ಪ್ರೊಟೀನ್ ಇಲ್ಲದಿದ್ದರೆ ಕಣ್ಣೀರೂ ಇಲ್ಲ: ಎಡಾ ಯೊನಾಥ್
Team Udayavani, Jan 12, 2018, 11:44 AM IST
ಮಹಾನಗರ: ಜೀವಕೋಶಗಳಲ್ಲಿರುವ ರೈಬೋಸೋಮುಗಳು ಹಸಿವು, ತೀವ್ರ ಚಳಿ ಇತ್ಯಾದಿ ಒತ್ತಡದ ಅವಧಿಯಲ್ಲಿ ಶಿಸ್ತುಬದ್ಧವಾಗಿ ಕೋಶಗಳ ಒಳಭಾಗದಲ್ಲಿ ಮುದುಡಿ ಸೇರಿಕೊಂಡು ಸ್ಥಿರವಾಗಿರುತ್ತವೆ ಎಂದು 2009ನೇ ಸಾಲಿನಲ್ಲಿ ರಸಾಯನ ಶಾಸ್ತ್ರದ ನೋಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಇಸ್ರೇಲಿನ ಡಾ| ಎಡಾ ಇ. ಯೊನಾಥ್ ಹೇಳಿದ್ದಾರೆ. ನಗರದ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋ ಜಿಸಿದ 5 ದಿನಗಳ ಸಹ್ಯಾದ್ರಿ ಸಮಾವೇಶದಲ್ಲಿ ತಮ್ಮ ಸಂಶೋಧನೆಯಾದ ರೈಬೋಸೋಮುಗಳ ಕುರಿತು ಅವರು
ಉಪನ್ಯಾಸ ನೀಡಿದರು.
ಉತ್ತರ ಧ್ರುವದಲ್ಲಿ ವಾಸಿಸುವ ಬಿಳಿ ಕರಡಿಗಳು ಚಳಿಗಾಲದಲ್ಲಿ 6 ತಿಂಗಳುಗಳ ಕಾಲ ಧೀರ್ಘ ನಿದ್ರೆಗೆ ಹೋಗುತ್ತವೆ. ಈ ಅವಧಿಯಲ್ಲಿ ಅವುಗಳು ಆಹಾರ ಸೇವಿಸುವುದಿಲ್ಲ. ಆಗ ಅವುಗಳ ಜೀವ ಕೋಶಗಳ ರೈಬೋಸೋಮುಗಳು ಕೋಶದ ಒಳಭಾಗದಲ್ಲಿ ಸೇರಿಕೊಂಡು ಹರಳುಗಟ್ಟುತ್ತವೆ ಮತ್ತು ಸ್ಥಿರವಾಗಿರುತ್ತವೆ. ಇಲ್ಲಿ ಆ ಪ್ರಾಣಿಗಳು ಅನುಭವಿಸುವ ಕಾಲಮಾನದ ಒತ್ತಡವಾದ ತೀವ್ರ ಚಳಿಯು ನಿಗದಿತ ಮತ್ತು ನಿಯಮಿತ ಅವಧಿಯಲ್ಲಿ ರೈಬೋಸೋಮುಗಳು ಕೋಶದ ಒಳಭಾಗದಲ್ಲಿ ಸ್ಥಿರವಾಗಿ ಮುದುಡಿಕೊಂಡಿರುವಂತೆ ಮಾಡುತ್ತದೆ. ಆ ಪ್ರಾಣಿಗಳು ನಿದ್ದೆಯಿಂದೆದ್ದ ಬಳಿಕ ಮತ್ತೆ ಕ್ರಿಯಾಶೀಲವಾಗಿ ಪ್ರೊಟೀನುಗಳನ್ನು ತಯಾರಿಸುತ್ತವೆ ಎಂದರು.
ಸಾಧನೆ ಪ್ರೇರಣೆಯಾಗಲಿ
ಸಹ್ಯಾದ್ರಿ ಪ್ರತಿಷ್ಠಾನದ ಅಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿ, ನೋಬೆಲ್ ಪ್ರಶಸ್ತಿ ಪಡೆದವರನ್ನು ತಾವು ನೋಡುವಾಗ 45 ವರ್ಷಗಳು ಕಳೆದಿದ್ದವು. ಅವರ ಭಾಷಣಗಳು ವಿದ್ಯಾರ್ಥಿಗಳಿಗೆ ಪೂರ್ಣವಾಗಿ ಅರ್ಥವಾಗದಿದ್ದರೂ ಅವರ ಸಾಧನೆ ಪ್ರೇರಣೆಯಾಗಲಿ ಎಂದರು. ಕೇಂದ್ರ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಿ.ಪಿ. ಅಗರ್ವಾಲ್ ತ್ಯಾಜ್ಯ ನಿರ್ವಹಣೆ ಬಗ್ಗೆ ಉಪನ್ಯಾಸ ನೀಡಿದರು. ಡಾ| ಶಂಕರ ಕೆ. ಪ್ರಸಾದ್ ಕಾರ್ಯಕ್ರಮದ ಸಮನ್ವಯಕಾರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.