ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಕ್ರಿಕೆಟ್‌ ಕೋಚ್‌ ಬಂಧನ


Team Udayavani, Jan 30, 2018, 12:12 PM IST

sexual-harasse.jpg

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಡುವ ಮಟ್ಟಿಗೆ ಉತ್ತಮ ತರಬೇತಿ ನೀಡುವುದಾಗಿ ಹೇಳಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಡಗು ಮೂಲದ ಕ್ರಿಕೆಟ್‌ ಕೋಚ್‌ನನ್ನು ಫೋಕ್ಸೋ ಕಾಯ್ದೆಯಡಿ ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಕೊಡಗು ಜಿಲ್ಲೆಯ ನಾಸಿರ್‌ (40) ಬಂಧಿತ. ಆರೋಪಿ ಕ್ರಿಕೆಟ್‌ ಹೇಳಿಕೊಂಡುವ ನೆಪದಲ್ಲಿ ಬಾಲಕನ ಜತೆ ಸಲುಗೆ ಬೆಳೆಸಿಕೊಂಡಿದ್ದ ಆರೋಪಿ, ಶನಿವಾರ ಸಂಜೆ ಜಿಕೆವಿಕೆ ಆವರಣದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಮನೆಗೆ ತೆರಳಿದ ಬಾಲಕ ಮಂಕಾಗಿರುವುದನ್ನು ಕಂಡು ಅನುಮಾನಗೊಂಡ ಪೋಷಕರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಗಿನ ನಾಸಿರ್‌ ಜಾಲಹಳ್ಳಿಯಲ್ಲಿರುವ ಮೈದಾನವೊಂದರಲ್ಲಿ ಕಳೆದ 8 ವರ್ಷಗಳಿಂದ ಸ್ಥಳೀಯ ಬಾಲಕರಿಗೆ ಕ್ರಿಕೆಟ್‌ ತರಬೇತಿ ನೀಡುತ್ತಿದ್ದ. ವೀಕೆಂಡ್‌ನ‌ಲ್ಲಿ ಕ್ರಿಕೆಟ್‌ ಕಲಿಯಲು ಬರುತ್ತಿದ್ದ ಬಾಲಕನ ಜತೆ ನಾಸಿರ್‌ ಅತಿಯಾದ ಸಲುಗೆ ಬೆಳೆಸಿಕೊಂಡಿದ್ದ. ಆದರೆ, ಆರೋಪಿ ಒಳಮರ್ಮ ಬಾಲಕನಿಗೆ ತಿಳಿದಿರಲ್ಲಿಲ್ಲ.

ಬಲಕನ ಮುಗ್ಧತೆಯನ್ನೇ ದುರುಪಯೋಗ ಪಡಿಸಿಕೊಂಡ ನಾಸಿರ್‌ ಶನಿವಾರ ಸಂಜೆ ತರಬೇತಿ ಮುಗಿದ ಬಳಿಕ ಬೇರೆ ಬಾಲಕರನ್ನು ಮನೆಗೆ ಕಳುಹಿಸಿ ಈ ಬಾಲಕನನ್ನು ಮಾತ್ರ ತನ್ನೊಂದಿಗೆ ಇರಿಸಿಕೊಂಡಿದ್ದ. ಬಳಿಕ ಪುಸಲಾಯಿಸಿ ಜಿಕೆವಿಕೆ ಆವರಣಕ್ಕೆ ಕರೆದೊಯ್ದಿದ್ದಾನೆ. ಪೊದೆಯೊಂದರ ಬಳಿ ತಬ್ಬಿಕೊಳ್ಳಲು ಯತ್ನಿಸಿದ್ದಾನೆ. ಬಳಿಕ ಬಟ್ಟೆ ಬಿಚ್ಚಲು ಹೇಳಿದಾಗ ಬಾಲಕ ಪ್ರತಿರೋಧವೊಡ್ಡಿ ತಪ್ಪಿಸಿಕೊಂಡು ಸ್ಥಳದಿಂದ ಓಡಿ ಬಂದಿದ್ದಾನೆ.

ನಂತರ ಮನೆಗೆ ತೆರಳಿದ ಬಾಲಕ ರಾತ್ರಿ ಊಟ ಮಾಡಿಲ್ಲ. ಆತಂಕಗೊಂಡ ಪೋಷಕರು ಮಗನನ್ನು ವಿಚಾರಿಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾನೆ. ಭಾನುವಾರ ಬೆಳಗ್ಗೆ ಯಲಹಂಕ ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ದೂರು ದಾಖಲಾದ ಅರ್ಧಗಂಟೆಯಲ್ಲೇ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಿಂದೊಮ್ಮೆ ಅಮಾನತುಗೊಂಡಿದ್ದ ನಾಸಿರ್‌: ನಾಸಿರ್‌ ಈ ಮೊದಲು ಆರ್‌.ಟಿ.ನಗರದ ಶಾಲೆಯೊಂದರಲ್ಲಿ ಕ್ರಿಕೆಟ್‌ ಕೋಚ್‌ ಆಗಿದ್ದ. ಆಗಲೂ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು. ನಂತರ ಕ್ರಿಕೆಟ್‌ ಅಕಾಡೆಮಿಯೊಂದು ಈತನನ್ನು ಕೋಚ್‌ ಆಗಿ ನೇಮಕ ಮಾಡಿಕೊಂಡಿತ್ತು.

ಈತನ ಬಗ್ಗೆ ಮಾಹಿತಿ ಗೊತ್ತಿದ್ದ ಹಿರಿಯ ಕ್ರಿಕೆಟ್‌ ಆಟಗಾರರು ತೆಗೆಯಲು ಸೂಚಿಸಿದರು. ಆದರೂ ಅಕಾಡೆಮಿ ಇಟ್ಟುಕೊಂಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ. ನಾಸಿರ್‌ ವಿರುದ್ಧ ಇದೇ ರೀತಿಯ ಇನ್ನೂ ಹಲವು ಆರೋಪಗಳಿರುವ ಬಗ್ಗೆ ಅನುಮಾನವಿದ್ದು, ವಶಕ್ಕೆ ಪಡೆದು ವಿಚಾರಣೆ ಮುಂದುವರಿಸುವುದಾಗಿ ಯಲಹಂಕ ಠಾಣೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.