ಹೆಲಿಪ್ಯಾಡ್‌ ನಿರ್ಮಾಣಕ್ಕೆ ಪಾಲಿಕೆಯಲ್ಲೇ ಅಪಸ್ವರ


Team Udayavani, Jan 30, 2018, 12:13 PM IST

bbmp2.jpg

ಬೆಂಗಳೂರು: ಬಿಬಿಎಂಪಿಯ ಎಂಟು ವಲಯಗಳಲ್ಲಿ ಏರ್‌ ಆ್ಯಂಬುಲೆನ್ಸ್‌ ಹಾಗೂ ಗಣ್ಯರಿಗೆ ಅನುಕೂಲವಾಗಲು ಹೆಲಿಪ್ಯಾಡ್‌ ನಿರ್ಮಿಸುವ ಯೋಜನೆಗೆ ಪಾಲಿಕೆಯ ಸದಸ್ಯರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ನಗರದಲ್ಲಿ ತೀವ್ರ ಸಂಚಾರ ದಟ್ಟಣೆಯಿಂದ ರೋಗಿಗಳು ತುರ್ತು ಸಂದರ್ಭದಲ್ಲಿ ಶೀಘ್ರವಾಗಿ ಆಸ್ಪತ್ರೆಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಜತೆಗೆ ನಗರಕ್ಕೆ ಗಣ್ಯರು ಆಗಮಿಸಿದಾಗ ಸಂಚಾರ ದಟ್ಟಣೆಯಾಗಿ ಜನರು ತೊಂದರೆ ಅನುಭವಿಸುತ್ತಿದ್ದು, ಅದನ್ನು ತಪ್ಪಿಸಲು ಎಂಟು ವಲಯಗಳಲ್ಲಿ ಹೆಲಿಪ್ಯಾಡ್‌ ನಿರ್ಮಿಸಲು ಪಾಲಿಕೆ ಮುಂದಾಗಿದೆ.

ಆದರೆ, ನಗರದಲ್ಲಿನ 20ಕ್ಕಿಂತ ಹೆಚ್ಚು ಮಹಡಿಗಳ ಎಲ್ಲ ಕಟ್ಟಡಗಳಲ್ಲಿ ಹೆಲಿಪ್ಯಾಡ್‌ ನಿರ್ಮಿಸುವುದು ಕಡ್ಡಾಯವಾಗಿದ್ದು, ಅದರಂತೆ ನಗರದಲ್ಲಿರುವ ನೂರಾರು ಕಟ್ಟಡಗಳಲ್ಲಿ ಹೆಲಿಪ್ಯಾಡ್‌ಗಳಿವೆ. ಆದರೆ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಡಳಿತ ಅನಗತ್ಯವಾಗಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. 

ಪಾಲಿಕೆಯಲ್ಲಿ ಲಭ್ಯವಿರುವ ಹೆಲಿಪ್ಯಾಡ್‌ಗಳನ್ನು ಬಳಸಲು ಆದ್ಯತೆ ನೀಡದ, ಮೇಯರ್‌ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅನಗತ್ಯವಾಗಿ ಎಂಟು ವಲಯಗಳಲ್ಲಿ ಹೆಲಿಪ್ಯಾಡ್‌ ನಿರ್ಮಿಸಲು ಕೌನ್ಸಿಲ್‌ ಅನುಮೋದನೆ ಪಡೆಯಲು ಮುಂದಾಗಿದ್ದಾರೆ. ನಿಯಮದಂತೆ ವಿಷಯ ಸೂಚಿಯಲ್ಲಿ ಎಷ್ಟು ವಿಸ್ತೀರ್ಣ ಹಾಗೂ ಎಷ್ಟು ವೆಚ್ಚದಲ್ಲಿ ಹೆಲಿಪ್ಯಾಡ್‌ ನಿರ್ಮಿಸಲಾಗುತ್ತದೆ.

ಈವರೆಗೆ ನಗರದಲ್ಲಿ ಎಷ್ಟು ಮಂದಿ ಏರ್‌ ಆ್ಯಂಬುಲೆನ್ಸ್‌ ಬಳಸಿದ್ದಾರೆ, ಸಾಧಕ-ಬಾಧಕಗಳ ಕುರಿತು ವಿಷಯ ಸೂಚಿಯಲ್ಲಿ ಮಾಹಿತಿ ನೀಡಬೇಕು. ಆದರೆ, ತೆರಿಗೆ ಮತ್ತು ಸ್ಥಾಯಿ ಸಮಿತಿ ಯಾವುದೇ ಮಾಹಿತಿ ನೀಡಿದೆ ವಿಷಯವನ್ನು ಕೌನ್ಸಿಲ್‌ ಮುಂದಿಟ್ಟಿದೆ. 

