ಮಹಿಳಾ ಪೇದೆಯ ಬದುಕು-ಬವಣೆ


Team Udayavani, Jan 19, 2018, 1:06 PM IST

19-52.jpg

ಪ್ರಿಯಾಂಕಾ ಉಪೇಂದ್ರ ಅವರು “ಸೆಕೆಂಡ್‌ ಹಾಫ್’ ಎಂಬ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದು ಪೊಲೀಸ್‌ ಪೇದೆಯ ಕಥೆಯಾದ್ದರಿಂದ ಚಿತ್ರದ ಟ್ರೇಲರ್‌ ರಿಲೀಸ್‌ಗೆ ಪೊಲೀಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರನ್ನು ಚಿತ್ರತಂಡ ಆಹ್ವಾನಿಸಿತ್ತು. ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿದ ರೂಪಾ ಅವರು, “ಚಿತ್ರದ ಟ್ರೇಲರ್‌ ಚೆನ್ನಾಗಿದೆ. ನಿರ್ದೇಶಕರು ಒಳ್ಳೆಯ ಕಥೆ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿ ಪೇದೆಗಳ ಪಾತ್ರ ಕೂಡಾ ಪ್ರಮುಖವಾಗಿರುತ್ತದೆ. ಪ್ರಮುಖ ಪ್ರಕರಣವನ್ನು ಭೇದಿಸುವಲ್ಲಿ ಅವರು ಕೂಡಾ ಶ್ರಮಪಟ್ಟಿರುತ್ತಾರೆ. ಈಗ ಅಂತಹ ಪೇದೆಗಳ ಅದರಲ್ಲೂ ಮಹಿಳಾ ಪೇದೆಯ ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಈ ಚಿತ್ರ ಮತ್ತಷ್ಟು ಮಹಿಳೆಯರು ಪೊಲೀಸ್‌ ಇಲಾಖೆಯೆಡೆ ಬರುವಂತೆ ಮಾಡಲಿ’ ಎಂದು ಶುಭ ಹಾರೈಸಿದರು.

ಪ್ರಿಯಾಂಕಾ ಉಪೇಂದ್ರ ಅವರಿಗೆ ಒಂದು ತಿಂಗಳ ಕಾಲ ಪೊಲೀಸ್‌ ಯುನಿಫಾರಂ ಹಾಕಿದ್ದು ಹೊಸ ಅನುಭವಂತೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸಿದ್ದಾಗಿ ಹೇಳಿದ ಪ್ರಿಯಾಂಕಾ ಅವರು, ಚಿತ್ರದ ಟ್ರೇಲರ್‌ ಅನ್ನು ರೂಪಾ ಅವರು ಬಿಡುಗಡೆ ಮಾಡಿದ್ದು ಖುಷಿ ಕೊಟ್ಟಿದೆ ಎಂದರು. ಈ ಚಿತ್ರವನ್ನು ಯೋಗಿ ದೇವಗಂಗೆ ನಿರ್ದೇಶಿಸಿದ್ದಾರೆ. ಅವರಿಗೆ ಈ ಚಿತ್ರ ಮಾಡಲು ರೂಪಾ ಮೌದ್ಗಿಲ್‌ ಪ್ರೇರಣೆಯಂತೆ. ರೂಪಾ ಅವರು ಬರೆದ “ಸಿನಿಮಾವಲ್ಲ ಪೊಲೀಸರ ಬದುಕು’ ಎಂಬ ಲೇಖನದಿಂದ ಪ್ರೇರೇಪಿತರಾಗಿ ಈ ಸಿನಿಮಾ ಮಾಡಿದ್ದಾಗಿ ಹೇಳಿಕೊಂಡರು. ಚಿತ್ರದಲ್ಲಿ ಮಹಿಳಾ ಪೇದೆಯೊಬ್ಬರು ಪಡುವ ಕಷ್ಟ ಹಾಗೂ ಆ ನಂತರ ನಡೆಯುವ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರಂತೆ. ಇಲ್ಲಿ ಪೊಲೀಸ್‌ ಇಲಾಖೆಗೆ ಉಪಯೋಗವಾಗುವಂತಹ ಸಾಕಷ್ಟು ಅಂಶಗಳನ್ನು ಕೂಡಾ ಹೇಳಿದ್ದಾರಂತೆ. ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ಕೂಡಾ ನಟಿಸಿದ್ದಾರೆ. ತಮ್ಮ ಚಿಕ್ಕಮ್ಮನೊಂದಿಗೆ ನಟಿಸಿದ ಅನುಭವದ ಬಗ್ಗೆ ಹೇಳಿಕೊಂಡರು. ಇಲ್ಲಿ ಉಪೇಂದ್ರ ಅವರು ಒಂದು ಹಾಡು ಹಾಡಿದ್ದು, ಆ ಹಾಡಿಗೆ ನಿರಂಜನ್‌ ಡ್ಯಾನ್ಸ್‌ ಮಾಡಿದ್ದಾರೆ. ಚಿತ್ರಕ್ಕೆ ಚೇತನ್‌ ಸೋಸ್ಕಾ ಸಂಗೀತ ನೀಡಿದ್ದಾರೆ.

ಈ ಚಿತ್ರವನ್ನು ನಾಗೇಶ್‌ ನಿರ್ಮಿಸಿದ್ದಾರೆ. ನಾಗೇಶ್‌ ಆರಂಭದಲ್ಲಿ “ಗಾಂಧಿ ನೋಟು’ ಎಂಬ ಸಿನಿಮಾ ಮಾಡಲು ಹೊರಟಿದ್ದರಂತೆ. ಆದರೆ, ಇವರ ಸಿನಿಮಾ ಸೆಟ್ಟೇರಲು ಕೆಲ ದಿನ ಇರುವಾಗ ನೋಟ್‌ ಬ್ಯಾನ್‌ ಆಗಿದೆ. ಸಿನಿಮಾದಲ್ಲೂ ಅದೇ ಕಥೆ ಇರುವುದರಿಂದ ಅದು ವಕೌìಟ್‌ ಆಗೋದಿಲ್ಲ ಎಂದು ಅದನ್ನು ಕೈ ಬಿಟ್ಟು “ಸೆಕೆಂಡ್‌ ಹಾಫ್’ ಕೈಗೆತಿಕೊಂಡಿದ್ದಾಗಿ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.