದರ್ಶಿ ಡಾ| ರೇಣುಕಾ ಪ್ರಸಾದ್‌ ಕೆ.ವಿ., ಶೋಭಾ ಚಿದಾನಂದ, ಅಕ್ಷಯ್‌ ಕೆ.ಸಿ., ಅಭಿಜ್ಞಾ, ಕೆ.ವಿ. ಹೇಮನಾಥ ಉಪಸ್ಥಿತರಿದ್ದರು.

ಅವಭೃಥ ಸ್ನಾನ
ಜ. 11ರಂದು ಬೆಳಗ್ಗೆ ಆರಾಟ ಬಾಗಿಲು ತೆರೆಯಲಾಯಿತು. ಕವಾಟೋದ್ಘಾಟನೆ ದಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಣ್ಣುಕಾಯಿ ಸೇವೆ ಸಮರ್ಪಿಸಿದರು. ಬೆಳಗ್ಗೆ ಅರಂಬೂರು ವೇದ ಪಾಠಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಿತು. ಸಂಜೆ ಬಜಪ್ಪಿಲ ದೈವಗಳ ಭಂಡಾರ ಆಗಮನವಾಗಿ ಅನಂತರ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ ನಡೆಯಿತು. ಆರಕ್ಷಕ ಠಾಣಾ ಕಟ್ಟೆ, ಗಾಂಧಿನಗರ, ಅರಣ್ಯ ಇಲಾಖೆ, ಕೇರ್ಪಳ, ತಾಲೂಕು ಕಚೇರಿ, ಪಯಸ್ವಿನಿ ನದಿ ಬಳಿಯ ಕಟ್ಟೆ ಪೂಜೆಗಳ ಬಳಿಕ ಅವಭೃತ ಸ್ನಾನ ನಡೆಯಿತು. ಬಳಿಕ ದರ್ಶನ ಬಲಿ, ಬಟ್ಟಲು ಕಾಣಿಕೆ, ಧ್ವಜಾರೋಹಣ ನಡೆಯಿತು. ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ನಡೆಯಿತು. ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಉಳಿದ ದಿನಗಳಲ್ಲಿ ಅನ್ನಪ್ರಸಾದ ವ್ಯವಸ್ಥೆ ಇದ್ದರೂ, ಸಾಮೂಹಿಕ ಅನ್ನಪ್ರಸಾದಕ್ಕೆ ಅಪಾರ ಭಕ್ತರು ಆಗಮಿಸಿದ್ದಾರೆ. ದೇವಾಲಯದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

ಇಂದು ಜಾತ್ರೆ ಸಂಪನ್ನ
ಡಿ. 27ರಂದು ಗೊನೆ ಮುಹೂರ್ತದೊಂದಿಗೆ ಆರಂಭಗೊಂಡ ಜಾತ್ರಾ ಸಂಭ್ರಮ ಜ. 12ರಂದು ಮುಕ್ತಾಯಗೊಳ್ಳಲಿದೆ. ಶುಕ್ರವಾರ ಮಧ್ಯಾಹ್ನ ಸಂಪ್ರೋಕ್ಷಣೆ, ಮಂತ್ರಾಕ್ಷತೆ ನಡೆದು ಜಾತ್ರೆ ಸಂಪನ್ನಗೊಳ್ಳಲಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Punjalkatte: ಲಾರಿ-ಸ್ಕೂಟರ್‌ ಢಿಕ್ಕಿ; ಸಹಸವಾರ ಸಾವು

Puttur: ಎಂಡೋ ಬಾಧಿತ ಯುವತಿ ನಿಧನ

Puttur: ಎಂಡೋ ಬಾಧಿತ ಯುವತಿ ನಿಧನ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್

1-saddsa

Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.