ಇದರೊಂದಿಗೆ ಹೆಲಿಪ್ಯಾಡ್‌ ನಿರ್ಮಾಣ ಸೇರಿದಂತೆ ಹಲವು ವಿಷಯಗಳ ಅನುಮೋದನೆಗೆ ಮುಂದಾಗಿರುವ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಪಾಲಿಕೆಗೆ ಯಾವುದೇ ಅನುಮತಿ ಪಡೆಯದೆ ನೇರವಾಗಿ ಕೌನ್ಸಿಲ್‌ಗೆ ಕಳುಹಿಸಿರುವುದು ಅನುಮಾನಗಳಿಗೆ ಕಾರಣವಾಗಿದ್ದು, ಅಧಿಕಾರಿಗಳು ಹಾಗೂ ಸ್ಥಾಯಿ ಸಮಿತಿಗಳ ನಡುವಿನ ತಿಕ್ಕಾಟಕ್ಕೆ ಅನುವು ಮಾಡಿಕೊಟ್ಟಿದೆ.

ಆಯುಕ್ತರ ಗಮನಕ್ಕೆ ತರದೆ ನೇರವಾಗಿ ವಿಷಯಗಳನ್ನು ಕೌನ್ಸಿಲ್‌ ಮುಂದಿಟ್ಟು ಅನುಮೋದನೆ ಪಡೆಯಲು ಮುಂದಾಗಿರುವ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಡಳಿತದ ಕ್ರಮಕ್ಕೆ ಸೋಮವಾರ ನಡೆಯಲಿರುವ ಕೌನ್ಸಿಲ್‌ ಸಭೆಯಲ್ಲಿ ವಿರೋಧ ಪಕ್ಷ ಬಿಜೆಪಿ ಹೇಗೆ ಪ್ರತಿಕ್ರಿಯಿಸಲಿದೆ ಎಂಬ ಕುತೂಹಲ ಮೂಡಿಸಿದೆ. 

ಹೆಲಿಪ್ಯಾಡ್‌ ಅನವಶ್ಯಕ: ನಗರದ ಹಲವಾರು ಕಟ್ಟಡಗಳಲ್ಲಿ ಹೆಲಿಪ್ಯಾಡ್‌ಗಳು ಲಭ್ಯವಿದೆ. ಹೀಗಾಗಿ ಪತ್ಯೇಕ ಹೆಲಿಪ್ಯಾಡ್‌ಗಳಿಗೆ ಸಾರ್ವಜನಿಕ ಹಣ ಪೋಲು ಮಾಡುವುದು ಬೇಡ ಎಂದು ಹಿಂದೆ ಪಾಲಿಕೆಯಲ್ಲಿ  ವಿರೋಧ ಪಕ್ಷ ನಾಯಕ ಪದ್ಮನಾಭರೆಡ್ಡಿ ತಿಳಿಸಿದ್ದರು.

ನೇರವಾಗಿ ಮಂಡಿಸುತ್ತಿರುವ ವಿಷಯಗಳು 
-ಮಹದೇವಪುರ ಹಾಗೂ ಬೊಮ್ಮನಹಳ್ಳಿ ವಲಯದ ಎಲ್ಲ ಆಸ್ತಿಗಳು, ಕಟ್ಟಡಗಳ ತಪಾಸಣೆ 
-ಏರ್‌ ಆ್ಯಂಬುಲೆನ್ಸ್‌ಗಳಿಗಾಗಿ 8 ವಲಯದಲ್ಲಿ ತಲಾ ಹೆಲಿಪ್ಯಾಡ್‌ ನಿರ್ಮಾಣ
-ಸ್ವಾತಂತ್ರ್ಯ ಉದ್ಯಾನ ಪ್ರವಾಸೋದ್ಯಮ ಇಲಾಖೆಗೆ ವಹಿಸುವುದು 
-ಗಾಂಧಿನಗರ, ಎಂ.ಜಿ.ರಸ್ತೆ, ಡಿಸ್ಪೆನ್ಸರಿ ರಸ್ತೆ, ಶಿವಾಜಿನಗರಗಳಲ್ಲಿ ಸ್ವಯಂಚಾಲಿತ ಪೇ ಅಂಡ್‌ ಪಾರ್ಕ್‌ 
-ರಾಜಕಾಲುವೆ ಹಾಗೂ ಕೆರೆಗಳಿಗೆ ತ್ಯಾಜ್ಯ ಸುರಿವ ಟ್ರ್ಯಾಕ್ಟರ್‌ಗಳಿಗೆ 1 ಲಕ್ಷ ರೂ. ಹಾಗೂ ದೊಡ್ಡ ಲಾರಿಗಳಿಗೆ 5 ಲಕ್ಷ ರೂ. ದಂಡ
-34 ಸೆಲ್ಫ್ ಪ್ರೋಫೈಲ್ಡ್‌ ಮೆಕಾನಿಕಲ್‌ ಸ್ವೀಪಿಂಗ್‌ ಯಂತ್ರಗಳ ಖರೀದಿ
-ಗುತ್ತಿಗೆದಾರರ ಬಾಕಿ ಬಿಲ್‌ ಪಾವತಿಗೆ 800 ಕೋಟಿ ರೂ. ಅನುದಾನ ಕೋರಿ ಸರ್ಕಾರಕ್ಕೆ ಮನವಿ 
-ಬೈಕ್‌ ವೀಲಿಂಗ್‌ಗಾಗಿ ಬೆಳ್ಳಹಳ್ಳಿ ಕ್ವಾರಿಯಲ್ಲಿ ರೇಸ್‌ ಟ್ರ್ಯಾಕ್‌ ನಿರ್ಮಾಣ

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.