ಯೋಗಾಭ್ಯಾಸದಿಂದ ಆರೋಗ್ಯಯುತ ಜೀವನ
Team Udayavani, Jan 14, 2018, 11:42 AM IST
ಬೆಂಗಳೂರು: ಯೋಗಾಭ್ಯಾಸದಿಂದ ಮನುಷ್ಯ ಸದಾ ಆರೋಗ್ಯಯುತ ಜೀವನ ನಡೆಸಬಹುದಾಗಿದೆ ಎಂದು ಪ್ರಶಾಂತಿ ಕುಟೀರಂನ ನಾಗೇಂದ್ರ ಗುರೂಜಿ ತಿಳಿಸಿದ್ದಾರೆ.
ಸ್ವಾಮಿ ವಿವೇಕಾನಂದ ಅನುಸಂಧಾನ ಸಂಸ್ಥಾನ (ಎಸ್. ವ್ಯಾಸ) ಸ್ವಾಯತ್ತ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯೋಗ ಮಾಡುವುದರಿಂದ ಆರೋಗ್ಯವಂತರಾಗುವ ಜತೆಗೆ ಸಂತೃಪ್ತಿಯ ಜೀವನ ನಡೆಸಬಹುದು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಭೋಪಾಲ್ನಿಂದ ಆಗಮಿಸಿದ್ದ ಸಾಧ್ವಿ ಸನ್ಯಾಸಿನಿ ಮಾತನಾಡಿ, ಯೋಗಾಭ್ಯಾಸದಿಂದ ಪ್ರತಿಯೊಬ್ಬರೂ ಚಿರಯುವಕರಾಗುತ್ತಾರೆ. ಜತೆಗೆ ವಯಸ್ಸಿನ ಹಂಗಿಲ್ಲದೆ ಪ್ರತಿಯೊಬ್ಬರೂ ಉತ್ಸಾಹ ಹಾಗೂ ಆರೋಗ್ಯವಂತರಾಗಿರಬಹುದು ಎಂದರು.
ಕಾರ್ಯಕ್ರಮದಲ್ಲಿ ಪ್ರಶಾಂತಿ ಕುಟೀರಂನ ದೀದಿ ನಾಗರತ್ನ, ರಘರಾಮ್, ಲೇಖಕಿ ವೈ.ಕೆ.ಸಂಧ್ಯಾ ಶರ್ಮ, ನೃತ್ಯ ಕಲಾವಿದೆ ಸಿ.ಎಸ್.ವೀಣಾ ಹಾಗೂ ಚಿಕ್ಕ ಹೆಜ್ಜಾಜಿ ಮಹದೇವ್ ಸೇರಿ ಪ್ರಮುಖ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ನಂತರ ಕರ್ಮಯೋಗ, ಭಕ್ತಿ ಯೋಗ ಮತ್ತು ಜ್ಞಾನಯೋಗಗಳ ನೆಲೆಯ ಮೂರು ಘಟ್ಟಗಳನ್ನು ಕಲಾವಿದೆ ವೀಣಾ ಶೇಷಾದ್ರಿ ಅವರು ಕೃಷ್ಣ ಕಥಾನಕದ ಮೂಲಕ ಭಕ್ತಿಪೂರಿತ ಭರತನಾಟ್ಯ ನೃತ್ಯಾರ್ಪಣೆ ಸಲ್ಲಿಸಿದರು. ನಾಗೇಂದ್ರ ಗೂರೂಜಿ ಯೋಗಾಭ್ಯಾಸ ಹೇಳಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.