ಉಳಾಯಿಬೆಟ್ಟು ವಿಶೇಷ ಗ್ರಾಮಸಭೆ
Team Udayavani, Jan 12, 2018, 11:21 AM IST
ಉಳಾಯಿಬೆಟ್ಟು : ಉದ್ಯೋಗ ಚೀಟಿ ಹೊಂದಿದ ಕೆಲ ಮಹಿಳೆಯರು ಮಾಹಿತಿ ಕೊರತೆಯಿಂದ ದಾಖಲೆ ಸಲ್ಲಿಸದಿರುವುದರಿಂದ ಕಾಮಗಾರಿ ನಡೆದರೂ ಹಣ ಸಿಕ್ಕಿಲ್ಲವೆಂದು ಇಲ್ಲಿನ ಗ್ರಾ.ಪಂ.ನ ವಿಶೇಷ ಗ್ರಾಮಸಭೆಯಲ್ಲಿ ಕೆಲವು ಮಹಿಳೆಯರು ತಮ್ಮ ಸಮಸ್ಯೆ ಹೇಳಿಕೊಂಡರು.
ಉಳಾಯಿಬೆಟ್ಟು ಗ್ರಾ.ಪಂ.ನ ದ್ವಿತೀಯ ಹಂತದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋ ಧನ ವಿಶೇಷ ಗ್ರಾಮ ಸಭೆಯು ಪಂ.ಸಭಾಭವನದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಬಗ್ಗೆ ಗ್ರಾ.ಪಂ. ಸಿಬಂದಿ ಹಾಗೂ ಉದ್ಯೋಗ ಚೀಟುದಾರರಲ್ಲಿ ಹೊಂದಾಣಿಕೆ ಇಲ್ಲದೇ ಇರುವುದು ಕಂಡು ಬಂದಿದೆ. ಉದ್ಯೋಗ ಖಾತರಿ ಯೋಜನೆಯಡಿ ಫೈಲ್, ಎನ್ಎಂಆರ್, ಫೋಟೋವನ್ನು ಬೇರೆ ಬೇರೆ ಸಿಬಂದಿ ಮಾಡುತ್ತಿರುವುದು ಈ ಸಮಸ್ಯೆಗಳಿಗೆ ಕಾರಣ. ಇನ್ನುಮುಂದೆ ಒಬ್ಬರೇ ಇದನ್ನು ನಿರ್ವಹಿಸಬೇಕು ಎಂದರು.
12 ಕಾಮಗಾರಿ ಪೂರ್ಣ
ತಾಲೂಕು ಸಂಯೋಜಕಿ ಪವಿತ್ರಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಪರಿಶೋಧನೆಯಲ್ಲಿ ಉದ್ಯೋಗ ಚೀಟಿಯಲ್ಲಿ ವಿವರ ನಮೂದಿಸಿಲ್ಲ. ಉದ್ಯೋಗ ಚೀಟಿ ನವೀಕರಿಸಿಲ್ಲ. ಎಂಜಿನಿಯರ್ ದಿನಾಂಕ ನಮೂದಿಸಿಲ್ಲ. ಅಧ್ಯಕ್ಷ ಹಾಗೂ ಪಿಡಿಒ ಸಹಿ ಇಲ್ಲ. 8 ಕಡೆಗಳಲ್ಲಿ ನಾಮಫಲಕ ಇಲ್ಲ ಎಂದು ಪವಿತ್ರಾ ತಿಳಿಸಿದರು. 878 ಉದ್ಯೋಗ ಚೀಟಿ ಹೊಂದಿದ್ದಾರೆ. ಅದರಲ್ಲಿ 460 ಸಕ್ರಿಯ ಉದ್ಯೋಗ ಚೀಟಿ ಹೊಂದಿದ್ದಾರೆ. 24 ಗ್ರಾ.ಪಂ. 3 ತೋಟಗಾರಿಕ ಇಲಾಖೆ ಒಟ್ಟು 27 ಕಾಮಗಾರಿಗಳು ನಡೆದಿದೆ. 12 ಕಾಮಗಾರಿಗಳು ಮುಗಿದಿವೆ. ಒಟ್ಟು ರೂ. 1,49,980 ವೆಚ್ಚವಾಗಿದೆ ಎಂದರು.
ತೋಟಗಾರಿಕೆ ಇಲಾಖಾಧಿಕಾರಿ ಪ್ರಕಾಶ್ ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ಸೌಮ್ಯಾ ಪಂಡಿತ್ ಉಪಸ್ಥಿತರಿದ್ದರು. ಪಿಡಿಒ ರಾಜೇಂದ್ರ ಶೆಟ್ಟಿ ಸ್ವಾಗತಿಸಿ, ಗ್ರಾಮ ಸಂಪನ್ಮೂಲ ವ್ಯಕ್ತಿ ಸುನೀತಾ ನಿರೂಪಿಸಿದರು. ಕಾರ್ಯದರ್ಶಿ ರಾಮಪ್ಪ ವಂದಿಸಿದರು.
ಪ್ರೋತ್ಸಾಹಿಸಿ
ಮಾಹಿತಿ ಕೊರತೆಯಿಂದ ಕೆಲವರಿಗೆ ತೊಂದರೆಯಾಗಿದೆ. ಉದ್ಯೋಗ ಖಾತರಿ ಲಾಭದ ಬಗ್ಗೆ ಇನ್ನೊಬ್ಬರಿಗೆ ಹೇಳಿ ಪ್ರೋತ್ಸಾಹಿಸಬೇಕು. ಹೆಚ್ಚು ಕಾಮಗಾರಿಗಳು ಆಗಬೇಕು. ಪಂ.ನ 14ನೇ ಹಣಕಾಸು ನಿಧಿಯಿಂದ ಹೆಚ್ಚು ಅಭಿವೃದ್ಧಿ ಕಾಮಗಾರಿಗಳು ಸಾಧ್ಯವಿಲ್ಲ.
– ವಸಂತ ಕುಮಾರ್
ಗ್ರಾ.ಪಂ.ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.