ಲುಂಗಿ ಮಾರಿ ದೊಡ್ಡವರಾಗಿ!


Team Udayavani, Feb 2, 2018, 11:40 AM IST

20-19.jpg

ಯುವಕರು ಸ್ವಉದ್ಯೋಗ ಮಾಡಿದರೆ ಭವಿಷ್ಯ ಚೆನ್ನಾಗಿರುತ್ತದೆ ಎಂಬ ಸಂದೇಶವನ್ನು ಸಿನಿಮಾ ತಂಡವೊಂದು ಲುಂಗಿ ಮೂಲಕ ಹೇಳಲು ಹೊರಟಿದೆ! ಲುಂಗಿ ಮತ್ತು ಸ್ವ ಉದ್ಯೋಗಕ್ಕೆ ಏನು ಸಂಬಂಧ ಎಂದು ನೀವು ಕೇಳಬಹುದು. ಹೊಸಬರ ತಂಡ ಇಡೀ ಸಿನಿಮಾದಲ್ಲಿ ಲುಂಗಿಯ ಮಹತ್ವವನ್ನು ಹೇಳಲು ಹೊರಟಿದೆ. ಆ ಸಿನಿಮಾಕ್ಕೆ ಅವರಿಟ್ಟ ಹೆಸರು ಕೂಡಾ “ಲುಂಗಿ’. ಏನಿದು ಚಿತ್ರದ ಟೈಟಲ್‌ ವಿಚಿತ್ರವಾಗಿದೆಯಲ್ಲ ಎಂದು ನೀವಂದುಕೊಳ್ಳಬಹುದು. ಆದರೆ, ಚಿತ್ರತಂಡ ಮಾತ್ರ ಆ ಟೈಟಲ್‌ನಡಿ ಸಿನಿಮಾ ಮಾಡಿ ಖುಷಿಯಾಗಿದೆ. ಮಂಗಳೂರಿನ ಅಕ್ಷಿತ್‌ ಶೆಟ್ಟಿ ಈ ಚಿತ್ರದ ನಿರ್ದೇಶಕರು.

ಇಂಜಿನಿಯರಿಂಗ್‌ ಓದಿರುವ ನಾಯಕನಿಗೆ ಸ್ವಂತ ಉದ್ಯೋಗ ಮಾಡಬೇಕೆಂಬ ಆಸೆ ಇರುತ್ತದೆಯಂತೆ. ಹಾಗಾಗಿ, ತಂದೆ ಕೊಡಿಸಿರುವ ಕೆಲಸಕ್ಕೂ ಹೋಗದೇ ನಿರುದ್ಯೋಗಿಯಾಗಿರುತ್ತಾನಂತೆ. ಇಂತಿಪ್ಪ ನಾಯಕನಿಗೆ ಲವ್‌ ಆಗುತ್ತದೆ. ಜವಾಬ್ದಾರಿಯೂ ಹೆಚ್ಚುತ್ತದೆ. ಹಾಗಾಗಿ, ನಾಯಕ ಲುಂಗಿ ಬಿಝಿನೆಸ್‌ ಆರಂಭಿಸಿ ಅದರಲ್ಲಿ ಉನ್ನತ ಪ್ರಗತಿ ಸಾಧಿಸುತ್ತಾನಂತೆ. ನಿರ್ದೇಶಕರು ಹೇಳುವಂತೆ  ಇದು ಎಲ್ಲಾ ಕಾಲಕ್ಕೂ ಹೊಂದಿಕೆಯಾಗುವಂತಹ ಕಥೆಯಾಗಿದ್ದು, ಯುವಕರು ಸ್ವ ಉದ್ಯೋಗ ಮಾಡಿದರೆ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎಂಬ ಅಂಶದ ಜೊತೆಗೆ ಯಕ್ಷಗಾನ ಕಲೆ ಉಳಿಸಿ ಎಂಬ ಸಂದೇಶವನ್ನು ಹೇಳಲಾಗಿದೆಯಂತೆ.

ಈಗಾಗಲೇ ಎರಡು ತುಳು ಸಿನಿಮಾಗಳನ್ನು ನಿರ್ಮಿಸಿರುವ ಮುಖೇಶ್‌ ಹೆಗ್ಡೆ ಈ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿ ನಿರ್ಮಾಪಕರ ಮಗ ಪ್ರಣವ್‌ ಹೆಗ್ಡೆ ನಾಯಕರಾಗಿ ನಟಿಸಿದ್ದಾರೆ. ಕ್ಯಾಮರಾ ಮುಂದೆ ನಿಲ್ಲುವ ಮೊದಲು “ಒಂದು ಮೊಟ್ಟೆಯ ಕಥೆ’ಯ ರಾಜ್‌ ಬಿ ಶೆಟ್ಟಿಯವರಿಂದ ನಟನೆಯ ತರಬೇತಿ ಪಡೆದಿದ್ದಾರಂತೆ. ಚಿತ್ರದಲ್ಲಿ ನಾಯಕಿಯರಾಗಿ ಅಹಲ್ಯ ಸುರೇಶ್‌ ಹಾಗೂ ರಾಧಿಕಾ ರಾವ್‌ ನಟಿಸಿದ್ದಾರೆ. ಅರ್ಜುನ್‌ ಲೂಯಿಸ್‌ ಕತೆ ಬರೆದು ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರಕ್ಕೆ  ಪ್ರಸಾದ್‌.ಕೆ.ಶೆಟ್ಟಿ ಸಂಗೀತ, ರಾಜ್‌.ಪಿ.ಜಾನ್‌ ಛಾಯಾಗ್ರಹಣ, ಮನು ಶೇಡಿಗಾರ್‌  ಸಂಕಲನವಿದೆ.  ಚಿತ್ರದಲ್ಲಿ  ವಿ.ಮನೋಹರ್‌, ದೀಪಕ್‌ ರೈ, ರೂಪಾ ವರ್ಕಾಡಿ, ಜಯ ಕೃಷ್ಣನ್‌  ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.