ಪೋಲಿಯೋ ಮುಕ್ತ ಆಂದೋಲನಕ್ಕೆ ಪೋಷಕರು ಮುಂದಾಗಿ
Team Udayavani, Jan 30, 2018, 12:44 PM IST
ಬನ್ನೂರು: ಪೋಲಿಯೋ ಲಸಿಕೆ ಹಾಕುವ ಮೂಲಕ ಮುಂದೆ ಸಂಭವಿಸುವ ಅಂಗವಿಕಲತೆಯನ್ನು ತಡೆಗಟ್ಟಿ ಮಕ್ಕಳ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೋಷಕರು ನೆರವಾಗಬೇಕು ಎಂದು ಸಮಾಜ ಸೇವಕ ಮಹೇಂದ್ರ ಸಿಂಗ್ಕಾಳಪ್ಪ ತಿಳಿಸಿದರು.
ಬನ್ನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ನಡೆದ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಲಸಿಕೆ ಹಾಕಿದ ನಂತರ ಮಾತನಾಡಿದ ಅವರು, ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಪೋಲಿಯೋ ದೇಶಕ್ಕೆ ದೊಡ್ಡ ಪಿಡುಗಾಗಿದ್ದು, ರೋಟರಿ ಸಂಸ್ಥೆ ಪೋಲಿಯೋ ನಿರ್ಮೂಲನೆಗೆ ಪಣತೊಟ್ಟು ಕೆಲಸ ನಿರ್ವಹಿಸಿ ಇಂದು ಯಶಸ್ಸು ಕಂಡಿದೆ ಎಂದು ತಿಳಿಸಿದರು. ಲಸಿಕೆ ಹಾಕಿಸುವಲ್ಲಿ ಪೋಷಕರ ಪಾತ್ರ ಅತಿ ಮುಖ್ಯವಾಗಿದ್ದು, ನಿಗದಿತ ಅವಧಿಯಲ್ಲಿ ಲಸಿಕೆ ಹಾಕುವ ಮೂಲಕ ಮುಂದೆ ಆಗಬಹುದಾದಂತ ಸಮಸ್ಯೆಯನ್ನು ತಡೆಗಟ್ಟಬಹುದು ಎಂದು ಹೇಳಿದರು.
ಲಸಿಕೆ ತೆಗೆದುಕೊಂಡ ಅರ್ಧ ಗಂಟೆಯವರೆಗೆ ಮಕ್ಕಳಿಗೆ ಎನನ್ನು ಕೊಡಬಾರದು ಎಂದ ಅವರು , ನಂತರ ಆಹಾರ ನೀಡುವಂತೆ ತಿಳಿಸಿದರು. ಪ್ರತಿಯೊಬ್ಬರು ಜಾಗೃತರಾಗಿ ಲಸಿಕೆಯನ್ನು ಮಕ್ಕಳಿಗೆ ನೀಡಿದರೆ ಪೋಲಿಯೋ ಸಂಪೂರ್ಣವಾಗಿ ನಿರ್ಮೂಲನೆ ಆಗುತ್ತದೆ ಎಂದು ಹೇಳಿದರು.
ಇದರಲ್ಲಿ ಪೋಷಕರ ಪಾತ್ರ ಮುಖ್ಯ ಎಂದು ಹೇಳಿದರು. ತಾಲೂಕು ಪಂಚಾಯ್ತಿ ಅಧ್ಯಕ್ಷ ಚಾಮೇಗೌಡ, ಡಾ.ರವಿಕುಮಾರ್, ಪರಮೇಶ, ಕೆಂಪೇಗೌಡ, ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
Priya Shatamarshan: ಇನ್ಸ್ ಪೆಕ್ಟರ್ ಗಿರಿಜಾ ರಿಪೋರ್ಟಿಂಗ್ ಸಾರ್..
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.