ಬೊಳುವಾರು: ಗುಜರಿ ಅಂಗಡಿಯಲ್ಲಿ ಬೆಂಕಿ ದುರಂತ
Team Udayavani, Feb 5, 2018, 2:00 PM IST
ಪುತ್ತೂರು: ನಗರದ ಬೊಳುವಾರಿನ ಉಪ್ಪಿನಂಗಡಿ ರಸ್ತೆಯಲ್ಲಿರುವ ಮನ್ಸೂರ್ ಅವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ರವಿವಾರ ಮಧ್ಯಾಹ್ನ ಬೆಂಕಿ ಆಕಸ್ಮಿಕ ಸಂಭವಿಸಿ ಸುಮಾರು 1ಲಕ್ಷ ರೂ. ಮೌಲ್ಯದ ಹಳೆಯ ಪ್ಲಾಸ್ಟಿಕ್ ಸಾಮಗ್ರಿಗಳು ಸುಟ್ಟು ಹೋಗಿವೆ.
ಪುತ್ತೂರು ಅಗ್ನಿಶಾಮಕ ದಳದ 2 ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿತು. ಅಂಗಡಿಯ ಮೇಲ್ಭಾಗದಿಂದ ವಿದ್ಯುತ್ ಎಲ್ಟಿ ಲೈನ್ ಹಾದು ಹೋಗಿದ್ದು, ಅದರ ಮೇಲೆ ತೆಂಗಿನ ಗರಿ ಬಿದ್ದುದು ಘಟನೆಗೆ ಕಾರಣವಾಗಿದೆ.
ಸ್ಥಳೀಯರು ಪುತ್ತೂರು ವಿದ್ಯುತ್ ಉಪಕೇಂದ್ರಕ್ಕೆ ಮಾಹಿತಿ ನೀಡಿದ್ದು, ಬಳಿಕ ಕೊಂಬೆಟ್ಟು ಮತ್ತು ಬೊಳುವಾರು ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲಾಯಿತು.
ಅಂಗಡಿಯಲ್ಲಿ ದಾಸ್ತಾನಿದ್ದ ಹಳೆಯ ಪ್ಲಾಸ್ಟಿಕ್ ಸಾಮಗ್ರಿಯಲ್ಲಿ ಹೆಚ್ಚಿನ ಪ್ರಮಾಣದ ಸೊತ್ತುಗಳನ್ನು ಶನಿವಾರ ಬೇರೆ ಕಡೆಗೆ ಮಾರಾಟಕ್ಕಾಗಿ ಕೊಂಡೊ ಯ್ಯಲಾಗಿತ್ತು. ದಾಸ್ತಾನು ಕಡಿಮೆ ಇದ್ದ ಕಾರಣ ಬೆಂಕಿಯನ್ನು ಕೂಡಲೇ ನಿಯಂತ್ರಿಸಲು ಸಾಧ್ಯವಾಗಿದೆ.
ಪುತ್ತೂರು ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಓಮನಾ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.