ಶ್ರೀಗಳ ಮೇಲಿನ ಹಲ್ಲೆ ಖಂಡನೆ
Team Udayavani, Jan 19, 2018, 11:53 AM IST
ಮೈಸೂರು: ಶ್ರೀ ನಿಜಶರಣ ಅಂಬಿಗ ಪೀಠದ ಚೌಡಯ್ಯನವರ ಗುರುಪೀಠದ ಶ್ರೀ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿ ಅವರನ್ನು ಅವಮಾನಿಸಿ, ಹಲ್ಲೆ ಮಾಡಿರುವುದನ್ನು ಖಂಡಿಸಿ ಮೈಸೂರು ಜಿಲ್ಲಾ ಗಂಗಾಮತಸ್ಥರ ಸಂಘದವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪ ಗಂಗಾಮತ ಸಮಾಜದ ಬಂಧುಗಳ ಶ್ರದ್ಧಾ ಕೇಂದ್ರವಾಗಿದೆ. ಆದರೆ, ಜ.14ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಗುರುಪೀಠದ ಶ್ರೀ ಶಾಂತ ಭೀಷ್ಮ ಚೌಡಯ್ಯ ಸ್ವಾಮೀಜಿಗಳು ಅಂಬಿಗರ ಚೌಡಯ್ಯ ಅವರ ಐಕ್ಯ ಮಂಟಪಕ್ಕೆ ಪೂಜೆ ಸಲ್ಲಿಸಲು ತೆರಳಿದಾಗ
ಚೌಡಯ್ಯ ದಾನಪುರದ ಶ್ರೀ ಚಿತ್ರ ಶೇಖರಚಾರ್ಯ ಸ್ವಾಮೀಜಿ ತಮ್ಮ ಬೆಂಬಲಿಗರೊಂದಿಗೆ ಭೀಷ್ಮ ಚೌಡಯ್ಯ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿ, ಕಾರನ್ನು ಜಖಂಗೊಳಿಸಿದ್ದಾರೆ. ಅಲ್ಲದೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪದ ಮೇಲೆ ಕಾಲಿಟ್ಟು ಗಂಗಾಮತಸ್ಥರ ಧಾರ್ಮಿಕ ಬಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ.
ಹೀಗಾಗಿ ಶ್ರೀ ಚಿತ್ರಶೇಖರಚಾರ್ಯ ಸ್ವಾಮೀಜಿ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷರಾದ ಪ್ರೊ.ಎಚ್.ಎಂ.ವಸಂತಮ್ಮ, ಪ್ರಧಾನ ಕಾರ್ಯದರ್ಶಿ ಆರ್.ರಾಜು, ಖಜಾಂಚಿ ನಾರಾಯಣ ಲೋಲಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್
Puttur: ಪ್ರೀ ವೆಡ್ಡಿಂಗ್ ಶೂಟ್ಗೂ ಭಟ್ಟರ ಅಡುಗೆ ಘಮ!
World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ
BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ
Devara: ಹೇಗಿದೆ ಜೂ.ಎನ್ಟಿಆರ್ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.